TOP STORIES:

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.


ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲಿನಿಂದ ಕೆಳಗೆ ಬಿದ್ದು ತನ್ನ ಬೆನ್ನುಮೂಳೆಮುರಿತಕ್ಕೊಳಪಟ್ಟು ನಾಲ್ಕು ವರ್ಷದಿಂದ ವೀಲ್ ಚೇರ್ ನಲ್ಲಿ ಓಡಾಡುವ ಸ್ಥಿತಿಯಲ್ಲಿ ಇದ್ದಾರೆ. ಎಷ್ಟೇ ಪ್ರಯತ್ನ ಪಟ್ಟರು ಬೆನ್ನುಮೂಳೆಸರಿಪಡಿಸಲು ಸಾಧ್ಯವಾಗಲಿಲ್ಲ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲವಿದ್ದರು ಇವರ ಕುಟುಂಬದ ಆರ್ಥಿಕಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಇವರ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಲಗಲು ನೀರಿನ ಹಾಸಿಗೆ ಹಾಗೂವೈದ್ಯಕೀಯ ನೆರವು ಇವರಿಗೆ ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ದಿನೇಶ್ ರವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆಮನವಿಯನ್ನು ಮಾಡಿರುತ್ತಾರೆ. ಮನವಿಯನ್ನು ತಕ್ಷಣವೇ ಪರಿಗಣಿಸಿದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದಸದಸ್ಯರು ಇವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗಾಗಿ ಸಹಾಯಧನವನ್ನು ನೀಡಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರಾದ ಶ್ರೀ ಶರತ್ ಪೂಜಾರಿ ಬಜಪೆ, ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರುಗಾಳದ  ಶ್ರೀ ಚಂದ್ರಶೇಖರ್ ಎಂ ಅಮೀನ್, ಚಂದ್ರಪೂಜಾರಿ ಪೆರಾರ, ದಿನೇಶ್ ಬಂಗೇರ, ಸಂಘಟನಾ ಕಾರ್ಯದರ್ಶಿಯಾದ ಶ್ರೀ ಚೇತನ್ ಬಂಗೇರ, ಪೆರ್ಮುದೆ ಸಂಚಾಲಕರಾದ ಕೀರ್ತನ್ ಅಮೀನ್, ಬ್ರಿಜೇಶ್ ಬಜಪೆ, ದೇವಿಪ್ರಸಾದ್ ಬಜಪೆ, ಕಿರಣ್ ಪೂಜಾರಿ ಎಕ್ಕಾರು, ಪ್ರಖ್ಯಾತ್ ಕೆಂಜಾರು ಕಾನ, ಸಂದೇಶ್ ಶೆಟ್ಟಿ ಜೋಕಟ್ಟೆ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ

ಬ್ರಹ್ಮಶ್ರೀ ನಾರಾಯಣ ಗುರುವೇ ನಮಃ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »