TOP STORIES:

FOLLOW US

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..


ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ ಸಂಘಟಿತರನ್ನಾಗಿ ಮಾಡುತ್ತಿರುವ ರಾಕೇಶ್ ಪೂಜಾರಿ ಅಧ್ಯಕ್ಷೆತೆಯ “ಬಿರುವೆರ್ ಕುಡ್ಲ(ರಿ)” ಸಂಘಟನೆಯ ಸ್ಥಾಪಕಾಧ್ಯಕ್ಷರಾದ, ಯುವ ನಾಯಕ “ಉದಯ್ ಪೂಜಾರಿ”ಯವರ ಜನುಮ ದಿನದಂದು(01/06/2020) “ಬೆದ್ರ ಘಟಕ”ದ ಸಂಕಲ್ಪದಂತೆ ಅಸಹಾಯಕರ ಹಸಿವನ್ನು ನೀಗಿಸುವ ಉದ್ದೇಶದಂತೆ ಮರೋಡಿಯ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಸುಮಾರು 4 ಎಕ್ರೆಯಷ್ಟು ಗದ್ದೆಯನ್ನು ಘಟಕದ ಉಪಾಧ್ಯಕ್ಷರಾದ “ಕೃಷ್ಣಪ್ಪ ಪೂಜಾರಿ”ಯವರ ನೇತೃತ್ವದಲ್ಲಿ ಘಟಕದ ಸದಸ್ಯರೆಲ್ಲರ ಸಹಕಾರದೊಂದಿಗೆ ಎರಡು ಹಂತಗಳಲ್ಲಿ ಸಾಗುವಳಿ ಮಾಡಿ, ಅದರಲ್ಲಿ ದೊರೆತಂತಹ ಅಕ್ಕಿಯನ್ನು ಇಂದು 53 ಫಲಾನುಭವಿಗಳನ್ನು ಗುರುತಿಸಿ ತಲಾ 25 kg ಯಂತೆ ಒಟ್ಟು 1325 KG ಅಕ್ಕಿಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಜಾತಿ ಮತಭೇದ ಮರೆತು ಈ ದಿನ ಸರಳವಾಗಿ ಮೂಡಬಿದ್ರೆಯ ಸಮಾಜಮಂದಿರದಲ್ಲಿ ವಿತರಿಸಲಾಯಿತು..
ಈ ನಮ್ಮ ಕಾರ್ಯವನ್ನು ಕಂಡು ಸಮಾಜಮಂದಿರದ ಆಡಳಿತ ಮಂಡಲಿಯವರು ಉಚಿತವಾಗಿ ಸಭಾಂಗಣವನ್ನು ನೀಡುವ ಮೂಲಕ ಸಹಕರಿಸಿದರು..
ನಮ್ಮ ಆಶಯದಂತೆ ಈ ಗದ್ದೆಯಲ್ಲಿ ಸಾಗುವಳಿ ಮಾಡಿ ದೊರೆತಿರುವಂತಹ ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗಷ್ಟೇ ಅಲ್ಲದೇ ಮೂಕ ಪ್ರಾಣಿಗಳಾದ “ಬೀದಿ ನಾಯಿಗಳಿ”ಗೆ ಪ್ರತಿನಿತ್ಯ ಅನ್ನ ನೀಡುತ್ತಿರುವ ಮಂಗಳೂರಿನ ಶ್ರೀಮತಿ “ರಜನಿ ಶೆಟ್ಟಿ” ಯವರಿಗೂ 50kg ಅಕ್ಕಿಯನ್ನು ಇತ್ತೀಚೆಗೆ ಘಟಕದ ಪರವಾಗಿ ನೀಡಿರುತ್ತೇವೆ..
ಜೊತೆಗೆ ಈ ಸಾಗುವಳಿ ಕಾರ್ಯದಲ್ಲಿ ದೊರೆತಂತಹ ಬೈ ಹುಲ್ಲನ್ನು ವೇಣೂರಿನ ಗೋಶಾಲೆ ಹಾಗೂ ಕೆಂಜಾರುವಿನ ಕಪಿಲಾ ಗೋಶಾಲೆಗಳ ಗೋವುಗಳ ಮೇವಿಗಾಗಿ ಉಚಿತವಾಗಿ ಈ ಮೊದಲೇ ನೀಡಿರುತ್ತೇವೆ..

ಈ ಕೃಷಿಕಾರ್ಯಕ್ಕೆ ಮುಂದಾದ ದಿನದಿಂದ ಇವತ್ತಿನವೆರೆಗೂ ನಮ್ಮೊಂದಿಗೆ ಕೈಜೋಡಿಸಿ ವಿವಿಧ ರೀತಿಯಲ್ಲಿ ನೆರವಾದವರೆಲ್ಲರಿಗೂ ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಪರವಾಗಿ ಮನದಾಳದ ಕೃತಜ್ಞತೆಗಳು..
ಬಿರುವೆರ್ ಕುಡ್ಲ(ರಿ) ಬೆದ್ರ ಘಟಕ

 

www.billavaswarriors.com


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »