TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ


ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು

ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬದಯಜಮಾನರಾದ ಜಗದೀಶ ಆಚಾರ್ಯ ಅವರು ಸುಮಾರು ಒಂದು ತಿಂಗಳ ಮುಂಚೆ ಮರದ ಕೆಲಸ ಮಾಡುತ್ತಿರುವಾಗ ಆಯ ತಪ್ಪಿಕೆಳಗೆ ಬಿದ್ದು ಕಾಲಿಗೆ ಗಾಯ ಆಗಿದ್ದು, ಕಾಲಿಗೆ ರಾಡ್ ಅಳವಡಿಸಲಾಗಿದೆ. ಇಡೀ ಕುಟುಂಬವು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆಹಾಗೂ ಸ್ಟೀಲ್ ರಾಡ್ ತೆಗೆದು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಮತ್ತು ರಾಡ್ ಇದ್ದ ಜಾಗದಲ್ಲಿ ಇನ್ಪೆಕ್ಷನ್ ಆಗಿರುತ್ತದೆ ಮತ್ತಷ್ಟು ದಿನ ಕಳೆದರೆಜಾಸ್ತಿ ಆಗುವ ಸಂಭವವಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿಯನ್ನುನೀಡಿರುತ್ತಾರೆ. ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇವರಿಗೆ ದಿನಾಂಕ25/07/2021 ರಂದು ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದಿಂದ ಧನಸಹಾಯ ನೀಡಲಾಯಿತು. ಲಾಕ್ ಡೌನ್ಸಮಯದಲ್ಲಿ ಇವರಿಗೆ ದಿನನಿತ್ಯದ ಆಹಾರ ಸಾಮಗ್ರಿ ಕಿಟ್ಟನ್ನು ಇವರಿಗೆ ಎರಡು ತಿಂಗಳ ಹಿಂದೆ ಘಟಕದಿಂದ ನೀಡಲಾಗಿತ್ತು. ತುಂಬಾಕಷ್ಟದಲ್ಲಿರುವ ಇವರ ಕುಟುಂಬ ದಾನಿಗಳ ನಿರೀಕ್ಷೆಯಲ್ಲಿದೆ.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕೆಂಜಾರು ಕಾನ, ಪ್ರಸಾದ್ ಆಚಾರ್ಯಪಡುಪೆರಾರ, ಉಪಾಧ್ಯಕ್ಷರಾದ ಚಂದ್ರ ಪೂಜಾರಿ, ದಿನೇಶ್ ಕೆ ಬಂಗೇರ, ಕಾರ್ಯಾಧ್ಯಕ್ಷರಾದ ಗಣೇಶ್ ಪೂಜಾರಿ ಬಜಪೆ, ಸಂಘಟನಾಕಾರ್ಯದರ್ಶಿ ಶಿವಾನಂದ್ ಕಟೀಲು, ಸದಸ್ಯರಾದ ಮಹೇಂದ್ರ ಪೂಜಾರಿ ಶಾಂತಿಗುಡ್ಡೆ ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »