TOP STORIES:

FOLLOW US

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ


ಹಿಂದುಳಿದವರು ರಾಜಕೀಯವಾಗಿ ಪ್ರಬಲವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಶಯ

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ

ಬೆಂಗಳೂರು: ಇಲ್ಲಿನ ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಸುಲಭವಾಗಿಮೇಲೆ ಬರಲು ಸಾಧ್ಯವಿಲ್ಲ. ರಾಜಕೀಯವಾಗಿ ಪ್ರಬಲರಾದರೆ ಮಾತ್ರ ಸಾಧ್ಯ ಎಂದರು.

ಎಲ್ಲರಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಬೆಳೆಸಬೇಕು. ಇಂತಹ ಪ್ರತಿಭೆಗಳನ್ನು ಗುರುತಿಸುವಲ್ಲಿ ಬೆಂಗಳೂರುಬಿಲ್ಲವ ಅಸೋಸಿಯೇಶನ್ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಅಸೋಸಿಯೇಶನ್ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ, ಈಗಾಗಲೇ ಬಿಲ್ಲವ ಹುಡುಗರಿಗೆ ಉಚಿತ ವಿದ್ಯಾರ್ಥಿನಿಲಯ ಇದ್ದು, ಹುಡುಗಿಯರಿಗೆ ಹಾಸ್ಟೆಲ್ ಪ್ರಾರಂಭಿಸಿರುವ ಯೋಜನೆ ಇದೆ ಎಂದರು.

ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ. ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್ ವಕೀಲ ತಾರಾನಾಥ ಪೂಜಾರಿ, ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ.ಬಂಗೇರ ಅವರನ್ನು ಗೌರವಿಸಲಾಯಿತು.

ಅಸೋಸಿಯೇಶನ್ ಗೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್, ಕೋಶಾಧಿಕಾರಿವಿ.ಗೋಪಾಲ್, ಸಂಘಟನಾ ಕಾರ್ಯದರ್ಶಿ ಜೆ.ನಾರಾಯಣ ಪೂಜಾರಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಜಾ ಜಯರಾಂ, ಸಹ ಅಧ್ಯಕ್ಷೆಜಯಂತಿ ವಿಜಯಕೃಷ್ಣ ಉಪಸ್ಥಿತರಿದ್ದರು. ಸಂಪತ್ ಕುಮಾರ್ ಡಿ.ಎಸ್, ದೇವಿಪ್ರಸಾದ್, ಸುಪ್ರಿಯಾ ಮಧುಸೂದನ್‌ಕಾರ್ಯಕ್ರಮನಿರೂಪಿಸಿದರು. ವಿದ್ಯಾ ಕೆ.ಟಿ.ಪೂಜಾರಿ ಪ್ರಾರ್ಥಿಸಿದರು. ಸದಸ್ಯರು ಹಾಗು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪೋಟೋ—–

ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವ ಹಬ್ಬವನ್ನು ಭಾನುವಾರ ವಿಧಾನ ಪರಿಷತ್ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿದರು. ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ., ಅಸೋಸಿಯೇಶನ್ ಅಧ್ಯಕ್ಷಎಂ.ವೇದಕುಮಾರ್, ೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್ಮೊದಲಾದವರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »