TOP STORIES:

ಬಿಲ್ಲವರ ಗುತ್ತು ಮನೆತನಗಳು copyrights reserved (c) ಸಂಕೇತ್ ಪೂಜಾರಿ.


ಬಿಲ್ಲವರ ಗುತ್ತು ಮನೆತನಗಳು copyrights reserved (c) ಸಂಕೇತ್ ಪೂಜಾರಿ.

4) ಕಾರಂದೂರು ಬರಿಕೆ (ಬರ್ಕೆ)

ಬಂಟ್ವಾಳದ ಮಚ್ಚಿನ ಗ್ರಾಮದಲ್ಲಿರುವ ಕಾರಂದೂರು ಬರಿಕೆಯು ಸುತ್ತು ಮುದಲಿನ ವಿಶಾಲ ಮನೆಯಾಗಿದೆ. ಇದರ ಹೆಬ್ಬಾಗಿಲು ಉತ್ತರಕಿದ್ದು ಪೂರ್ವಾಭಿಮುಖದ ಚಾವಡಿಯಲ್ಲಿ ಆಕರ್ಷಕ ಬೋಧಿಗೆ ಕಂಬಗಳಿವೆ. ಬಂಗೇರ ಬಳಿಯ ಈ ಮನೆತನಕ್ಕೆ ಕಾಂಜವ ಬೈದ್ಯರು ಮೂಲ ಪುರುಷರು. ಇವರಿಗೆ ಈ ಮನೆಯಲ್ಲಿ ಪೂಜೆಗಳು ಸಲ್ಲಿಸಲಾಗುತ್ತಿದೆ. ಕಳೆದ ಶತಮಾನದಲ್ಲಿ ವಾಸವಿದ್ದ ಚೆನ್ನಪ್ಪ ಪೂಜಾರಿಯವರು ಊರಿನವರ ಕಷ್ಟಸುಖಗಳಲ್ಲಿ ಸ್ಪಂದಿಸಿ ಜನಾನುರಾಗಿ ಆಗಿದ್ದರು. ಚೆನ್ನಪ್ಪ ಪೂಜಾರಿಯವರ ಕಾಲದಲ್ಲಿ 800 ಮುಡಿ ಸ್ವಾರ್ಜಿತ ಭೂಮಿ ಈ ಕುಟುಂಬಕ್ಕೆ ಇತ್ತು. ಕ್ರೈಸ್ತರು, ಮರಾಠಿ ನಾಯಕರು, ಬಿಲ್ಲವರು, ಮುಸ್ಲಿಮರು ಹೀಗೆ ಒಟ್ಟಾಗಿ 20 ಒಕ್ಕಲು ಮನೆಗಳು ಇದ್ದವು. ಭೂಮಸೂದೆಯಿಂದ 700 ಮುಡಿ ಕೃಷಿ ಭೂಮಿ ಗೇಣಿದಾರರಿಗೆ ಹಸ್ತಾಂತರವಾಯಿತು. ಸದ್ಯ ಕಾರಂದೂರು ಬರ್ಕೆಗೆ 20 ಎಕ್ರೆ ಭೂಮಿ ಮಾತ್ರ ಉಳಿದಿದೆ. ಗ್ರಾಮದ ಮೊದಲನೆ ಗೌರವಕ್ಕೆ ಪಾತ್ರವಾದ ಮನೆಯಲ್ಲದೆ, ಊರ ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ವಿಶೇಷ ಮಾನ್ಯತೆಗಳು ಸಲುತ್ತದೆ. ಊರಿನ ತಂಟೆ ತಕರಾರುಗಳು ಇಲ್ಲಿ ಇತ್ಯರ್ಥವಾಗುತ್ತಿತ್ತು. ಊರಿನ ಪಟೇಲರು, ಬಂಟರು, ಸ್ವಜಾತಿ ಭಾಂದವರು ಕೂಡಿ ಈ ಮನೆಯಲ್ಲಿ ನ್ಯಾಯ ತೀರ್ಮಾನ ನೀಡುತ್ತಿದ್ದರು. ಮನೆಯ ಮಾಹಿತಿಯನ್ನು ಕೊಟ್ಟಂತಹ ವಿಶ್ವನಾಥ ಬಂಗೇರರು ಎಗ್ರಿಕಲ್ಚರ್ ಡಿಪಾರ್ಟ್ಮೆಂಟ್ ನ ಡೆಪ್ಯುಟಿ ಡೈರೆಕ್ಟರ್ ಆಗಿದ್ದವರು.
ಚಾವಡಿಯ ಮಧ್ಯ ಭಾಗದಲ್ಲಿ ದೈವಗಳ ಸಾನಿದ್ಯವಿದೆ. ಮಧ್ಯ ದಲ್ಲಿ ಕಾರಂದ್ರಾಯ ದೈವದ ಬೆಳ್ಳಿಯ ಮೂರ್ತಿಯಿದೆ. ಅದರ ಬಲ ಭಾಗದಲ್ಲಿ ಬೆಳ್ಳಿಯ ಗುರಾಣಿ ಮತ್ತು ಖಡ್ಗವಿದೆ. ಪ್ರತ್ಯೇಕ ಮಂಚದಲ್ಲಿ ಜುಮಾದಿ ಬಲಭಾಗದಲ್ಲಿ ಹಿರಿಯಾಕ್ಲುಗಳ ನಾಲ್ಕು ಪ್ರತಿಮೆಗಳಿವೆ. ಉತ್ತರಾಭಿಮುಖದ ಮಂಚದಲ್ಲಿ ಕಲ್ಲುರ್ಟಿ-ಪಂಜುರ್ಲಿ ದೈವಗಳ ಪ್ರತಿಮೆಗಳಿವೆ. ಚಾವಡಿಯ ಎಡಪಾರ್ಶ್ವದ ಕೋಣೆಯಲ್ಲಿ ಅಜ್ಜೆರು ಭಟ್ರು ಮತ್ತು ಮಂತ್ರಜಾವದೆಯ ಮೂರ್ತಿಗಳಿವೆ. ಇವುಗಳ ಬಲಭಾಗದಲ್ಲಿ ಭಟ್ಟರ ಪರಿವಾರದ 5 ಮೂರ್ತಿಗಳಿವೆ.(ಒಂದು ಕಲ್ಲುರ್ಟಿಯ ಮೂರ್ತಿ) ಎಡಭಾಗದಲ್ಲಿ ಅಜ್ಜೆರ ಪರಿವಾರದ 7 ಮೂರ್ತಿಗಳಿವೆ. ಅಜ್ಜೆರು ಭಟ್ರ ಪೂಜೆಯನ್ನು ಗಂಡಸರೇ ಮಾಡಬೇಕೆಂಬ ನಿಯಮವಿದೆ. ಅಜ್ಜೆರ್ ಭಟ್ಟರಿಗೆ Lakshmi G Prasadಏಪ್ರಿಲ್ ತಿಂಗಳಲ್ಲಿ ಪೂಜೆ ನಡೆಯುತ್ತದೆ. ಇಲ್ಲಿ ಗಮನಿಸಬೇಕಾದ ಒಂದು ಅಂಶವೆಂದರೆ ಈಗ ಉಡುಪಿ ಮತ್ತು ಉಪ್ಪಿನಂಗಡಿಯಲ್ಲಿ ನೆಲೆಸಿರುವ ಶಿವಳ್ಳಿ ಬ್ರಾಹ್ಮಣ ಕುಟುಂಬ ಏಪ್ರಿಲ್ ತಿಂಗಳ ಅಮಾವಾಸ್ಯೆಯಂದು ಈ ಮನೆಗೆ ಬಂದು ಬಾವಿಯಿಂದ ತಾನೇ ನೀರು ಸೇದಿ ಸ್ನಾನ ಮಾಡಿ ತಾವು ತಂದ ಪೂಜಾ ಪರಿಕರಗಳಿಂದ ಅಜ್ಜೆರು ಭಟ್ಟರಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ಇದಕ್ಕೆ ಒಂದು ಹಿನ್ನೆಲೆಯಿದೆ. ಸುಮಾರು ವರ್ಷಗಳ ಹಿಂದೆ ಎಡವಟ್ನಾಯ ಎಂಬ ಕುಲನಾಮದ ಒಬ್ಬ ಬ್ರಾಹ್ಮಣ ಮಂತ್ರವಾದಿಯು ಕಾರಂದೂರು ಬರ್ಕೆಯ ಪ್ರದೇಶಕ್ಕೆ ಒಂದು ಶಕ್ತಿಯ ಉಚ್ಚಾಟನೆಗಾಗಿ ಬರುತ್ತಾರೆ. ಅಂತಹ ಸಮಯದಲ್ಲಿ ತಮ್ಮನ್ನು ತಾವು ದಿಗ್ಬಂಧನಗೊಳಿಸಲು ಮರೆತುಹೋಗುತ್ತಾರೆ. ಉಚ್ಛಾಟನೆ ಕೆಲಸ ಮುಗಿಸಿಕೊಂಡು ಹಿಂತಿರುಗುವಾಗ ಕಾರಂದೂರು ಬರ್ಕೆಯ ಅಜ್ಜೆರು ದೈವಗಳು ಇವರನ್ನು ಹಿಂಬಾಲಿಸಿ ಮನೆಗೆ ಹೋಗುತ್ತವೆ. ಬಾಗಿಲ ಬಳಿಯಲ್ಲಿ ಮೂರು ಬಾರಿ ಎಡವಟ್ನಾಯೆರೆ ಎಂದು ಕರೆಯುತ್ತವೆ. ಬಾಗಿಲು ತೆಗೆದ ಎಡವಟ್ನಾಯರನ್ನು ಮಾಯ ಮಾಡಿ ಸೇರಿಗೆಗೆ ಸೇರಿಸಿ ಕಾರಂದೂರು ಬರ್ಕೆಯಲ್ಲಿ ನೆಲೆಯಾಗುವಂತೆ ಮಾಡುತ್ತವೆ. ಎಡವಟ್ನಾಯರ ಅಂತ್ಯಸಂಸ್ಕಾರ ಮಾಡಿದ ಅವರ ಕುಟುಂಬಕ್ಕೆ ದೋಷಗಳು ಕಾಣಿಸಿ ಸತ್ತ ವ್ಯಕ್ತಿಗೆ ಮೋಕ್ಷ ಸಿಕ್ಕಿಲ್ಲ ಅವರು ದೈವವಾಗಿ ಕಾರಂದೂರು ಬರ್ಕೆಯಲ್ಲಿ ನೆಲೆಯಾಗಿದ್ದಾರೆ. ಅವರ ಕುಟುಂಬ ಅಲ್ಲಿ ಹೋಗಿ ಪ್ರತೀ ವರ್ಷ ಪೂಜೆಮಾಡ ಬೇಕು ಆವಾಗ ಎಲ್ಲವೂ ಸರಿಯಾಗಿ ದೋಷ ನಿವಾರಣೆಯಾಗುತ್ತದೆಂದು ಪ್ರಶ್ನೆ ಯಲ್ಲಿ ತಿಳಿದುಬರುತ್ತದೆ. ಅದೇ ರೀತಿ ಆ ಕುಟುಂಬದ ಎರಡು ಕವಲು ಈಗಲೂ ಈ ಮನೆಗೆ ಬಂದು ಪೂಜೆಮಾಡಿ ತಮ್ಮ ಮನೆಯಲ್ಲಿ ಕೆಲವು ಕರ್ಮಗಳನ್ನು ಮುಗಿಸುತ್ತಾರೆ. ಇದೇ ರೀತಿಯ ಸಂಪ್ರದಾಯ ಕೌಡೋಡಿ ಗುತ್ತಿನಲ್ಲಿಯೂ ಇದ್ದು ಅಲ್ಲಿನ ಅಜ್ಜೆರು ಭಟ್ಟರನ್ನು ಆರಾಧಿಸುವ ಕುಟುಂಬಗಳು ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿದ್ದು ಅವರೂ ವರ್ಷಕ್ಕೊಮ್ಮೆ ಬಂದು ಪೂಜೆ ಸಲ್ಲಿಸುತ್ತಾರೆ. ಇದಕ್ಕೆ ಕಾರಣಗಳು ಬೇರೆ ಇರಬಹುದಾದರು ತಿಳಿದು ಬಂದಿಲ್ಲ.
ಮನೆಯ ದಕ್ಷಿಣ ಭಾಗದಲ್ಲಿ ಬಹುದೊಡ್ಡ ಹಟ್ಟಿ ಇದೆ. 7-8 ಜೋಡಿ ಉಳುವ ಕೋಣಗಳಿದ್ದ ಕಾಲ ಒಂದಿತ್ತು. ಆ ಕಾಲದಲ್ಲಿ ಹಸುಗಳ ದೊಡ್ಡ ಗುಂಪೇ ಇದ್ದಿತೆಂಬುದಕ್ಕೆ ವಿಶಾಲ ಹಟ್ಟಿಗೆ ಸಾಕ್ಷಿ. ದಿನ ನಿತ್ಯದ ಕೆಲಸಕ್ಕಾಗಿ 50ಕ್ಕೂ ಹೆಚ್ಚು ಕೆಲಸಗಾರರಿದ್ದ ಈ ಮನೆಯಲ್ಲಿ ಕೃಷಿ ಕೆಲಸ ಎಷ್ಟು ಸಮೃದ್ಧವಾಗಿತ್ತು ಎಂದು ತಿಳಿಯಬಹುದು.ಮನೆಯ ಪಶ್ಚಿಮ ಭಾಗದಲ್ಲಿ ಹೆರಿಗೆಯ ಕೋಣೆ ಇದೆ. ಚಾವಡಿಯ ಎಡಭಾಗದ ಕೋಣೆಯಲ್ಲಿ ಭತ್ತ ಕುಟ್ಟುತ್ತಿದ್ದ ಒರಳಿನಲ್ಲಿ ಗುಂಡಿಗಳು ಮತ್ತು ಒನಕೆಗಳು ಈಗ ಮೌನವಾಗಿವೆ. ಮನೆಯ ಕೆಳಗಿನ ಭಾಗದ ಗುಂಡಿಮಾರು ಗದ್ದೆಯಲ್ಲಿ ಸುಗ್ಗಿ ಮತ್ತು ಏಣೆಲು ಬೆಳೆಗಳನ್ನು ಕೊಯ್ಯುವ ಮೊದಲು ಮೂಲದವರಾದ ಮುಗೇರರು ಬಂದು ಹಾಲು ಇಟ್ಟು ಪ್ರಾರ್ಥಿಸುವ ಸಂಪ್ರದಾಯವಿದೆ. ಸೂತಕವಾದ ಹೆಂಗಸರು ಈ ಗದ್ದೆಗೆ ಇಳಿಯಲು ನಿಷೇದವಿದೆ. ಹೀಗೆ ಕಾರಂದೂರು ಬರ್ಕೆ ಮನೆಯು ಅನೇಕ ಇತಿಹಾಸಗಳುನ್ನು ಹೊಂದಿದೆ. (ಆಕರ – ಗರುತು. ಬಿಲ್ಲವರ ಗುತ್ತುಗಳು . ಮಾಹಿತಿ ಸಂಗ್ರಹ ಮತ್ತು ಗ್ರಂಥ ಸಂಪಾದಕರುಗಳು- ಬಿ.ಎಂ ರೋಹಿಣಿ, ರಮಾನಾಥ್ ಕೋಟೆಕಾರ್, ಮುದ್ದು ಮೂಡುಬೆಳ್ಳೆ. . )
ವಿನಂತಿ : ತುಳುನಾಡಿನ ಬಿಲ್ಲವರ ಗುತ್ತು, ಬಕೆ೯ಹಾಗೂ ಪ್ರತಿಷ್ಠಿತ ಮನೆತನಗಳ ಬಗ್ಗೆ ಮುಂಬಯಿ ಬಾಬು ಶಿವಪೂಜಾರಿಯವರ ಮುಂದಾಳುತ್ವದಲ್ಲಿ ಅಧ್ಯಯನ ನಡೆಯುತ್ತಿದ್ದು ಈಗಾಗಲೇ ಸುಮಾರು ೨೦೦ ಕ್ಕೂ ಹೆಚ್ಚು ಮನೆಗಳ ಬಗ್ಗೆ ದಾಖಲೀಕರಣ ವಾಗಿದೆ. ಇನ್ನೂ ಕೆಲವೇ ಸಮಯದೊಳಗೆ ಗ್ರಂಥ ರಚನೆಯಾಗಿ ಬಿಡುಗಡೆಗೊಳ್ಳಲಿದೆ. ಅದಕ್ಕಾಗಿ ಇಂತಹ ಮನೆತನಗಳ ಬಗ್ಗೆ ಯಾರಿಗಾದರು ತಿಳಿದಿದ್ದರೆ ತಿಳಿಸಿ
ಧನ್ಯವಾದಗಳು.
ಬಿಲ್ಲವರ ಗುತ್ತು ಮನೆತನಗಳು copyrights reserved (c)

ಸಂಕೇತ್ ಪೂಜಾರಿ

www.billavaswarriors.com


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »