TOP STORIES:

FOLLOW US

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ


ಬಿರುವೆರ್ ಕುಡ್ಲ ಬಜಪೆ ಘಟಕ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.
  ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ ನಿವಾಸಿ ದಯಾನಂದ ಬಂಗೇರ ಮತ್ತು ಅವರ ಮೂರು ಮಕ್ಕಳು, ಒಂದುಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಇವರ ಕುಟುಂಬವು ಕಡು ಬಡತನದಲ್ಲಿ ಜೀವನ ಸಾಗುತ್ತಿದ್ದರು. ಇವರಿಗೆ ವಾಸಿಸಲುಯೋಗ್ಯವಾದ ಮನೆ ಇರಲಿಲ್ಲ ಒಂದು ಗುಡಿಸಿಲಿನಲ್ಲಿ ವಾಸಿಸುತ್ತಿದ್ದು, ತನ್ನ ಕಷ್ಟವನ್ನು ತಾಳಲಾರದೆ ಇವರು ಬಿರುವೆರ್ ಕುಡ್ಲ ಬಜಪೆಘಟಕಕ್ಕೆ ಮನವಿಯನ್ನು ನೀಡಿರುತ್ತಾರೆ. ಇದನ್ನು ಗಮನಿಸಿದ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇವರಿಗೆ ಮನೆನಿರ್ಮಿಸಿ ಕೊಡುವ ಭರವಸೆಯನ್ನು ನೀಡಿ ತಕ್ಷಣವೇ ಮನೆ ನಿರ್ಮಾಣದ ಕೆಲಸವನ್ನು ಆರಂಭಿಸಿ ಕೆಲವೇ ದಿನಗಳಲ್ಲಿ ಬಿರುವೆರ್ ಕುಡ್ಲಬಜಪೆ ಘಟಕದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತವಾದ ಸುಮರು 12 ಲಕ್ಷ ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದೆ. ಇದು ಅನೇಕ ದಾನಿಗಳ ಸಹಕಾರದಿಂದ ಮನೆ ನಿರ್ಮಾಣದ ಮಹಾ ಸೇವಾ ಯೋಜನೆ ಅತಿ ಯಶಸ್ವಿಯಾಗಿ ನೆರವೇರಿದೆಎಂದು ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಹೇಳಿದ್ದಾರೆ.

  ಮನೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಶ್ರೀ ಸಾಯಿ ರಾಮ್ ರವರು ನೆರವೇರಿಸಿದ್ದು,  ಮನೆಯಹಸ್ತಾಂತರವನ್ನು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರು ಶ್ರೀ ನಳಿನ್ಕುಮಾರ್ ಕಟೀಲು ರವರು ದಯಾನಂದ ಬಂಗೇರರವರ ಕುಟುಂಬಕ್ಕೆ ಮನೆಯನ್ನು ಹಸ್ತಾಂತರಿಸಿದರು. ಗುರುಪುರದ ವಜ್ರದೇಹಿಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿಗಳು ಬಿರುವೆರ್ ಕುಡ್ಲ ಸಂಘಟನೆಯ ಸಾಧನೆಯನ್ನು ಹಾಗೂ ಶ್ರದ್ಧೆಯನ್ನು ಮೆಚ್ಚಿ , ಕೊಂಡಾಡಿ ಘಟಕದ ಎಲ್ಲಾ ಸದಸ್ಯರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಸಮಾಜಮುಖಿ ಸೇವೆ ನಾನು ಕಳೆದ ಆರು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ನನ್ನಆತ್ಮೀಯ ಮಿತ್ರರಾದ ಉದಯ ಪೂಜಾರಿ ರವರ ನೇತೃತ್ವದಲ್ಲಿ ಅತಿ ಯಶಸ್ವಿಯಾಗಿ ಸಂಘಟನೆ ಸಮಾಜದ ಕಾಳಜಿ, ಅಶಕ್ತರ ಪಾಲಿಗೆದಾರಿದೀಪವಾಗಿ ಸಮಾಜದ ಜೊತೆ ಸಾಗುತ್ತಿದೆ ಎಂದರು. ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಸಾಯಿ ರಾಮ್ ರವರು ಘಟಕಕ್ಕೆಶುಭ ಕೋರಿದರು.  ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿಯವರು ಬಿರುವೆರ್ ಕುಡ್ಲ  ಸಂಘಟನೆ ಮತ್ತು ತಮ್ಮಆತ್ಮೀಯತೆಯನ್ನು ಬಣ್ಣಿಸಿದರು. ಹಾಗೂ ಸಂಘಟನೆಯ ಕಾರ್ಯವೈಕರಿಗೆ ಶುಭ ಹಾರೈಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಬಿರುವೆರ್ ಕುಡ್ಲ ಬಜಪೆ ಘಟಕವು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಆಧಾರಿತವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಸಮಾಜದದಾರಿದೀಪವಾಗಿದೆ ಎಂದರು.

ಸಂದರ್ಭದಲ್ಲಿ ಮನೆ ನಿರ್ಮಾಣದ ಕಾರ್ಯಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಲ್ಕಿಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್, ಶ್ರೀ ಕ್ಷೇತ್ರ ಕುದ್ರೋಳಿ ಇದರ ಉಪಾಧ್ಯಕ್ಷರಾದ ಶ್ರೀ ಊರ್ಮಿಳರಮೇಶ್ ಕುಮಾರ್, ಶ್ರೀ ಕಟೀಲ್ ಕನ್ಸ್ಟ್ರಕ್ಷನ್ ಶ್ರೀ ಶಿವರಾಮ ಕೋಟ್ಯಾನ್, ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯಪೂಜಾರಿ ಬಳ್ಳಾಲ್ ಬಾಗ್, ಉದ್ಯಮಿ ಶ್ರೀ ವಿವೇಕ್ ರಾಜ್ ಪೂಜಾರಿ, ಶ್ರೀ ಚಂದ್ರಶೇಖರ್ ಎಂ ಅಮಿನ್ ವಕೀಲರು , ಘಟಕದಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಪಡುಪೆರಾರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಮಿತಾಶೆಟ್ಟಿ ಹಾಗೂಆನೇಕ ಗಣ್ಯಾಧಿಗಣ್ಯರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »