TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ


ಬಿರುವೆರ್ ಕುಡ್ಲ ಬಜಪೆ ಘಟಕ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.
  ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ ನಿವಾಸಿ ದಯಾನಂದ ಬಂಗೇರ ಮತ್ತು ಅವರ ಮೂರು ಮಕ್ಕಳು, ಒಂದುಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಇವರ ಕುಟುಂಬವು ಕಡು ಬಡತನದಲ್ಲಿ ಜೀವನ ಸಾಗುತ್ತಿದ್ದರು. ಇವರಿಗೆ ವಾಸಿಸಲುಯೋಗ್ಯವಾದ ಮನೆ ಇರಲಿಲ್ಲ ಒಂದು ಗುಡಿಸಿಲಿನಲ್ಲಿ ವಾಸಿಸುತ್ತಿದ್ದು, ತನ್ನ ಕಷ್ಟವನ್ನು ತಾಳಲಾರದೆ ಇವರು ಬಿರುವೆರ್ ಕುಡ್ಲ ಬಜಪೆಘಟಕಕ್ಕೆ ಮನವಿಯನ್ನು ನೀಡಿರುತ್ತಾರೆ. ಇದನ್ನು ಗಮನಿಸಿದ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇವರಿಗೆ ಮನೆನಿರ್ಮಿಸಿ ಕೊಡುವ ಭರವಸೆಯನ್ನು ನೀಡಿ ತಕ್ಷಣವೇ ಮನೆ ನಿರ್ಮಾಣದ ಕೆಲಸವನ್ನು ಆರಂಭಿಸಿ ಕೆಲವೇ ದಿನಗಳಲ್ಲಿ ಬಿರುವೆರ್ ಕುಡ್ಲಬಜಪೆ ಘಟಕದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತವಾದ ಸುಮರು 12 ಲಕ್ಷ ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದೆ. ಇದು ಅನೇಕ ದಾನಿಗಳ ಸಹಕಾರದಿಂದ ಮನೆ ನಿರ್ಮಾಣದ ಮಹಾ ಸೇವಾ ಯೋಜನೆ ಅತಿ ಯಶಸ್ವಿಯಾಗಿ ನೆರವೇರಿದೆಎಂದು ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಹೇಳಿದ್ದಾರೆ.

  ಮನೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಶ್ರೀ ಸಾಯಿ ರಾಮ್ ರವರು ನೆರವೇರಿಸಿದ್ದು,  ಮನೆಯಹಸ್ತಾಂತರವನ್ನು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರು ಶ್ರೀ ನಳಿನ್ಕುಮಾರ್ ಕಟೀಲು ರವರು ದಯಾನಂದ ಬಂಗೇರರವರ ಕುಟುಂಬಕ್ಕೆ ಮನೆಯನ್ನು ಹಸ್ತಾಂತರಿಸಿದರು. ಗುರುಪುರದ ವಜ್ರದೇಹಿಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿಗಳು ಬಿರುವೆರ್ ಕುಡ್ಲ ಸಂಘಟನೆಯ ಸಾಧನೆಯನ್ನು ಹಾಗೂ ಶ್ರದ್ಧೆಯನ್ನು ಮೆಚ್ಚಿ , ಕೊಂಡಾಡಿ ಘಟಕದ ಎಲ್ಲಾ ಸದಸ್ಯರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಸಮಾಜಮುಖಿ ಸೇವೆ ನಾನು ಕಳೆದ ಆರು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ನನ್ನಆತ್ಮೀಯ ಮಿತ್ರರಾದ ಉದಯ ಪೂಜಾರಿ ರವರ ನೇತೃತ್ವದಲ್ಲಿ ಅತಿ ಯಶಸ್ವಿಯಾಗಿ ಸಂಘಟನೆ ಸಮಾಜದ ಕಾಳಜಿ, ಅಶಕ್ತರ ಪಾಲಿಗೆದಾರಿದೀಪವಾಗಿ ಸಮಾಜದ ಜೊತೆ ಸಾಗುತ್ತಿದೆ ಎಂದರು. ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಸಾಯಿ ರಾಮ್ ರವರು ಘಟಕಕ್ಕೆಶುಭ ಕೋರಿದರು.  ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿಯವರು ಬಿರುವೆರ್ ಕುಡ್ಲ  ಸಂಘಟನೆ ಮತ್ತು ತಮ್ಮಆತ್ಮೀಯತೆಯನ್ನು ಬಣ್ಣಿಸಿದರು. ಹಾಗೂ ಸಂಘಟನೆಯ ಕಾರ್ಯವೈಕರಿಗೆ ಶುಭ ಹಾರೈಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಬಿರುವೆರ್ ಕುಡ್ಲ ಬಜಪೆ ಘಟಕವು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಆಧಾರಿತವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಸಮಾಜದದಾರಿದೀಪವಾಗಿದೆ ಎಂದರು.

ಸಂದರ್ಭದಲ್ಲಿ ಮನೆ ನಿರ್ಮಾಣದ ಕಾರ್ಯಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಲ್ಕಿಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್, ಶ್ರೀ ಕ್ಷೇತ್ರ ಕುದ್ರೋಳಿ ಇದರ ಉಪಾಧ್ಯಕ್ಷರಾದ ಶ್ರೀ ಊರ್ಮಿಳರಮೇಶ್ ಕುಮಾರ್, ಶ್ರೀ ಕಟೀಲ್ ಕನ್ಸ್ಟ್ರಕ್ಷನ್ ಶ್ರೀ ಶಿವರಾಮ ಕೋಟ್ಯಾನ್, ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯಪೂಜಾರಿ ಬಳ್ಳಾಲ್ ಬಾಗ್, ಉದ್ಯಮಿ ಶ್ರೀ ವಿವೇಕ್ ರಾಜ್ ಪೂಜಾರಿ, ಶ್ರೀ ಚಂದ್ರಶೇಖರ್ ಎಂ ಅಮಿನ್ ವಕೀಲರು , ಘಟಕದಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಪಡುಪೆರಾರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಮಿತಾಶೆಟ್ಟಿ ಹಾಗೂಆನೇಕ ಗಣ್ಯಾಧಿಗಣ್ಯರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »