TOP STORIES:

ಬಿಲ್ಲವ ಮರಕ್ಕೂರು ಜನನದ ಮನೆತನದಲ್ಲಿ ನಡೆಯುವ ಕಂಡಕೋರಿ ಆಚರಣೆ


ಒಂದು ಕಾಲದಲ್ಲಿ ಶ್ರೀಮಂತಿಕೆಯಿಂದ ಅದೇ ರೀತಿ ಗತ್ತಿನಿಂದ ಮೆರೆದು ಇಂದಿಗು ಅದೇ ಭವ್ಯತೆಯನ್ನು ಕಾಪಾಡಿಕೊಂಡ ಮನೆಯೆಂದರೆ ಅದು ಪುತ್ತೂರು ಎಳ್ನಾಡು ಸೀಮೆಯ ವ್ಯಾಪ್ತಿಯಲ್ಲಿರುವ ಬಿಲ್ಲವರ ಮರಕ್ಕೂರು ಜನನ. ತನ್ನದೇ ಆದ ಸಂಪ್ರದಾಯ ಕಟ್ಟುಕಟ್ಟಲೆಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡು ಇಂದಿಗೂ ಕೂಡ ಆಚರಣೆಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ.ಅದರಲ್ಲಿ ಒಂದು ವಿಶಿಷ್ಟ ಆರಾಧನೆಯೆಂದರೆ ಕಂಡ ಕೋರಿ. ಈ ಆರಾಧನೆಯಲ್ಲಿ ಸಾಮರಸ್ಯದ ಪಾಠ ಇದೆ, ನಂಬಿಕೆಯ ಬುನಾಧಿ ಇದೆ ಅದೇ ರೀತಿ ಪ್ರಕೃತ್ತಿಯ ಆರಾಧನೆ ಇದೆ. ಎಲ್ಲವುದರ ಸಮ್ಮಿಳಿತವೆ ಈ ಆರಾಧನೆ. ಇಲ್ಲಿ ಆರಾಧನೆಗಿಂತ ಎರಡು ಸಮುದಾಯಗಳ ಸಾಮರಸ್ಯ ಎದ್ದು ಕಾಣುತ್ತೆ, ಒಂದು ಸಮುದಾಯ ಇನ್ನೊಂದು ಸಮುದಾಯವನ್ನು ಅವಲಂಬಿಸಿರುವುದು ಕಾಣುತ್ತೆ.

ತುಳುನಾಡ ಆಚರಣೆಗಳ ಮೂಲಕ ಎಷ್ಟೋ ಸಮುದಾಯಗಳು ಇಂದಿಗು ಕೂಡ ಸಾಮರಸ್ಯದಿಂದ ಕೂಡಿ ಬಾಳುವುದನ್ನು ಕಾಣುತ್ತಿದ್ದೇವೆ.ಅದಕ್ಕೆ ಸಾಕ್ಷಿಯಾಗಿ ಇಲ್ಲಿ ನಡೆಯುವ ಆರಾಧನೆ. ಕಾಪಾಡ( ಮಗೇರ) ಜಾತಿಯ ಸಮುದಾಯ ಬಿಲ್ಲವರ ಜನನದ ಮನೆಯಲ್ಲಿ ಆಗುವ ಎಲ್ಲಾ ಆರಾಧನೆಗಳಲ್ಲಿ ಉಪಸ್ಥಿತಿ ಇರಲೇಬೇಕು. ಗದ್ದೆಯನ್ನು ಬಿತ್ತುವುದಕ್ಕೆ ಮುಂಚೆ ಹದಮಾಡುವ ಪ್ರಕ್ರಿಯೆಯೆ ಕಂಡಕೋರಿ.

ಕಂಡಕೋರಿಯ ಮುಂಚಿನ ದಿವಸ ಮರಕ್ಕೂರಿಗೆ ಸಂಬಂಧಪಟ್ಟ ಆನಡ್ಕದ ಕಾಪಾಡ ಮನೆಯವರು ಕಂಬಳ ಗದ್ದೆಯ ಬದುವಿನ ಸುತ್ತ ಜೇಡಿಮಣ್ಣಿನಲ್ಲಿ ತ್ರಿಶೂಲ ರೂಪದ ಚಿತ್ರ ಬರೆಯುತ್ತಾರೆ. ಅನಂತರ ಬೆರ್ಮರ ಕಲ್ಲಿನಲ್ಲಿ ತ್ರಿಶೂಲ ಬಿಡಿಸುತ್ತಾರೆ. ಬಳಿಕ ದೈವಗಳ ಮೂಲಸ್ಥಾನಕ್ಕೆ ಬಂದು ಪ್ರಾರ್ಥನೆ ಮಾಡಿ ಕುಟುಂಬದ ಹಿರಿಯರು ಸುಮಾರು 350ಕ್ಕಿಂತ ಹೆಚ್ಚು ಕೋಲ್ತಿರಿ( ಕೋಲಿಗೆ ಬಟ್ಟೆ ಸುತ್ತಿ ಮಾಡುವ ದೀಪ) ತಯಾರಿಸಿ ಹಿರಿಯ ಕಾಪಾಡನಲ್ಲಿ ನೀಡುತ್ತಾರೆ. ಕಾಪಾಡ ಕುಟುಂಬದ ಹಿರಿಯ ವ್ಯಕ್ತಿ ಗದ್ದೆಯ ಬದಿಯಲ್ಲಿರುವ ಒಂಟಿ ನಾಗನ ಕಟ್ಟೆಯ ಎದುರು ಆವೇಶಭರಿತನಾಗಿ ಕೋಲ್ತಿರಿಗೆ ಬೆಂಕಿ ಹಚ್ಚಿ ಮರಕ್ಕೂರಿನ ಹಿರಿಯರ ಕೈಯಲ್ಲಿ ನೀಡುತ್ತಾರೆ. ಇಲ್ಲಿ ನಾವು ಗಮನಿಸಬೇಕಾದ ಅಂಶ ನಾಗಾರಾಧನೆಗು ಕಾಪಾಡ ಮನೆತನಗು ಇರುವ ಸಂಬಂಧವನ್ನು ಸೂಚಿಸುತ್ತದೆ.

ಕಡ್ಯನಾಟದ ಪಳೆಯುಳಿಕೆಯು ಇದು ಆಗಿದೆ. ನಾಗಾರಾಧನೆಯಲ್ಲಿ ಈ ಸಮುದಾಯಗಳ ಪಾಳ್ಗೊಳ್ಳುವಿಕೆ ಎದ್ದು ಕಾಣುತ್ತೆ. ನಾಗಾರಾಧನೆಯ ಎಲ್ಲಾ ನಂಬಿಕೆಗಳು ನಾವು ತಿಳಿದುಕೊಂಡದ್ದನ್ನು ಮೀರಿ ನಿಂತಿದೆ ಎಂದು ತಿಳಿಸುತ್ತೆ. ಇಲ್ಲಿ ಕಾಪಾಡ ಸಮುದಾಯದ ಹಿರಿಯನಿಗೆ ಆವೇಶ ಬರುವುದನ್ನು ನೋಡುವಾಗ ಎಲ್ಲೋ ಒಂದು ಕಡೆ ನಾಗಾರಾಧನೆಗು ದೈವಾರಾಧನೆಗು ಎಲ್ಲೋ ಒಂದು ಕಡೆ ಬಿಡಿಸಲಾರದ ನಂಟು ಇದೆ ಎಂದು ಒಮ್ಮೆ ಮನದಲ್ಲಿ ಪ್ರಶ್ನೆ ಮೂಡುತ್ತೆ. ಅದೇ ರೀತಿ ಇದು ದೈವಾರಾಧನೆಯ ಭಾಗವಾಗಿದ್ದು ಕಾಲಕ್ರಮೇಣ ವೈದಿಕ ಪದ್ದತಿಗೆ ರೂಪಾಂತರವಾಗಿರಬೇಕು.ಗುಳಿಗನ ಆರಾಧನೆಯಲ್ಲಿ ದೈವ ನರ್ತಕ ಮುಖದ ಮೇಲೆ ಬಿಡಿಸುವ ನಾಗ ಚಿತ್ರವು ಒಂದು ಸಾಕ್ಷಿಯಾಗಿ ಕಾಣುತ್ತಿದೆ. ಅದೇ ರೀತಿ ಇಲ್ಲಿ ನಾವು ಪ್ರಕೃತ್ತಿ ಆರಾಧನೆಯನ್ನು ನೋಡಬಹುದು. ಸಮೃದ್ಧಿಯನ್ನು ಕಣ್ತುಂಬಿಕೊಳ್ಳುವ ಮುಂಚೆ ಆರಾಧನೆಯನ್ನು ಕಾಣಬಹುದು, ಅದು ಬೆಳಕಿನ ಹಬ್ಬ ಭೂಮಿ ತಾಯಿಯನ್ನು ಹದಮಾಡುವ ಮುಂಚೆ ಆಕೆಯನ್ನು ಆರಾಧಿಸುವ ಪ್ರಕ್ರಿಯೆಯು ಇದು ಆಗಿದೆ. ತುಳುವರ ನಂಬಿಕೆಯೆ ಹಾಗೆ ಪ್ರಕೃತ್ತಿಯನ್ನು ದೇವರೆಂದೆ ನಂಬುವುದು ಹೆಚ್ಚು. ಅನ್ನ ನೀಡೋ ಭೂಮಿ ತಾಯಿಯನ್ನು ತಲೆಯಲ್ಲಿಟ್ಟು ಪೂಜಿಸುವುದೇ ಹೆಚ್ಚು.ಇಂತಹ ಆಚರಣೆಗಳಿಂದ ಇಂದಿಗೂ ಕೂಡ ಪ್ರಕೃತಿ ಸ್ವಲ್ಪವಾದರು ಉಳಿದಿದೆ.ನಂಬಿಕೆಯನ್ನು ಬಿಟ್ಟು ತುಳುವರು ಬದುಕುವುದಿಲ್ಲ ಎನ್ನುವುದಕ್ಕೆ ಸಾಕ್ಷಿ.ಈ ರೀತಿಯಾಗಿ ಮರಕ್ಕೂರು ಜನನ ಮನೆತನವು ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಸಂಪ್ರದಾಯಗಳಿಗೆ ಚ್ಯುತಿ ಬರದ ರೀತಿಯಲ್ಲಿ ಆರಾಧನೆಗೆ ಸಂಬಂಧಪಟ್ಟ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಹೋಗುತ್ತಿದೆ. ಸಾಮರಸ್ಯದ ಬೀಜವನ್ನು ಬಿತ್ತುತ್ತಾ ಮುಂದಿನ ಪೀಳಿಗೆಗೆ ಇಂತಹ ಆಚರಣೆಯನ್ನು ಕೊಂಡೊಯ್ಯುತ್ತಿರುವ ಮರಕ್ಕೂರು ಜನನ ಮನೆತನ ಎಲ್ಲಕ್ಕಿಂತ ಎತ್ತರದಲ್ಲಿದೆ ಅನಿಸುತ್ತೆ. ಇಂತಹ ಆಚರಣೆಗಳು ಕಾಲದ ಹೊಡೆತ್ತಕ್ಕೆ ಮರೆಯಾಗದಿರಲಿ ಎಂದು ಆಶಿಸುತ್ತ ಬರವಣಿಗೆಗೆ ವಿರಾಮ ನೀಡುತ್ತಿದ್ದೇನೆ.

ಬರಹ: ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ

ಆಧಾರ: ಡಾ ನವೀನ್ ಕುಮಾರ್ ಮರಿಕೆಯವರು ಬರೆದಿರುವ ಮರಕ್ಕೂರು ಜನನ ಪುಸ್ತಕ

ಪೋಟೋ ಕೃಪೆ: Harshith Kotiyan

 

 


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »