TOP STORIES:

FOLLOW US

ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ


ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ *ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ

ಕುಂಪಲ, ಕುಜುಮಗದ್ದೆ ನಿವಾಸಿಯಾದ ಶ್ರೀ ವಿಠ್ಠಲ್ ಶೋಭಾ ಸಫಲ್ಯ ರವರ ಮಗನಾದ ರಕ್ಷಿತ್.ಎಂ, ಪ್ರಾಯ 18 ವರ್ಷ ಇವರು ರಕ್ತದ ಕಾಯಿಲೆ (ಬ್ಲಡ್ ಕ್ಯಾನ್ಸರ್) ನಿಂದ ಬಳಲುತ್ತಿದ್ದು ನಗರದ, ದೇರಳಕಟ್ಟೆ K.S ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತ್ಯಂತ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ವಿಧಿ ನೀಡಿದ ಪರೀಕ್ಷೆ ಎದುರಿಸಲಾರದೆ ಪರಿತಪಿಸುತ್ತಿದ್ದು, ಇವರ ಕುಟುಂಬ, ನಮ್ಮಲ್ಲಿ ಸಹಾಯಕೋರಿ ಮನವಿ ಮಾಡಿದ್ದಾರೆ.

ನಮ್ಮ ಘಟಕದಿಂದ ಸೇವಾಯೋಜನೆಯ ಬಗ್ಗೆ ಇವರಿಗೆ ಪ್ರಥಮ ಸೇವಾಯೋಜನೆಯನ್ನು ಕೊಡುದಾಗಿ ನಿಶ್ಚಿಸಿದ್ದೇವೆ .

ಇವರ ಮನವಿಯಂತೆ, ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ* ತುರ್ತಾಗಿ ಸ್ಪಂದಿಸಿ, ದಿನಾಂಕ 29/01/2021ರಂದು ಅವರು ದಾಖಲಾದ ಆಸ್ಪತ್ರೆ ಗೆ ತೆರಳಿ ಧನಸಹಾಯವನ್ನು ಹಸ್ತಾಂತರ ‌ಮಾಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ, ದೇರಳಕಟ್ಟೆ ಘಟಕದ, ಅಧ್ಯಕ್ಷರು ಶ್ರೀ ಶ್ರವಣ್ ಪೂಜಾರಿ ಅಂಬ್ಲಮೊಗರು, ಉಪಾಧ್ಯಕ್ಷರಾದ ಶ್ರೀಕಾಂತ್ ಕುತ್ತಾರ್, ಪ್ರದಾನ ಕಾರ್ಯದರ್ಶಿಯಾದ ಪ್ರಜ್ವಲ್ ಅಂಚನ್, ಕುಂಪಲ,
ಜೊತೆ ಕಾರ್ಯದರ್ಶಿಯಾದ ವಿಶಿತ್ ಪೂಜಾರಿ ವೈದ್ಯನಾಥ ನಗರ, ಕೋಶಾಧಿಕಾರಿಯಾದ ಮಿತಿಲೇಶ್ ಪೂಜಾರಿ ವೈದ್ಯನಾಥ ನಗರ, ಸಂಘಟನಾ ಕಾರ್ಯದರ್ಶಿಗಳಾದ ಶ್ರೇಯಸ್ ತಲ್ವಾರ್, ಸಂತೋಷ್ ಗಾಣಿಗ ಹಾಗೂ ಕ್ರೀಡಾ ಕಾರ್ಯದರ್ಶಿ ಯಾದ ಸ್ವರೂಪ್ ಬಿ. ವಿ ಕುಂಪಲ, ಅಕ್ಷಯ್ ಕುಂಪಲ ಮತ್ತಿತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಕಟಣೆ

ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ.

ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »