TOP STORIES:

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.


ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ.

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.

ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇವರುಗಳಾದ ಕೋಟಿಚೆನ್ನಯ್ಯಗರಡಿಗಳಲ್ಲಿ ಪೂಜೆ ಮಾಡುವ ಗರಡಿ ಅರ್ಚಕರು, ದರ್ಶನ ಪಾತ್ರಿಗಳು ಇನ್ನಿತರ ಸಿಬ್ಬಂದಿಗಳು ಇತರ ದೇವಸ್ಥಾನಗಳ ಸಿಬ್ಬಂದಿಗಳಂತೆಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಇವರ ನೆರವಿಗೆ ಬರಬೇಕಾಗಿದೆ. ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಸ್ವಸಹಾಯ ಸಂಘವನ್ನುರಚನೆ ಮಾಡಿಕೊಂಡಿರುವ  40 ಸಾವಿರಕ್ಕೂ ಮಿಕ್ಕಿದ ಸದಸ್ಯೆಯರು ನಿರುದ್ಯೋಗಿಗಳಾಗಿದ್ದರೆ, ಈಡಿಗ/ಬಿಲ್ಲವರ ಕುಲಕಸುಬುಸ್ಥಬ್ದವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಸಹಿತ ಸರ್ವರು ಬಿಲ್ಲವ ಜನಾಂಗದ ಬಗ್ಗೆಗಮನ ಹರಿಸಿ, ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು, ಬಿಲ್ಲವ ಜನಾಂಗಕ್ಕೆ ನ್ಯಾಯ ಒದಗಿಸಿ ಕೂಡಲೇ ಪರಿಹಾರಘೋಷಿಸಬೇಕೆಂದು ಬಿಲ್ಲವ ಸಮಾಜದ ಮುಖಂಡ ಮಾಜಿ ಜಿ.ಪಂ.ಅಧ್ಯಕ್ಷರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರು ಆಗಿರುವಬಿ.ಎನ್.ಶಂಕರ ಪೂಜಾರಿಯವರು ಎಲ್ಲಾ ಶಾಸಕರಿಗೆ, ಸಂಸದರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಎಲ್ಲರಿಗೂ ಪರಿಹಾರನೀಡುವಾಗ ನಮ್ಮ ಜನಾಂಗವನ್ನು ಕೈ ಬಿಟ್ಟಿರುವುದು ನೋವುಂಟು ಮಾಡಿದೆ ಎಂದು ಬಿ.ಎನ್.ಶಂಕರ ಪೂಜಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »