TOP STORIES:

ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ


ಮೂಲ:- ಅಮಣಿ ಅಮ್ಮ ಅಗತ್ತಾಡಿ ದೋಲ ಬಾರಿಕೆ

ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ

 

ಮದುವೆ ಎನ್ನುವುದು ಎರಡು ಜೀವಗಳನ್ನು ಬೆಸೆಯುವುದರ ಜೊತೆಗೆ ಸಂತಾನಾಭಿವೃದ್ಧಿಯ ದ್ಯೋತಕವು ಹೌದು. ತುಳುನಾಡಿನ ಪ್ರತಿಯೊಂದು ಜಾತಿಗಳು ಅವರದೇ ಆದ ಕ್ರಮಗಳಲ್ಲಿ ಮದುವೆಗಳನ್ನು ನಡೆಸುತ್ತಿದ್ದರು, ಇನ್ನೊಂದು ಜಾತಿ ಬೇರೆ ಜಾತಿಗಳ ಕ್ರಮಗಳಲ್ಲಿ ಮೂಗು ತೂರಿಸಿದ ಉದಾಹರಣೆಗಳು ಇಲ್ಲ. ಮಾತೃ ಪ್ರಧಾನ ಜಾತಿಗಳಾದ ಬಿಲ್ಲವ, ಬಂಟ, ಕುಲಾಲ, ಗಾಣಿಗ ಮತ್ತು ಮೊಗವೀರ ಜಾತಿಗಳಲ್ಲಿ ಸಾಮಾನ್ಯವಾಗಿ ಕೆಲವೊಂದು ಕ್ರಮಗಳನ್ನು ಹೊರತು ಪಡಿಸಿ ಎಲ್ಲಾ ಕ್ರಮಗಳಲ್ಲಿ ಒಂದು ರೀತಿಯ ಹೋಲಿಕೆ ಇತ್ತು. ಬಿಲ್ಲವರು ತಮ್ಮ ಎಲ್ಲಾ ಕ್ರಮಗಳಲ್ಲಿ ತಮ್ಮದೇ ಆದ ಅಧಿಪತ್ಯವನ್ನು ಹೊಂದಿದ್ದವರು.

ಎಲ್ಲವೂ ಕೂಡ ಈ‌ ಹಿಂದೆ ಹೇಳಿದಂತೆ ಗುರಿಕಾರನ( ಬೋಂಟ್ರ) ಮುಖಾಂತರ ನಡೆಯುತ್ತಿತ್ತು. ನಾನು ಇಲ್ಲಿ ಹೇಳಹೊರಟಿರುವುದು ವಿಧವೆ ಮತ್ತು ಎರಡನೇ ಮದುವೆಯಾಗ ಹೊರಟ ಗಂಡಿನ ಮದುವೆಯ ಬಗ್ಗೆ. ಸಾಮಾನ್ಯವಾಗಿ ಮೊದಲನೇ ಮದುವೆಯಾದರೆ ಕೈಧಾರೆ ಬುಡುದಾರೆಗಳ ಕ್ರಮಗಳು ಮಡಿವಾಳರ ಪೌರೋಹಿತ್ಯದಲ್ಲಿ ಆಗುತ್ತಿದ್ದರೆ, ಈ ಕೈ ಪತ್ತವುನಿ ಕ್ರಮದಲ್ಲಿ ಮದುವೆಯಾಗುವ ಸಮಯದಲ್ಲಿ ಮಡಿವಾಳ ಪೌರೋಹಿತ್ಯ ಇರುವುದಿಲ್ಲ. ಎಲ್ಲವೂ ಕೂಡ ಗುರಿಕಾರನ ಮುಂದಾಳತ್ವದಲ್ಲಿ ಕೆಲವೇ ಸಂಬಂಧಿಕರ ಸಮ್ಮಖದಲ್ಲಿ ನಡೆಯುತ್ತಿತ್ತು. ಹೊರಗಿನವರ ಉಪಸ್ಥಿತಿ ಇಲ್ಲಿ ನಿಶಿಧ್ದವಾಗಿತ್ತು. ಮುಖ್ಯವಾಗಿ ಈ ಮದುವೆ ನಡೆಯುತ್ತಿದ್ದಿದ್ದೇ ಸಂಜೆಯ ಇಳಿ ಹೊತ್ತಿನಲ್ಲಿ ಹೆಣ್ಣಿನ ಮನೆಯಲ್ಲಿ. ಗಂಡಿನ ದಿಬ್ಬಣ ಹೆಣ್ಣಿನ ಮನೆಗೆ ಸೂರ್ಯ ಅಸ್ತಮಿಸುವ ಮುನ್ನ ಬಂದು ಸೇರುತ್ತಿತ್ತು. ಮದುವೆಯ ಹೆಣ್ಣು ಈ ಮೊದಲೇ ವಿಧವೆಯಾಗಿರುವುದರಿಂದ ಆಕೆಗೆ ಬೇರೊಬ್ಬರು ಅಲಂಕಾರ ಮಾಡುವ ಕ್ರಮ ಇರಲಿಲ್ಲ. ಆಕೆಯೆ ಒಂದು ಮರದ ಮಣೆಯಲ್ಲಿ ಕುಳಿತು ತನಗೆ ಬೇಕಾದ ಅಲಂಕಾರಗಳನ್ನು ತಾನೇ ಮಾಡಿಕೊಳ್ಳಬೇಕು ಮತ್ತು ಸೀರೆಯು ಕೂಡ ತಾನೇ ಉಟ್ಟುಕೊಳ್ಳಬೇಕು.

ಅದೇ ರೀತಿ ಕರಿಮಣಿಯನ್ನು ತಾನೇ ಕಟ್ಟಿಕೊಳ್ಳಬೇಕು, ಸಾಮಾನ್ಯವಾದ ಮದುವೆಯಲ್ಲಿ ಆದರೆ ಹೆಣ್ಣಿನ ತಾಯಿ ಅಥವ ಗುರಿಕಾರ್ತಿ ಕಟ್ಟುವ ಕ್ರಮ ಇರುತ್ತದೆ. ಅದೇ ರೀತಿ ಇಲ್ಲಿ ಗಂಡಿನ ಅಲಂಕಾರದಲ್ಲಿ ಮಾತ್ರ ಈ ರೀತಿಯ ಕಟ್ಟುಪಾಡು ಇರಲಿಲ್ಲ ಆತನಿಗೆ ಕಚ್ಚೆ ಹಾಕಲು ಇನ್ನೊಬ್ಬರ ಸಹಾಯ ಪಡೆದುಕೊಳ್ಳಬಹುದಿತ್ತು. ತದನಂತರ ಮದುವೆ ಗಂಡು ಮತ್ತು ಹೆಣ್ಣನ್ನು ಮನೆಯ ಚಾವಡಿಯಲ್ಲಿ ಎದುರು ಬದುರಾಗಿ ನಿಲ್ಲಿಸಿ ಅವರ ಮಧ್ಯದಲ್ಲಿ ಬಿಳಿ‌ ಬಟ್ಟೆಯನ್ನು ಅಡ್ಡವಾಗಿ ಮುಖ ಕಾಣದ ರೀತಿಯಲ್ಲಿ ಹಿಡಿಯುತ್ತಾರೆ, ಅವರ ಮಧ್ಯದಲ್ಲಿ ಗುರಿಕಾರ ನಿಂತು ಹೆಣ್ಣಿನ ಕೈಗೆ ಗಂಡಿನ ಕೈಯನ್ನು ಬಟ್ಟೆಯ ಮೇಲಿಂದ ಹಿಡಿಸುತ್ತಾನೆ. ಕೈಯನ್ನು ಹಿಡಿಸುವಾಗ ಲೆತ್ತ್ ಪನ್ಪುನಿ ಎನ್ನುವ ಕ್ರಮ ಇದೆ. ಅದು ಈ ರೀತಿಯಾಗಿ ಇದೆ. ಜಾತಿ ಸಂಗತೆರೆಡ, ಜಾತಿ ಬುದ್ಯಂತೆರೆಡ ಪೊಣ್ಣನ ಕೈನ್ ಆನನ ಕೈಟ್ ಪತ್ತಾವ ಅಂತ ಮೂರು ಸಲ ಕೂಗಿ ಹೇಳಿ ಕೈ ಹಿಡಿಸುತ್ತಾರೆ.

ಇಲ್ಲಿ ಹೆಣ್ಣಿನ ಕಡೆಯ ಗುರಿಕಾರನ ಮೂಲಕ ಈ ಕ್ರಮಗಳು ನಡೆಯುತ್ತವೆ. ನಂತರ ಗಂಡು ಹೆಣ್ಣನ್ನು ಕೂರಿಸಿ ಸೇಸೆ ಹಾಕುತ್ತಾರೆ. ಆದರೆ ಇಲ್ಲಿ ಬಂದವರೆಲ್ಲ ಮುಯ್ಯಿ ( ಹಣ ನೀಡುವ ಕ್ರಮ) ಮಾಡುವ ಕ್ರಮ ಇರಲಿಲ್ಲ. ಅದು ಮೊದಲನೇ ಮದುವೆಗೆ ಮಾತ್ರ ಸೀಮಿತವಾಗಿತ್ತು. ಇಲ್ಲಿ ಮದುವೆ ಮಾಡಿಸುವ ಮುಖ್ಯವಾದ ಉದ್ದೇಶ ಏನೆಂದರೆ ಹೆಣ್ಣಿಗೊಂದು ರಕ್ಷಣೆ ಇರಲಿ ಎನ್ನುವ ಉದ್ದೇಶ ಮಾತ್ರ ಆಗಿತ್ತು. ಮತ್ತು ಇದು ಅಷ್ಟೊಂದು ಪ್ರಚಾರವನ್ನು ಪಡೆದುಕೊಳ್ಳದೆ ಕೇವಲ ಕೆಲವೇ ಸಂಬಂಧಿಕರ ಉಪಸ್ಥಿತಿಯಲ್ಲಿ ಆಗುವ ಕ್ರಮಗಳಾಗಿದ್ದವು. ಊಟವು ಅಷ್ಟೆ ಕಡ್ಲೆ ಬಲ್ಯಾರಿನ ಸಮಾರಾಧನೆ ಆಗಿತ್ತು. ಯಾವುದೇ ಕಾರಣಕ್ಕೂ ಇದನ್ನು ಹಗಲಿನ ಹೊತ್ತಿನಲ್ಲಿ ನಡೆಸುತ್ತಿರಲಿಲ್ಲ. ಆದರೆ ಅಪರೂಪಕ್ಕೆ ಮತ್ತು ಅನುಕೂಲಕ್ಕಾಗಿ ಕೆಲವೊಂದು ಆಗಿದ್ದ ಉದಾಹರಣೆಯು ಇದಿಯಂತೆ.

ಇಲ್ಲಿ ಈ ಹಿಂದೆ ಹುಡುಗಿಗೆ ಮೊದಲ ಗಂಡನಲ್ಲಿ ಮಕ್ಕಳಿದಲ್ಲಿ ಆ ಮಕ್ಕಳನ್ನು ಎರಡನೇ ಗಂಡನೆ ತನ್ನ ಮನೆಗೆ ಕರೆದುಕೊಂಡು ಹೋಗಿ ಸಾಕುವ ಪರಿಪಾಠವು ಇತ್ತು. ಇಲ್ಲಿ ಗಮನಿಸಬೇಕಾದ ಮುಖ್ಯವಾದ ಅಂಶವೆಂದರೆ ವಿಧವಾ ವಿವಾಹಕ್ಕೆ ಮಾತೃ ಪ್ರಧಾನ ವ್ಯವಸ್ಥೆಯಲ್ಲಿ ಇದ್ದಂತಹ ಪ್ರೋತ್ಸಾಹ. ಈಗ ಈ ರೀತಿಯ ಕ್ರಮದ ಅವಶ್ಯಕತೆಯಿಲ್ಲ ಯಾಕೆಂದರೆ ಕ್ರಮಪ್ರಕಾರವಾಗಿ ಎರಡನೇ ಮದುವೆಯು ಕೂಡ ಮೊದಲನೇಯ ಮದುವೆ ರೀತಿಯಲ್ಲೇ ಆಗುತ್ತಿದೆ. ಆದರೆ ಈ ಕೈ ಪತ್ತವುನಿ ಕ್ರಮದ ಮದುವೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನತೆಯನ್ನು ಕಾಯ್ದುಕೊಂಡಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »