TOP STORIES:

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…


ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ  ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದಶಕ್ತಿಗಳ ದರ್ಶನ ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ನಂತರ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ ನೂತನ ಯಕ್ಷಗಾನ ಮೇಳದಕರಪತ್ರವನ್ನು ಕ್ಷೇತ್ರಾಡಳಿತ ಸಮಿತಿಯ ಪದಾಧಿಕಾರಿಗಳು ಶ್ರೀಯುತರಿಗೆ ಹಸ್ತಾಂತರಿಸಿದರು.

ಕ್ಷೇತ್ರದ ಭಕ್ತಿಯ ಶ್ರದ್ಧಾ ಕೇಂದ್ರ ನಿರ್ಮಾಣದ ಬಗ್ಗೆ ಹಾಗು ಕ್ಷೇತ್ರದಲ್ಲಿ ಮುಂದೆ ನಡೆಯಲಿರುವ ಅಭಿವೃದ್ಧಿಯ ಕೆಲಸ ಕಾರ್ಯಗಳುಮತ್ತು ಕ್ಷೇತ್ರದ ನೂತನ ಯಕ್ಷಗಾನ ಮೇಳದ ಬಗ್ಗೆ, ಕ್ಷೇತ್ರವನ್ನು ಸಂದರ್ಶಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕ್ಷೇತ್ರದ ಸಾನಿಧ್ಯ ಶಕ್ತಿಗಳ ಕಾರಣೀಕದ ಮಹತ್ವವನ್ನು ತಾನು ಕೊಂಡಾಡಿ ಭಕ್ತಿ ಪರಮಷರಾಗಿ ಕ್ಷೇತ್ರದ ಮುಂದಿನ ಅಭಿವೃದ್ಧಿ ಕೆಲಸಕಾರ್ಯಗಳಿಗೆ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡು ತನ್ನವರನ್ನು ಪ್ರೇರೇಪಿಸುವುದರ ಜೊತೆಗೆ ಇದು ಸಮಾಜದಒಂದು ಪ್ರಬಲ ಶಕ್ತಿ ಕೇಂದ್ರವಾಗಬೇಕು ಎಂದು ಇಂಗಿತ ವ್ಯಕ್ತಪಡಿಸಿದ ಶ್ರೀಯುತರು ಎಲ್ಲರನ್ನು ಒಗ್ಗೂಡಿಸುವ ಭರವಸೆಯನ್ನುನೀಡಿದರು.

ಶ್ರೀ ಗೆಜ್ಜೆಗಿರಿ ನೂತನ ಯಕ್ಷಗಾನ ಮೇಳದ ರಂಗಸ್ಥಳದ ವೆಚ್ಚವನ್ನು ಮಾತೆಯ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದರು. ದುಬೈಯ ತಮ್ಮ ಮಿತ್ರರು ಮತ್ತು ಸಮಾಜ ಭಾಂಧವರನ್ನು ಪ್ರೇರೇಪಿಸಿ ಇನ್ನಷ್ಟು ಹೆಚ್ಚಿನ ಮೊತ್ತವನ್ನು ಗೆಜ್ಜೆಗಿರಿಯ ನೂತನ ಯಕ್ಷಗಾನಮೇಳಕ್ಕೆ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸುವುದಾಗಿ ಭರವಸೆಯನ್ನು ನೀಡಿದರು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಬಿಲ್ಲವಾಸ್ ದುಬೈ ಕೂಟದ ವತಿಯಿಂದ ದೊಡ್ಡ ಮೊತ್ತವನ್ನು ಸೇವಾರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳುನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಶ್ರೀ ದೇಯಿಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »