TOP STORIES:

FOLLOW US

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…


ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ  ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದಶಕ್ತಿಗಳ ದರ್ಶನ ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ನಂತರ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ ನೂತನ ಯಕ್ಷಗಾನ ಮೇಳದಕರಪತ್ರವನ್ನು ಕ್ಷೇತ್ರಾಡಳಿತ ಸಮಿತಿಯ ಪದಾಧಿಕಾರಿಗಳು ಶ್ರೀಯುತರಿಗೆ ಹಸ್ತಾಂತರಿಸಿದರು.

ಕ್ಷೇತ್ರದ ಭಕ್ತಿಯ ಶ್ರದ್ಧಾ ಕೇಂದ್ರ ನಿರ್ಮಾಣದ ಬಗ್ಗೆ ಹಾಗು ಕ್ಷೇತ್ರದಲ್ಲಿ ಮುಂದೆ ನಡೆಯಲಿರುವ ಅಭಿವೃದ್ಧಿಯ ಕೆಲಸ ಕಾರ್ಯಗಳುಮತ್ತು ಕ್ಷೇತ್ರದ ನೂತನ ಯಕ್ಷಗಾನ ಮೇಳದ ಬಗ್ಗೆ, ಕ್ಷೇತ್ರವನ್ನು ಸಂದರ್ಶಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕ್ಷೇತ್ರದ ಸಾನಿಧ್ಯ ಶಕ್ತಿಗಳ ಕಾರಣೀಕದ ಮಹತ್ವವನ್ನು ತಾನು ಕೊಂಡಾಡಿ ಭಕ್ತಿ ಪರಮಷರಾಗಿ ಕ್ಷೇತ್ರದ ಮುಂದಿನ ಅಭಿವೃದ್ಧಿ ಕೆಲಸಕಾರ್ಯಗಳಿಗೆ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡು ತನ್ನವರನ್ನು ಪ್ರೇರೇಪಿಸುವುದರ ಜೊತೆಗೆ ಇದು ಸಮಾಜದಒಂದು ಪ್ರಬಲ ಶಕ್ತಿ ಕೇಂದ್ರವಾಗಬೇಕು ಎಂದು ಇಂಗಿತ ವ್ಯಕ್ತಪಡಿಸಿದ ಶ್ರೀಯುತರು ಎಲ್ಲರನ್ನು ಒಗ್ಗೂಡಿಸುವ ಭರವಸೆಯನ್ನುನೀಡಿದರು.

ಶ್ರೀ ಗೆಜ್ಜೆಗಿರಿ ನೂತನ ಯಕ್ಷಗಾನ ಮೇಳದ ರಂಗಸ್ಥಳದ ವೆಚ್ಚವನ್ನು ಮಾತೆಯ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದರು. ದುಬೈಯ ತಮ್ಮ ಮಿತ್ರರು ಮತ್ತು ಸಮಾಜ ಭಾಂಧವರನ್ನು ಪ್ರೇರೇಪಿಸಿ ಇನ್ನಷ್ಟು ಹೆಚ್ಚಿನ ಮೊತ್ತವನ್ನು ಗೆಜ್ಜೆಗಿರಿಯ ನೂತನ ಯಕ್ಷಗಾನಮೇಳಕ್ಕೆ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸುವುದಾಗಿ ಭರವಸೆಯನ್ನು ನೀಡಿದರು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಬಿಲ್ಲವಾಸ್ ದುಬೈ ಕೂಟದ ವತಿಯಿಂದ ದೊಡ್ಡ ಮೊತ್ತವನ್ನು ಸೇವಾರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳುನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಶ್ರೀ ದೇಯಿಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »