TOP STORIES:

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..


ಬಿಲ್ಲವ ಸಮಾಜ ಬಂಧುಗಳೇ,

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ ತುಳುನಾಡಷ್ಟೇ ಅಲ್ಲದೇ ಜಗತ್ತಿನ ಉದ್ದಗಲಕ್ಕೂ ಹಬ್ಬಿ ನಿಂತಿರುವಂಥದ್ದು. ಆದರೆ ಕೆಲ ಸಾಧಕರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳದ ಕಾರಣ ಅಂಥವರನ್ನು ಗುರುತಿಸುವ ಜವಾಬ್ದಾರಿ ನಮ್ಮದು. ಸಾಧಕರ ಜೊತೆಗೆ ಸಂಕಷ್ಟದಲ್ಲಿರೋ ಸಮಾಜದ ಬಂಧುಗಳ ಬದುಕಿನ ಮೇಲೂ ಬೆಳಕು ಚೆಲ್ಲಬೇಕಾದ ಮತ್ತೊಂದು ಕಾರ್ಯವೂ ಅಗಬೇಕಿದೆ. ಕಷ್ಟದಲ್ಲಿರೋ ಬಿಲ್ಲವ ಬಂಧುಗಳಿಗೆ ನೆರವಿನ ಹಸ್ತ ಚಾಚುವ ಸಮಾಜಮುಖಿ ಉದ್ದೇಶವೂ ಇದೆ. ಅಂಥವರನ್ನು ಗುರುತಿಸಿ ಸಮಾಜದ ಮುಂದಿಟ್ಟರೆ ಅವರ ಬದುಕು ಹೊಸ ಬೆಳಕು ಕಾಣಬಹುದು ಅನ್ನೋ ನಂಬಿಕೆ ನಮ್ಮದು. ಹೀಗೆ ಬಿಲ್ಲವ ಸಮಾಜದ ಸಮಗ್ರ ವಸ್ತು-ವಿಚಾರಗಳ ಅನಾವರಣಕ್ಕೆ ನಾವು ಹೊಸ ವೇದಿಕೆಯೊಂದನ್ನು ಕಲ್ಪಿಸುತ್ತಿದ್ದೇವೆ. ..’ ಸದ್ಯದ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ನಮ್ಮವರನ್ನು ತಲುಪಲು ಮತ್ತು ನಮ್ಮವರ ಸಾಧನೆಯ ಜೊತೆಗೆ ಸಮಗ್ರ ಮಾಹಿತಿಗಳನ್ನು ಅನಾವರಣಗೊಳಿಸಲು ಬಿಲ್ಲವಾಸ್ ವಾರಿಯರ್ಸ್ ತಂಡ ನಿಮ್ಮೆದುರು ಬರುತ್ತಿದೆ. ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಮೂಲಕ ನಮ್ಮ ಸಮಾಜ ಬಂಧುಗಳನ್ನು ತಲುಪುವ ಉದ್ದೇಶ ನಮ್ಮದು. ನಮ್ಮವರ ಸಾಧನೆ, ಅಭಿವೃದ್ಧಿ, ಸಂಕಷ್ಟ, ನೆರವು, ಗೆಲುವು, ಜವಾಬ್ದಾರಿ, ಪ್ರತಿಭೆ…ಹೀಗೆ ಎಲ್ಲವಕ್ಕೂ ಒಂದೇ ವೇದಿಕೆಯಾಗಲಿದೆ ‘ಬಿಲ್ಲವಾಸ್ ವಾರಿಯರ್ಸ್‌’ …ನಮ್ಮೊಳಗಿನ ಯಾವುದೇ ಕ್ಷೇತ್ರದ ವಾರಿಯರ್ಸ್‌ಗಳನ್ನೂ ಸಮಾಜದ ಮುಂದೆ ಪರಿಚಯಿಸುವ ಜೊತೆಗೆ ಅಧ್ಯಯನ, ಕಾರ್ಯ, ಕಲ್ಪನೆಗಳನ್ನು ಒಂದುಗೂಡಿಸಿ ಸಾಮಾಜಿಕ ತಾಣಗಳ ಮೂಲಕ ಸಮಾಜದ ಮುಂದಿಟ್ಟು ಫಲಿತಾಂಶ ಪಡೆಯುವ ಹಂಬಲ ನಮ್ಮದು..ಬಿಲ್ಲವ ಬಂಧುಗಳೇ ಕೈ ಜೋಡಿಸಿ, ನೀವೂ ಬರೆಯಿರಿ, ಮಾಹಿತಿ ಹಂಚಿಕೊಳ್ಳಿ…ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಮಾಡಿ,ಲೈಕ್ ಮಾಡಿ…

ಧನ್ಯವಾದಗಳು
ಟೀಂ ಬಿಲ್ಲವಾಸ್ ವಾರಿಯರ್ಸ್‌

ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಲಿಂಕ್

Follow us on Instagram

Username: billavaswarriors
https://www.instagram.com/billavaswarriors

Follow Facebook Page:
https://m.facebook.com/billavawarriors/

www.billavasworriors.com


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »