TOP STORIES:

FOLLOW US

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ


ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು ಎಂದು ಬಿರುವೆರ್ ಕುಡ್ಲ ಸಂಘಟನೆ ಹೇಳಿದೆ

ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ. ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು‌ ಸಂಘಟನೆ ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾಧ್ಯಮ ಸಲಹೆಗಾರ ತೇಜಸ್ ಬಂಗೇರಾ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »