TOP STORIES:

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..


ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ ಸಂಘಟಿತರನ್ನಾಗಿ ಮಾಡುತ್ತಿರುವ ರಾಕೇಶ್ ಪೂಜಾರಿ ಅಧ್ಯಕ್ಷೆತೆಯ “ಬಿರುವೆರ್ ಕುಡ್ಲ(ರಿ)” ಸಂಘಟನೆಯ ಸ್ಥಾಪಕಾಧ್ಯಕ್ಷರಾದ, ಯುವ ನಾಯಕ “ಉದಯ್ ಪೂಜಾರಿ”ಯವರ ಜನುಮ ದಿನದಂದು(01/06/2020) “ಬೆದ್ರ ಘಟಕ”ದ ಸಂಕಲ್ಪದಂತೆ ಅಸಹಾಯಕರ ಹಸಿವನ್ನು ನೀಗಿಸುವ ಉದ್ದೇಶದಂತೆ ಮರೋಡಿಯ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಸುಮಾರು 4 ಎಕ್ರೆಯಷ್ಟು ಗದ್ದೆಯನ್ನು ಘಟಕದ ಉಪಾಧ್ಯಕ್ಷರಾದ “ಕೃಷ್ಣಪ್ಪ ಪೂಜಾರಿ”ಯವರ ನೇತೃತ್ವದಲ್ಲಿ ಘಟಕದ ಸದಸ್ಯರೆಲ್ಲರ ಸಹಕಾರದೊಂದಿಗೆ ಎರಡು ಹಂತಗಳಲ್ಲಿ ಸಾಗುವಳಿ ಮಾಡಿ, ಅದರಲ್ಲಿ ದೊರೆತಂತಹ ಅಕ್ಕಿಯನ್ನು ಇಂದು 53 ಫಲಾನುಭವಿಗಳನ್ನು ಗುರುತಿಸಿ ತಲಾ 25 kg ಯಂತೆ ಒಟ್ಟು 1325 KG ಅಕ್ಕಿಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಜಾತಿ ಮತಭೇದ ಮರೆತು ಈ ದಿನ ಸರಳವಾಗಿ ಮೂಡಬಿದ್ರೆಯ ಸಮಾಜಮಂದಿರದಲ್ಲಿ ವಿತರಿಸಲಾಯಿತು..
ಈ ನಮ್ಮ ಕಾರ್ಯವನ್ನು ಕಂಡು ಸಮಾಜಮಂದಿರದ ಆಡಳಿತ ಮಂಡಲಿಯವರು ಉಚಿತವಾಗಿ ಸಭಾಂಗಣವನ್ನು ನೀಡುವ ಮೂಲಕ ಸಹಕರಿಸಿದರು..
ನಮ್ಮ ಆಶಯದಂತೆ ಈ ಗದ್ದೆಯಲ್ಲಿ ಸಾಗುವಳಿ ಮಾಡಿ ದೊರೆತಿರುವಂತಹ ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗಷ್ಟೇ ಅಲ್ಲದೇ ಮೂಕ ಪ್ರಾಣಿಗಳಾದ “ಬೀದಿ ನಾಯಿಗಳಿ”ಗೆ ಪ್ರತಿನಿತ್ಯ ಅನ್ನ ನೀಡುತ್ತಿರುವ ಮಂಗಳೂರಿನ ಶ್ರೀಮತಿ “ರಜನಿ ಶೆಟ್ಟಿ” ಯವರಿಗೂ 50kg ಅಕ್ಕಿಯನ್ನು ಇತ್ತೀಚೆಗೆ ಘಟಕದ ಪರವಾಗಿ ನೀಡಿರುತ್ತೇವೆ..
ಜೊತೆಗೆ ಈ ಸಾಗುವಳಿ ಕಾರ್ಯದಲ್ಲಿ ದೊರೆತಂತಹ ಬೈ ಹುಲ್ಲನ್ನು ವೇಣೂರಿನ ಗೋಶಾಲೆ ಹಾಗೂ ಕೆಂಜಾರುವಿನ ಕಪಿಲಾ ಗೋಶಾಲೆಗಳ ಗೋವುಗಳ ಮೇವಿಗಾಗಿ ಉಚಿತವಾಗಿ ಈ ಮೊದಲೇ ನೀಡಿರುತ್ತೇವೆ..

ಈ ಕೃಷಿಕಾರ್ಯಕ್ಕೆ ಮುಂದಾದ ದಿನದಿಂದ ಇವತ್ತಿನವೆರೆಗೂ ನಮ್ಮೊಂದಿಗೆ ಕೈಜೋಡಿಸಿ ವಿವಿಧ ರೀತಿಯಲ್ಲಿ ನೆರವಾದವರೆಲ್ಲರಿಗೂ ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಪರವಾಗಿ ಮನದಾಳದ ಕೃತಜ್ಞತೆಗಳು..
ಬಿರುವೆರ್ ಕುಡ್ಲ(ರಿ) ಬೆದ್ರ ಘಟಕ

 

www.billavaswarriors.com


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »