TOP STORIES:

FOLLOW US

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.


ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ ಬಿಜೆಪಿ ಸರ್ಕಾರ ಬಿಲ್ಲವ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದಂತಿದೆಎಂದುಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ರಾಜ್ಯದ ನಾಲ್ಕನೇ ಅತೀ ದೊಡ್ಡ ಸಮುದಾಯವಾದ, ಸುಮಾರು 70 ಲಕ್ಷಜನಸಂಖ್ಯೆ ಇರುವ ಬಿಲ್ಲವಈಡಿಗ ಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಇರುವ ಸಮಸ್ಯೆ ಏನು? ಇದು ಸರ್ಕಾರಕ್ಕೆಬಿಲ್ಲವ ಸಮುದಾಯದ ಮೇಲೆ ಇರುವ ತಾತ್ಸಾರ ಭಾವನೆ ಅಲ್ಲದೆ ಮತ್ತೇನು?” ಎಂದು ಕೇಳಿದರು.

ಬಿಲ್ಲವ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಆರು ವರ್ಷದಿಂದ ಹೋರಟ ಮಾಡುತ್ತಿದ್ದೇವೆ. ತೀರಾ ಕಡಿಮೆ ಜನಸಂಖ್ಯೆಇರುವ ಹಲವು ಹಿಂದುಳಿದ ಸಮುದಾಯಕ್ಕೆ ನಿಗಮಗಳನ್ನು ಸ್ಥಾಪಿಸಲಾಗಿದೆ, ಬಗ್ಗೆ ನಮಗೆ ತಕರಾರು ಏನಿಲ್ಲ. ಅದರ ಜೊತೆಗೆಆರ್ಥಿಕವಾಗಿ ಬಲಿಷ್ಠರಾಗಿರುವ ಒಕ್ಕಲಿಗ, ಬ್ರಾಹ್ಮಣ ಮತ್ತು ಮರಾಠ ಸಮುದಾಯಗಳಿಗೆ ನಿಗಮಗಳಿವೆ. ಆದರೆ ಬಿಲ್ಲವಈಡಿಗಸಮುದಾಯಕ್ಕೆ ಒಂದು ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಸಮಸ್ಯೆಯೇನಿದೆಎಂದು ಪ್ರಶ್ನಿಸಿದರು.

ಸರ್ಕಾರ ಹೊಸದಾಗಿ ನೀಡಿರುವಕೋಶವನ್ನು ಸ್ಥಾಪನೆ ಮಾಡದೆ ಇದ್ದರೆ ಒಳ್ಳೆಯದಿತ್ತು. ‘ಕೋಶಸ್ಥಾಪನೆ ಎಂಬುವುದು ಚುನಾವಣೆಹತ್ತಿರ ಇರಬೇಕಾದರೆ ಜನರನ್ನು ದಾರಿ ತಪ್ಪಿಸುವ ಒಂದು ದಾರಿಯಷ್ಟೆ. ನಿಗಮಕ್ಕೂ ಕೋಶಕ್ಕು ಬಹಳಷ್ಟು ವ್ಯತ್ಯಾಸವಿದೆ, ಇದರಿಂದಸಮುದಾಯಕ್ಕೆ ಒಂದಿಷ್ಟು ಲಾಭವಿಲ್ಲ ಎಂದು ಪದ್ಮರಾಜ್ ಹೇಳಿದರು.

ನಿಗಮ ಎಂದರೆ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಅದಕ್ಕೆ ಒಂದು ಸ್ವಾಯತ್ತತೆ ಇರುತ್ತದೆ. ಅದಕ್ಕೆ ತನ್ನದೇ ಆದ ಕಾನೂನು, ಸಂವಿಧಾನ ಇರುತ್ತದೆ. ನಿಗಮಕ್ಕೆ ಒಬ್ಬ ಅಧ್ಯಕ್ಷರು ಇರುತ್ತಾರೆ, ಸದಸ್ಯರು ಇರುತ್ತಾರೆ, ನಿದೇಶಕರು ಇರುತ್ತಾರೆ. ಇಲ್ಲೆಲ್ಲಾ ಸಮುದಾಯದಪ್ರತಿನಿಧಿಗಳಿದ್ದು, ಇವರೆಲ್ಲಾ ತಮ್ಮ ಪರಿಧಿಯಲ್ಲಿ ಸಮುದಾಯದ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಧಿಕಾರ ಇರುತ್ತದೆ. ಕೋಶಎಂದರೆ, ನಿರ್ದೇಶನಾಲಯ ಅಡಿಯಲ್ಲಿ ಬರುವ ಒಂದು ಸಣ್ಣ ಅಂಗ ಸಂಸ್ಥೆ ಮಾತ್ರವಾಗಿದೆಎಂದು ಅವರು ತಿಳಿಸಿದರು.

ಕೋಶಕ್ಕೆ ಸರ್ಕಾರದ ಕಡೆಯಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂಬುವುದನ್ನು ಬಿಟ್ಟು, ಅಧಿಕಾರಿಗೆ ಕೂಡಾ ಯಾವುದೇ ಅಧಿಕಾರಇರುವುದಿಲ್ಲ. ಎಲ್ಲವನ್ನೂ ತನ್ನ ಮೇಲಾಧಿಕಾರಿಯ ಅಡಿಯಲ್ಲೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಮುದಾಯವನ್ನುಪ್ರತಿನಿಧಿಸುವ ಒಬ್ಬನೇ ಒಬ್ಬ ಸದಸ್ಯ ಕೋಶದಲ್ಲಿ ಇರುವುದಿಲ್ಲ. ಇದೊಂದು ಹಲ್ಲಿಲ್ಲದ ಹಾವು ಎಂದೇ ಹೇಳಬಹುದುಎಂದುಅವರು ಅಭಿಪ್ರಾಯಪಟ್ಟರು.

ಚುನಾವಣೆ ಹೊತ್ತಿಗೆ ನಾವು ಹಿಂದುಳಿದ ವರ್ಗಗಳಿಗೆಏನೋನೀಡಿದ್ದೇವೆ ಎಂದು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕೇವಲ ಬಿಲ್ಲವಸಮಾಜಕ್ಕೆ ಮಾತ್ರವಲ್ಲ, ಸಮಸ್ತ ಹಿಂದುಳಿದ ವರ್ಗಗಳನ್ನು ಮತ್ತೇ ಹಿಂದುಳಿಯುವಂತೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಲೆಇವೆ. ಸರ್ಕಾರ ಹೊಸದಾಗಿ ರಚಿಸಲಿರುವ ಕೋಶವು ನಿಗಮಗಳು ಮಾಡುವ 2% ಕೆಲಸಗಳನ್ನು ಮಾಡುವುದಿಲ್ಲಎಂದು ಅವರುಅಸಮಾಧಾನ ವ್ಯಕ್ತಪಡಿಸಿದರು.

ಕೋಶಕ್ಕೆ ಅನುದಾನ ನೀಡುತ್ತೇವೆ ಎಂದು ಸರ್ಕಾರ ಹೇಳಿದೆ, ಆದರೆ ಎಷ್ಟು ನೀಡುತ್ತೇವೆ ಎಂದು ಇನ್ನೂ ಹೇಳಿಲ್ಲ ಎಂದು ಹೇಳಿದಪದ್ಮರಾಜ್, “ನನ್ನ ಪ್ರಕಾರ ಹೆಚ್ಚೆಂದರೆ 10 ರಿಂದ 15 ಕೋಟಿ ನೀಡಬಹುದು. ಆದರೆ ನಿಗಮಗಳಿಗೆ ಕಡಿಮೆಯೆಂದರೂ 100-200 ಕೋಟಿ ನೀಡಬೇಕಾಗುತ್ತದೆ. ಒಂದು ವೇಳೆ ಕೋಶಕ್ಕೆ 100 ಕೋಟಿ ಕೊಡುತ್ತೇವೆ ಎಂದರೂ ಅದನ್ನು ಸಮುದಾಯದ ಅಭಿವೃದ್ಧಿಗೆಸುಲಭದಲ್ಲಿ ಖರ್ಚು ಮಾಡಲು ಸಾಧ್ಯವಿಲ್ಲ

ಹಿಂದೆ ಶೇಂದಿ ಇಳಿಸುವವರಿಗೆ ಪರ್ಯಾಯ ಉದ್ಯೋಗಕ್ಕೆ ಸಹಾಯ ಎಂದು ಸಿದ್ದರಾಮಯ್ಯ ಸರ್ಕಾರ 12 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಅದರಲ್ಲಿ ಖರ್ಚಾಗಿದ್ದು, 2-3 ಕೋಟಿ ಮಾತ್ರ. ಉಳಿದ ಹಣ ಈಗಲೂ ಇದೆ. ಇದೇ ರೀತಿಕೋಶದಲ್ಲೂ ನಡೆಯುತ್ತದೆಎಂದು ತಿಳಿಸಿದರು.

ಒಂದು ವೇಳೆ ಹತ್ತು ಕೋಟಿ ನೀಡುತ್ತೇವೆ ಎಂದು ಹೇಳಿದರೂ, ಕೋಶದಲ್ಲಿ ಸಮುದಾಯದ ಯಾವೊಬ್ಬ ಪ್ರತಿನಿಧಿಯು ಇರದೆಇದ್ದುದರಿಂದ ಅದನ್ನು ಕೂಡಾ ಹಲವು ಕಾರಣಗಳನ್ನು ನೀಡಿ ಹಾಗೆಯೆ ಇಡುತ್ತಾರೆಯೆ ಹೊರತು ಬಳಸುವುದಿಲ್ಲ. ಬ್ರಾಹ್ಮಣ ಮತ್ತುಲಿಂಗಾಯತ ನಿಗಮವನ್ನು ನೀಡಿದ್ದು ತೀರಾ ಇತ್ತೀಚೆಗೆ ಹೀಗಿರುವಾಗ ಬಿಲ್ಲವರಿಗೆ ನಿಮಗವನ್ನು ಯಾಕೆ ನೀಡಬಾರದುಎಂದುಪದ್ಮರಾಜ್ ಆರ್‌‌. ಹೇಳಿದರು.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »