TOP STORIES:

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್


ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷಪದ್ಮರಾಜ ಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ .5ರಂದು ಸಚಿವ ಸುನೀಲ್‌ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕುಎಂದು ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿತ್ತು. ಸಂದರ್ಭ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ವಿರೋಧ ಇರುವುದುಸರ್ಕಾರಕ್ಕೆ ಮನವರಿಕೆಯಾಗಿದ್ದು, ಕೋಶವನ್ನು ಹಿಂಪಡೆದು ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತಿಸುವುದಾಗಿ ಭರವಸೆಯನ್ನೂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಆದರೆ .6ರಂದು ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ  10 ಕೋಟಿ ರೂ. ಬಿಡುಗಡೆಗೊಳಿಸಿ ಆದೇಶ ಹೊರಡಿಸುವ ಮೂಲಕ ಸಮಾಜದ ದಾರಿ ತಪ್ಪಿಸುವ ಕಾರ್ಯ ನಡೆಸಿದೆ. ಬಿಲ್ಲವ ಈಡಿಗ ನಿಗಮದ ಬಗ್ಗೆತಮ್ಮ ನಿಲುವು ಏನು ಎಂಬುದನ್ನು ಕೂಡಲೇ ಸರ್ಕಾರ ಸ್ಪಷ್ಟಪಡಿಸಲಿ. ಯಾಕೆ ಪದೇ ಪದೇ ಗೊಂದಲ ಸೃಷ್ಟಿಸುತ್ತೀರಿ.

ಸುಮಾರು 26 ಪಂಗಡಗಳನ್ನು ಒಳಗೊಂಡ ಬಿಲ್ಲವ ಈಡಿಗ ನಾಮಧಾರಿ ಸಮಾಜಕ್ಕೆ ಪತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಹಿಂದಿನಿಂದಲೂ ಆಗ್ರಹಿಸುತ್ತಾ ಬರಲಾಗಿತ್ತು. ಆದರೆ ಬೇರೆ ಬೇರೆ ಕಾರಣ ಹೇಳಿ ಸರ್ಕಾರ ನಿಗಮ ಸ್ಥಾಪನೆಯನ್ನುಮುಂದೂಡುತ್ತಲೇ ಬರುತ್ತಿತ್ತು. ಇದರ ಮಧ್ಯದಲ್ಲಿ ಬಿಲ್ಲವ ಅಭಿವೃದ್ಧಿ ಕೋಶ ಸ್ಥಾಪನೆ ಮಾಡಿ ಆದೇಶ ಹೊರಡಿಸಿತ್ತು. ಜೀವವಿಲ್ಲದಕೋಶ ಮತ್ತು ನಿಗಮಕ್ಕೆ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಅಂದೇ ಕೋಶಕ್ಕೆ ಸಮಾಜ ವಿರೋಧ ವ್ಯಕ್ತಪಡಿಸಿತ್ತು.

ಕೋಶ ದೊಡ್ಡ ಮೋಸ. ಇದರಲ್ಲಿ ಏನು ಕೂಡ ಇಲ್ಲ. ಬಿಲ್ಲವ ಈಡಿಗರ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಸ್ಥಾಪಿಸಿ ಇದಕ್ಕೆ 5೦೦ ಕೋಟಿ ಮೀಸಲಿಡಿ ಎಂಬ ಸಮಾಜದ ಬೇಡಿಕೆಗೆ ಸ್ಪಂದಿಸುವ ಬದಲು ಬಿಲ್ಲವ ಸಮಾಜದಲ್ಲಿ ಒಡಕುಉಂಟುಮಾಡುವ ರಾಜಕೀಯ ಕಾರ್ಯತಂತ್ರದ ಭಾಗವಾಗಿ ಕಳೆದ .5ರಂದು ಆಯ್ದ ಕೆಲವರನ್ನು ಬೆಂಗಳೂರಿಗೆ ಕರೆಸಿ ಬ್ರಹ್ಮಶ್ರೀನಾರಾಯಣಗುರು ನಿಗಮ ಘೋಷಣೆ ಇದೆ ಎಂದು ಹೇಳಿ ದಾರಿ ತಪ್ಪಿಸಲಾಗಿತ್ತು. ಕೆಲವರು ಸಂಭ್ರಮ ಪಟ್ಟು ಬ್ರಹ್ಮಶ್ರೀನಾರಾಯಣಗುರು ನಿಗಮ ಆಯಿತು ಎಂಬ ರಾಜಕಾರಣಿಗಳ ಪೊಳ್ಳು ಭರವಸೆಗೆ ಅಭಿನಂದನೆಯನ್ನೂ ಸಲ್ಲಿಸಿಯಾಗಿತ್ತು.

ಇದೀಗ ಅದರ ಬೆನ್ನಲ್ಲೇ .6ರಂದು ಸರ್ಕಾರ ಬಿಲ್ಲವ ಅಭಿವೃದ್ಧಿ ಕೋಶಕ್ಕೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿ ಸರ್ಕಾರ ಅಧೀನಕಾರ್ಯದರ್ಶಿ ಆದೇಶಿಸಿದ್ದಾರೆ. ಇದರ ಅರ್ಥ ಏನು? ಅನಗತ್ಯ ಗೊಂದಲ ಸೃಷ್ಟಿಸುವುದರ ಉದ್ದೇಶವಾದರೂ ಏನುಆದ್ದರಿಂದಸರ್ಕಾರಕ್ಕೆ ನಿಗಮ ಸ್ಥಾಪನೆ ಮಾಡಲು ಸಾಧ್ಯ ಇಲ್ಲದಿದ್ದರೆ ಇಲ್ಲ ಎಂದು ನೇರವಾಗಿ ತಿಳಿಸಲಿ. ಅದು ಬಿಟ್ಟು ಬೋಗಸ್ ಭರವಸೆನೀಡುತ್ತಾ ಬರುತ್ತಿರುವುದು ಖಂಡನಾರ್ಹ.

ಮಾತ್ರವಲ್ಲದೆ ಸರ್ಕಾರದ ನಿಲುವು ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ ಅಭಿನಂದನೆ ಸಲ್ಲಿಸಿರುವುದೂ ಕೂಡ ಖೇದಕರ. ನಾಯಕರುಎನಿಸಿಕೊಂಡವರನ್ನು ಸಮಾಜ ಅನುಸರಿಸಿಕೊಂಡು ಹೋಗುತ್ತದೆ. ಅವರ ಮೇಲೆ ಅತಿಯಾದ ವಿಶ್ವಾಸವನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ಯಾವುದೇ ಸ್ಪಷ್ಟತೆ ಇಲ್ಲದೆ ಗಡಿಬಿಡಿಯಲ್ಲಿ ಸರ್ಕಾರದ ನಿಲುವನ್ನು ಸ್ವಾಗತಿಸಿ ದ್ವಂದ್ವ ನಿಲುವು ಪ್ರಕಟಿಸಿದರೆ ಸಮಾಜದದಾರಿ ತಪ್ಪಿದಂತೆಯೂ ಆಗುತ್ತದೆ. ಹಿಂದೆ ಸಮಾಜ ನಡೆಸಿದ ಹೋರಾಟಕ್ಕೂ ಯಾವುದೇ ಮಾನ್ಯತೆ ಇಲ್ಲದಂತಾಗುತ್ತದೆ ಎಂದುಪದ್ಮರಾಜ್ ಆಕ್ರೋಶ ವ್ಯಕ್ತಪಡಿಸಿದರು.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »