TOP STORIES:

ಬಿಲ್ಲವ ಯುವಕರು ಎಚ್ಚೆತ್ತುಕೊಳ್ಳಲಿ ಪ್ರವೀಣ್‌ ನಿವಾಸದಲ್ಲಿ ಶ್ರೀ ಪ್ರಣವಾನಂದ ಸ್ವಾಮೀಜಿ ಕಿವಿಮಾತು


ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದಸ್ವಾಮೀಜಿ ಹೇಳೀದರು

ಪ್ರವೀಣ್ ನೆಟ್ಟಾರ್ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆಮಾತನಾಡಿದರು.

ನೆಟ್ಟ್ಟಾರ್ ಅವರ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ಹಾಗೂ ಅವರ ಧರ್ಮಪತ್ನಿಗೆ ಕೂಡಲೇ ಸರ್ಕಾರಿನೌಕರಿ ಕೊಡಿಸಬೇಕು ಎಂದು ಒತ್ತಾಯಿಸಿದರು.

ಬಿಲ್ಲವ ಸಮುದಾಯದ ಯುವಕರು ಇನ್ನಾದರೂ ಎಚ್ಚೆತ್ತುಕೊಂಡು ಯಾವುದೇ ಪ್ರಚೋದನೆಗೆ ಒಳಗಾಗದೆ ಸಂಯಮದಿಂದಇರಬೇಕು. ಈಗಾಗಲೇ ಅನೇಕ ಬಿಲ್ಲವ ಯುವಕರು ಹತ್ಯೆಗೀಡಾಗಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮರುಕಳಿಸಬಾರದು. ನಾವುಬ್ರಹ್ಮಶ್ರೀ ನಾರಾಯಣ ಗುರುಗಳ ಅಹಿಂಸ ಸಿದ್ಧಾಂತದ ಹಾದಿಯಲ್ಲಿ ಮುಂದುವರೆಯಬೇಕು ಎಂದು ಕಿವಿಮಾತು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಮಾತನಾಡಿ, ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಪ್ರವೀಣ್  ನೆಟ್ಟಾರ್ ಕೊಲೆ ಪ್ರಕರಣ ಸೇರಿ, ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯಸ್ಥಾಪಿಸಿ ಆರು ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ. ಕೆಲವು ದಿನಗಳ ಹಿಂದೆ, ಮಾಧ್ಯಮಗಳುಪ್ರತೀಕಾರದ ಕೊಲೆ ನಡೆಯಬಹುದು ಎಂದು ಸಂಶಯ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರೂ ಏನೂ ಕ್ರಮ ಕೈಗೊಳ್ಳದಗುಪ್ತಚರ ಇಲಾಖೆಯ ವಿಫಲತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಪ್ರವೀಣ್ ನಮ್ಮ ಕುಟುಂಬದ ಸದಸ್ಯ ಮನೆಯವರ ದುಃಖದ ಸಮಯದಲ್ಲಿ ಬಿಲ್ಲವ ಸಮಾಜ ಸದಾ ಇರುತ್ತದೆ ಎಂದು ತಿಳಿಸಿದರು.

ಗೆಜ್ಜೆಗಿರಿ ನಂದನ ಬಿತ್ತಲ್ ಕ್ಷೇತ್ರದ ಗೌರವಾಧ್ಯಕ್ಷ ಜಯಂತ ನಡುಬೈಲ್, ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಬೆಳ್ತಂಗಡಿ ಬಿಲ್ಲವ ಯುವವೇದಿಕೆ ಅಧ್ಯಕ್ಷ ನಿತೀಶ್ ಕೋಟ್ಯಾನ್, ವಕೀಲ ಮನೋಹರ್, ವೇಣೂರು ಯುವವಾಹಿನಿ ಅಧ್ಯಕ್ಷಯೋಗೀಶ್, ರವಿ ಪೂಜಾರಿ ಚಿಲಿಂಬಿ, ರಾಜೇಂದ್ರ ಚಿಲಿಂಬಿ ನವೀನ್ ಪಚ್ಚೇರಿ, ಮೋಹನ್ ಪಡೀಲ್, ಪುರುಷೋತ್ತಮ ಸಜಿಪ, ರಾಜೇಶ್ ಸುವರ್ಣ, ಪ್ರವೀಣ್ ಅರ್ಕುಳ ಮೊದಲಾದವರಿದ್ದರು.

ಬಿಲ್ಲವ ಸಮಾಜದಿಂದ ಮನೆ ನಿರ್ಮಾಣ

ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸಮಸ್ತ ಬಿಲ್ಲವ ಸಮುದಾಯದ ನೇತೃತ್ವದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಸಂಘಟಕರು ಭರವಸೆನೀಡಿದರು. ಸಂದರ್ಭ ಗುರುಬೆಳದಿಂಗಳು ಫೌಂಡೇಶನ್‌ನಿಂದ 1 ಲಕ್ಷ ರೂ ಪರಿಹಾರ ಹಸ್ತಾಂತರಿಸಲಾಯಿತು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »