TOP STORIES:

FOLLOW US

ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ


ಮೂಲ:- ಅಮಣಿ ಅಮ್ಮ ಅಗತ್ತಾಡಿ ದೋಲ ಬಾರಿಕೆ

ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ

 

ಮದುವೆ ಎನ್ನುವುದು ಎರಡು ಜೀವಗಳನ್ನು ಬೆಸೆಯುವುದರ ಜೊತೆಗೆ ಸಂತಾನಾಭಿವೃದ್ಧಿಯ ದ್ಯೋತಕವು ಹೌದು. ತುಳುನಾಡಿನ ಪ್ರತಿಯೊಂದು ಜಾತಿಗಳು ಅವರದೇ ಆದ ಕ್ರಮಗಳಲ್ಲಿ ಮದುವೆಗಳನ್ನು ನಡೆಸುತ್ತಿದ್ದರು, ಇನ್ನೊಂದು ಜಾತಿ ಬೇರೆ ಜಾತಿಗಳ ಕ್ರಮಗಳಲ್ಲಿ ಮೂಗು ತೂರಿಸಿದ ಉದಾಹರಣೆಗಳು ಇಲ್ಲ. ಮಾತೃ ಪ್ರಧಾನ ಜಾತಿಗಳಾದ ಬಿಲ್ಲವ, ಬಂಟ, ಕುಲಾಲ, ಗಾಣಿಗ ಮತ್ತು ಮೊಗವೀರ ಜಾತಿಗಳಲ್ಲಿ ಸಾಮಾನ್ಯವಾಗಿ ಕೆಲವೊಂದು ಕ್ರಮಗಳನ್ನು ಹೊರತು ಪಡಿಸಿ ಎಲ್ಲಾ ಕ್ರಮಗಳಲ್ಲಿ ಒಂದು ರೀತಿಯ ಹೋಲಿಕೆ ಇತ್ತು. ಬಿಲ್ಲವರು ತಮ್ಮ ಎಲ್ಲಾ ಕ್ರಮಗಳಲ್ಲಿ ತಮ್ಮದೇ ಆದ ಅಧಿಪತ್ಯವನ್ನು ಹೊಂದಿದ್ದವರು.

ಎಲ್ಲವೂ ಕೂಡ ಈ‌ ಹಿಂದೆ ಹೇಳಿದಂತೆ ಗುರಿಕಾರನ( ಬೋಂಟ್ರ) ಮುಖಾಂತರ ನಡೆಯುತ್ತಿತ್ತು. ನಾನು ಇಲ್ಲಿ ಹೇಳಹೊರಟಿರುವುದು ವಿಧವೆ ಮತ್ತು ಎರಡನೇ ಮದುವೆಯಾಗ ಹೊರಟ ಗಂಡಿನ ಮದುವೆಯ ಬಗ್ಗೆ. ಸಾಮಾನ್ಯವಾಗಿ ಮೊದಲನೇ ಮದುವೆಯಾದರೆ ಕೈಧಾರೆ ಬುಡುದಾರೆಗಳ ಕ್ರಮಗಳು ಮಡಿವಾಳರ ಪೌರೋಹಿತ್ಯದಲ್ಲಿ ಆಗುತ್ತಿದ್ದರೆ, ಈ ಕೈ ಪತ್ತವುನಿ ಕ್ರಮದಲ್ಲಿ ಮದುವೆಯಾಗುವ ಸಮಯದಲ್ಲಿ ಮಡಿವಾಳ ಪೌರೋಹಿತ್ಯ ಇರುವುದಿಲ್ಲ. ಎಲ್ಲವೂ ಕೂಡ ಗುರಿಕಾರನ ಮುಂದಾಳತ್ವದಲ್ಲಿ ಕೆಲವೇ ಸಂಬಂಧಿಕರ ಸಮ್ಮಖದಲ್ಲಿ ನಡೆಯುತ್ತಿತ್ತು. ಹೊರಗಿನವರ ಉಪಸ್ಥಿತಿ ಇಲ್ಲಿ ನಿಶಿಧ್ದವಾಗಿತ್ತು. ಮುಖ್ಯವಾಗಿ ಈ ಮದುವೆ ನಡೆಯುತ್ತಿದ್ದಿದ್ದೇ ಸಂಜೆಯ ಇಳಿ ಹೊತ್ತಿನಲ್ಲಿ ಹೆಣ್ಣಿನ ಮನೆಯಲ್ಲಿ. ಗಂಡಿನ ದಿಬ್ಬಣ ಹೆಣ್ಣಿನ ಮನೆಗೆ ಸೂರ್ಯ ಅಸ್ತಮಿಸುವ ಮುನ್ನ ಬಂದು ಸೇರುತ್ತಿತ್ತು. ಮದುವೆಯ ಹೆಣ್ಣು ಈ ಮೊದಲೇ ವಿಧವೆಯಾಗಿರುವುದರಿಂದ ಆಕೆಗೆ ಬೇರೊಬ್ಬರು ಅಲಂಕಾರ ಮಾಡುವ ಕ್ರಮ ಇರಲಿಲ್ಲ. ಆಕೆಯೆ ಒಂದು ಮರದ ಮಣೆಯಲ್ಲಿ ಕುಳಿತು ತನಗೆ ಬೇಕಾದ ಅಲಂಕಾರಗಳನ್ನು ತಾನೇ ಮಾಡಿಕೊಳ್ಳಬೇಕು ಮತ್ತು ಸೀರೆಯು ಕೂಡ ತಾನೇ ಉಟ್ಟುಕೊಳ್ಳಬೇಕು.

ಅದೇ ರೀತಿ ಕರಿಮಣಿಯನ್ನು ತಾನೇ ಕಟ್ಟಿಕೊಳ್ಳಬೇಕು, ಸಾಮಾನ್ಯವಾದ ಮದುವೆಯಲ್ಲಿ ಆದರೆ ಹೆಣ್ಣಿನ ತಾಯಿ ಅಥವ ಗುರಿಕಾರ್ತಿ ಕಟ್ಟುವ ಕ್ರಮ ಇರುತ್ತದೆ. ಅದೇ ರೀತಿ ಇಲ್ಲಿ ಗಂಡಿನ ಅಲಂಕಾರದಲ್ಲಿ ಮಾತ್ರ ಈ ರೀತಿಯ ಕಟ್ಟುಪಾಡು ಇರಲಿಲ್ಲ ಆತನಿಗೆ ಕಚ್ಚೆ ಹಾಕಲು ಇನ್ನೊಬ್ಬರ ಸಹಾಯ ಪಡೆದುಕೊಳ್ಳಬಹುದಿತ್ತು. ತದನಂತರ ಮದುವೆ ಗಂಡು ಮತ್ತು ಹೆಣ್ಣನ್ನು ಮನೆಯ ಚಾವಡಿಯಲ್ಲಿ ಎದುರು ಬದುರಾಗಿ ನಿಲ್ಲಿಸಿ ಅವರ ಮಧ್ಯದಲ್ಲಿ ಬಿಳಿ‌ ಬಟ್ಟೆಯನ್ನು ಅಡ್ಡವಾಗಿ ಮುಖ ಕಾಣದ ರೀತಿಯಲ್ಲಿ ಹಿಡಿಯುತ್ತಾರೆ, ಅವರ ಮಧ್ಯದಲ್ಲಿ ಗುರಿಕಾರ ನಿಂತು ಹೆಣ್ಣಿನ ಕೈಗೆ ಗಂಡಿನ ಕೈಯನ್ನು ಬಟ್ಟೆಯ ಮೇಲಿಂದ ಹಿಡಿಸುತ್ತಾನೆ. ಕೈಯನ್ನು ಹಿಡಿಸುವಾಗ ಲೆತ್ತ್ ಪನ್ಪುನಿ ಎನ್ನುವ ಕ್ರಮ ಇದೆ. ಅದು ಈ ರೀತಿಯಾಗಿ ಇದೆ. ಜಾತಿ ಸಂಗತೆರೆಡ, ಜಾತಿ ಬುದ್ಯಂತೆರೆಡ ಪೊಣ್ಣನ ಕೈನ್ ಆನನ ಕೈಟ್ ಪತ್ತಾವ ಅಂತ ಮೂರು ಸಲ ಕೂಗಿ ಹೇಳಿ ಕೈ ಹಿಡಿಸುತ್ತಾರೆ.

ಇಲ್ಲಿ ಹೆಣ್ಣಿನ ಕಡೆಯ ಗುರಿಕಾರನ ಮೂಲಕ ಈ ಕ್ರಮಗಳು ನಡೆಯುತ್ತವೆ. ನಂತರ ಗಂಡು ಹೆಣ್ಣನ್ನು ಕೂರಿಸಿ ಸೇಸೆ ಹಾಕುತ್ತಾರೆ. ಆದರೆ ಇಲ್ಲಿ ಬಂದವರೆಲ್ಲ ಮುಯ್ಯಿ ( ಹಣ ನೀಡುವ ಕ್ರಮ) ಮಾಡುವ ಕ್ರಮ ಇರಲಿಲ್ಲ. ಅದು ಮೊದಲನೇ ಮದುವೆಗೆ ಮಾತ್ರ ಸೀಮಿತವಾಗಿತ್ತು. ಇಲ್ಲಿ ಮದುವೆ ಮಾಡಿಸುವ ಮುಖ್ಯವಾದ ಉದ್ದೇಶ ಏನೆಂದರೆ ಹೆಣ್ಣಿಗೊಂದು ರಕ್ಷಣೆ ಇರಲಿ ಎನ್ನುವ ಉದ್ದೇಶ ಮಾತ್ರ ಆಗಿತ್ತು. ಮತ್ತು ಇದು ಅಷ್ಟೊಂದು ಪ್ರಚಾರವನ್ನು ಪಡೆದುಕೊಳ್ಳದೆ ಕೇವಲ ಕೆಲವೇ ಸಂಬಂಧಿಕರ ಉಪಸ್ಥಿತಿಯಲ್ಲಿ ಆಗುವ ಕ್ರಮಗಳಾಗಿದ್ದವು. ಊಟವು ಅಷ್ಟೆ ಕಡ್ಲೆ ಬಲ್ಯಾರಿನ ಸಮಾರಾಧನೆ ಆಗಿತ್ತು. ಯಾವುದೇ ಕಾರಣಕ್ಕೂ ಇದನ್ನು ಹಗಲಿನ ಹೊತ್ತಿನಲ್ಲಿ ನಡೆಸುತ್ತಿರಲಿಲ್ಲ. ಆದರೆ ಅಪರೂಪಕ್ಕೆ ಮತ್ತು ಅನುಕೂಲಕ್ಕಾಗಿ ಕೆಲವೊಂದು ಆಗಿದ್ದ ಉದಾಹರಣೆಯು ಇದಿಯಂತೆ.

ಇಲ್ಲಿ ಈ ಹಿಂದೆ ಹುಡುಗಿಗೆ ಮೊದಲ ಗಂಡನಲ್ಲಿ ಮಕ್ಕಳಿದಲ್ಲಿ ಆ ಮಕ್ಕಳನ್ನು ಎರಡನೇ ಗಂಡನೆ ತನ್ನ ಮನೆಗೆ ಕರೆದುಕೊಂಡು ಹೋಗಿ ಸಾಕುವ ಪರಿಪಾಠವು ಇತ್ತು. ಇಲ್ಲಿ ಗಮನಿಸಬೇಕಾದ ಮುಖ್ಯವಾದ ಅಂಶವೆಂದರೆ ವಿಧವಾ ವಿವಾಹಕ್ಕೆ ಮಾತೃ ಪ್ರಧಾನ ವ್ಯವಸ್ಥೆಯಲ್ಲಿ ಇದ್ದಂತಹ ಪ್ರೋತ್ಸಾಹ. ಈಗ ಈ ರೀತಿಯ ಕ್ರಮದ ಅವಶ್ಯಕತೆಯಿಲ್ಲ ಯಾಕೆಂದರೆ ಕ್ರಮಪ್ರಕಾರವಾಗಿ ಎರಡನೇ ಮದುವೆಯು ಕೂಡ ಮೊದಲನೇಯ ಮದುವೆ ರೀತಿಯಲ್ಲೇ ಆಗುತ್ತಿದೆ. ಆದರೆ ಈ ಕೈ ಪತ್ತವುನಿ ಕ್ರಮದ ಮದುವೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನತೆಯನ್ನು ಕಾಯ್ದುಕೊಂಡಿದೆ.


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »