TOP STORIES:

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.


ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲಿನಿಂದ ಕೆಳಗೆ ಬಿದ್ದು ತನ್ನ ಬೆನ್ನುಮೂಳೆಮುರಿತಕ್ಕೊಳಪಟ್ಟು ನಾಲ್ಕು ವರ್ಷದಿಂದ ವೀಲ್ ಚೇರ್ ನಲ್ಲಿ ಓಡಾಡುವ ಸ್ಥಿತಿಯಲ್ಲಿ ಇದ್ದಾರೆ. ಎಷ್ಟೇ ಪ್ರಯತ್ನ ಪಟ್ಟರು ಬೆನ್ನುಮೂಳೆಸರಿಪಡಿಸಲು ಸಾಧ್ಯವಾಗಲಿಲ್ಲ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲವಿದ್ದರು ಇವರ ಕುಟುಂಬದ ಆರ್ಥಿಕಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಇವರ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಲಗಲು ನೀರಿನ ಹಾಸಿಗೆ ಹಾಗೂವೈದ್ಯಕೀಯ ನೆರವು ಇವರಿಗೆ ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ದಿನೇಶ್ ರವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆಮನವಿಯನ್ನು ಮಾಡಿರುತ್ತಾರೆ. ಮನವಿಯನ್ನು ತಕ್ಷಣವೇ ಪರಿಗಣಿಸಿದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದಸದಸ್ಯರು ಇವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗಾಗಿ ಸಹಾಯಧನವನ್ನು ನೀಡಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರಾದ ಶ್ರೀ ಶರತ್ ಪೂಜಾರಿ ಬಜಪೆ, ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರುಗಾಳದ  ಶ್ರೀ ಚಂದ್ರಶೇಖರ್ ಎಂ ಅಮೀನ್, ಚಂದ್ರಪೂಜಾರಿ ಪೆರಾರ, ದಿನೇಶ್ ಬಂಗೇರ, ಸಂಘಟನಾ ಕಾರ್ಯದರ್ಶಿಯಾದ ಶ್ರೀ ಚೇತನ್ ಬಂಗೇರ, ಪೆರ್ಮುದೆ ಸಂಚಾಲಕರಾದ ಕೀರ್ತನ್ ಅಮೀನ್, ಬ್ರಿಜೇಶ್ ಬಜಪೆ, ದೇವಿಪ್ರಸಾದ್ ಬಜಪೆ, ಕಿರಣ್ ಪೂಜಾರಿ ಎಕ್ಕಾರು, ಪ್ರಖ್ಯಾತ್ ಕೆಂಜಾರು ಕಾನ, ಸಂದೇಶ್ ಶೆಟ್ಟಿ ಜೋಕಟ್ಟೆ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ

ಬ್ರಹ್ಮಶ್ರೀ ನಾರಾಯಣ ಗುರುವೇ ನಮಃ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »