TOP STORIES:

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್


ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷಪದ್ಮರಾಜ ಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ .5ರಂದು ಸಚಿವ ಸುನೀಲ್‌ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕುಎಂದು ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿತ್ತು. ಸಂದರ್ಭ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ವಿರೋಧ ಇರುವುದುಸರ್ಕಾರಕ್ಕೆ ಮನವರಿಕೆಯಾಗಿದ್ದು, ಕೋಶವನ್ನು ಹಿಂಪಡೆದು ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತಿಸುವುದಾಗಿ ಭರವಸೆಯನ್ನೂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಆದರೆ .6ರಂದು ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ  10 ಕೋಟಿ ರೂ. ಬಿಡುಗಡೆಗೊಳಿಸಿ ಆದೇಶ ಹೊರಡಿಸುವ ಮೂಲಕ ಸಮಾಜದ ದಾರಿ ತಪ್ಪಿಸುವ ಕಾರ್ಯ ನಡೆಸಿದೆ. ಬಿಲ್ಲವ ಈಡಿಗ ನಿಗಮದ ಬಗ್ಗೆತಮ್ಮ ನಿಲುವು ಏನು ಎಂಬುದನ್ನು ಕೂಡಲೇ ಸರ್ಕಾರ ಸ್ಪಷ್ಟಪಡಿಸಲಿ. ಯಾಕೆ ಪದೇ ಪದೇ ಗೊಂದಲ ಸೃಷ್ಟಿಸುತ್ತೀರಿ.

ಸುಮಾರು 26 ಪಂಗಡಗಳನ್ನು ಒಳಗೊಂಡ ಬಿಲ್ಲವ ಈಡಿಗ ನಾಮಧಾರಿ ಸಮಾಜಕ್ಕೆ ಪತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಹಿಂದಿನಿಂದಲೂ ಆಗ್ರಹಿಸುತ್ತಾ ಬರಲಾಗಿತ್ತು. ಆದರೆ ಬೇರೆ ಬೇರೆ ಕಾರಣ ಹೇಳಿ ಸರ್ಕಾರ ನಿಗಮ ಸ್ಥಾಪನೆಯನ್ನುಮುಂದೂಡುತ್ತಲೇ ಬರುತ್ತಿತ್ತು. ಇದರ ಮಧ್ಯದಲ್ಲಿ ಬಿಲ್ಲವ ಅಭಿವೃದ್ಧಿ ಕೋಶ ಸ್ಥಾಪನೆ ಮಾಡಿ ಆದೇಶ ಹೊರಡಿಸಿತ್ತು. ಜೀವವಿಲ್ಲದಕೋಶ ಮತ್ತು ನಿಗಮಕ್ಕೆ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಅಂದೇ ಕೋಶಕ್ಕೆ ಸಮಾಜ ವಿರೋಧ ವ್ಯಕ್ತಪಡಿಸಿತ್ತು.

ಕೋಶ ದೊಡ್ಡ ಮೋಸ. ಇದರಲ್ಲಿ ಏನು ಕೂಡ ಇಲ್ಲ. ಬಿಲ್ಲವ ಈಡಿಗರ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಸ್ಥಾಪಿಸಿ ಇದಕ್ಕೆ 5೦೦ ಕೋಟಿ ಮೀಸಲಿಡಿ ಎಂಬ ಸಮಾಜದ ಬೇಡಿಕೆಗೆ ಸ್ಪಂದಿಸುವ ಬದಲು ಬಿಲ್ಲವ ಸಮಾಜದಲ್ಲಿ ಒಡಕುಉಂಟುಮಾಡುವ ರಾಜಕೀಯ ಕಾರ್ಯತಂತ್ರದ ಭಾಗವಾಗಿ ಕಳೆದ .5ರಂದು ಆಯ್ದ ಕೆಲವರನ್ನು ಬೆಂಗಳೂರಿಗೆ ಕರೆಸಿ ಬ್ರಹ್ಮಶ್ರೀನಾರಾಯಣಗುರು ನಿಗಮ ಘೋಷಣೆ ಇದೆ ಎಂದು ಹೇಳಿ ದಾರಿ ತಪ್ಪಿಸಲಾಗಿತ್ತು. ಕೆಲವರು ಸಂಭ್ರಮ ಪಟ್ಟು ಬ್ರಹ್ಮಶ್ರೀನಾರಾಯಣಗುರು ನಿಗಮ ಆಯಿತು ಎಂಬ ರಾಜಕಾರಣಿಗಳ ಪೊಳ್ಳು ಭರವಸೆಗೆ ಅಭಿನಂದನೆಯನ್ನೂ ಸಲ್ಲಿಸಿಯಾಗಿತ್ತು.

ಇದೀಗ ಅದರ ಬೆನ್ನಲ್ಲೇ .6ರಂದು ಸರ್ಕಾರ ಬಿಲ್ಲವ ಅಭಿವೃದ್ಧಿ ಕೋಶಕ್ಕೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿ ಸರ್ಕಾರ ಅಧೀನಕಾರ್ಯದರ್ಶಿ ಆದೇಶಿಸಿದ್ದಾರೆ. ಇದರ ಅರ್ಥ ಏನು? ಅನಗತ್ಯ ಗೊಂದಲ ಸೃಷ್ಟಿಸುವುದರ ಉದ್ದೇಶವಾದರೂ ಏನುಆದ್ದರಿಂದಸರ್ಕಾರಕ್ಕೆ ನಿಗಮ ಸ್ಥಾಪನೆ ಮಾಡಲು ಸಾಧ್ಯ ಇಲ್ಲದಿದ್ದರೆ ಇಲ್ಲ ಎಂದು ನೇರವಾಗಿ ತಿಳಿಸಲಿ. ಅದು ಬಿಟ್ಟು ಬೋಗಸ್ ಭರವಸೆನೀಡುತ್ತಾ ಬರುತ್ತಿರುವುದು ಖಂಡನಾರ್ಹ.

ಮಾತ್ರವಲ್ಲದೆ ಸರ್ಕಾರದ ನಿಲುವು ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ ಅಭಿನಂದನೆ ಸಲ್ಲಿಸಿರುವುದೂ ಕೂಡ ಖೇದಕರ. ನಾಯಕರುಎನಿಸಿಕೊಂಡವರನ್ನು ಸಮಾಜ ಅನುಸರಿಸಿಕೊಂಡು ಹೋಗುತ್ತದೆ. ಅವರ ಮೇಲೆ ಅತಿಯಾದ ವಿಶ್ವಾಸವನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ಯಾವುದೇ ಸ್ಪಷ್ಟತೆ ಇಲ್ಲದೆ ಗಡಿಬಿಡಿಯಲ್ಲಿ ಸರ್ಕಾರದ ನಿಲುವನ್ನು ಸ್ವಾಗತಿಸಿ ದ್ವಂದ್ವ ನಿಲುವು ಪ್ರಕಟಿಸಿದರೆ ಸಮಾಜದದಾರಿ ತಪ್ಪಿದಂತೆಯೂ ಆಗುತ್ತದೆ. ಹಿಂದೆ ಸಮಾಜ ನಡೆಸಿದ ಹೋರಾಟಕ್ಕೂ ಯಾವುದೇ ಮಾನ್ಯತೆ ಇಲ್ಲದಂತಾಗುತ್ತದೆ ಎಂದುಪದ್ಮರಾಜ್ ಆಕ್ರೋಶ ವ್ಯಕ್ತಪಡಿಸಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »