TOP STORIES:

FOLLOW US

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…


ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ  ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದಶಕ್ತಿಗಳ ದರ್ಶನ ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ನಂತರ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ ನೂತನ ಯಕ್ಷಗಾನ ಮೇಳದಕರಪತ್ರವನ್ನು ಕ್ಷೇತ್ರಾಡಳಿತ ಸಮಿತಿಯ ಪದಾಧಿಕಾರಿಗಳು ಶ್ರೀಯುತರಿಗೆ ಹಸ್ತಾಂತರಿಸಿದರು.

ಕ್ಷೇತ್ರದ ಭಕ್ತಿಯ ಶ್ರದ್ಧಾ ಕೇಂದ್ರ ನಿರ್ಮಾಣದ ಬಗ್ಗೆ ಹಾಗು ಕ್ಷೇತ್ರದಲ್ಲಿ ಮುಂದೆ ನಡೆಯಲಿರುವ ಅಭಿವೃದ್ಧಿಯ ಕೆಲಸ ಕಾರ್ಯಗಳುಮತ್ತು ಕ್ಷೇತ್ರದ ನೂತನ ಯಕ್ಷಗಾನ ಮೇಳದ ಬಗ್ಗೆ, ಕ್ಷೇತ್ರವನ್ನು ಸಂದರ್ಶಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕ್ಷೇತ್ರದ ಸಾನಿಧ್ಯ ಶಕ್ತಿಗಳ ಕಾರಣೀಕದ ಮಹತ್ವವನ್ನು ತಾನು ಕೊಂಡಾಡಿ ಭಕ್ತಿ ಪರಮಷರಾಗಿ ಕ್ಷೇತ್ರದ ಮುಂದಿನ ಅಭಿವೃದ್ಧಿ ಕೆಲಸಕಾರ್ಯಗಳಿಗೆ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡು ತನ್ನವರನ್ನು ಪ್ರೇರೇಪಿಸುವುದರ ಜೊತೆಗೆ ಇದು ಸಮಾಜದಒಂದು ಪ್ರಬಲ ಶಕ್ತಿ ಕೇಂದ್ರವಾಗಬೇಕು ಎಂದು ಇಂಗಿತ ವ್ಯಕ್ತಪಡಿಸಿದ ಶ್ರೀಯುತರು ಎಲ್ಲರನ್ನು ಒಗ್ಗೂಡಿಸುವ ಭರವಸೆಯನ್ನುನೀಡಿದರು.

ಶ್ರೀ ಗೆಜ್ಜೆಗಿರಿ ನೂತನ ಯಕ್ಷಗಾನ ಮೇಳದ ರಂಗಸ್ಥಳದ ವೆಚ್ಚವನ್ನು ಮಾತೆಯ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದರು. ದುಬೈಯ ತಮ್ಮ ಮಿತ್ರರು ಮತ್ತು ಸಮಾಜ ಭಾಂಧವರನ್ನು ಪ್ರೇರೇಪಿಸಿ ಇನ್ನಷ್ಟು ಹೆಚ್ಚಿನ ಮೊತ್ತವನ್ನು ಗೆಜ್ಜೆಗಿರಿಯ ನೂತನ ಯಕ್ಷಗಾನಮೇಳಕ್ಕೆ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸುವುದಾಗಿ ಭರವಸೆಯನ್ನು ನೀಡಿದರು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಬಿಲ್ಲವಾಸ್ ದುಬೈ ಕೂಟದ ವತಿಯಿಂದ ದೊಡ್ಡ ಮೊತ್ತವನ್ನು ಸೇವಾರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳುನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಶ್ರೀ ದೇಯಿಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »