TOP STORIES:

FOLLOW US

ಬಿಲ್ಲವ ಸಂಘಟನೆಯ ವಿರುದ್ದ ಶರಣ್‌ ಪಂಪ್ವೆಲ್‌ ಆರೋಪ ಖಂಡನೀಯ – ಅಕ್ಷಿತ್‌ ಸುವರ್ಣ


ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಹೇಳಿದ್ದಾರೆ.ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒಂದೇ ಜಾತಿ ಒಂದೇ ಧರ್ಮ ಎಂಬ ಧ್ಯೇಯದೊಂದಿಗೆ ಜಿಲ್ಲೆಯಲ್ಲಿ ಬಿಲ್ಲವ ಸಂಘಟನೆ ಕಾರ್ಯಾಚರಿಸುತ್ತಿದ್ದು ಯಾವುದೇ ರೀತಿಯ ಘರ್ಷಣೆ ಕಲಹಕ್ಕೆ ಅವಕಾಶ ಮಾಡಿಕೊಡದೆ ತನ್ನ ಪಾಡಿಗೆ ಸಮಾಜದ ಉದ್ದಾರಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಇತ್ತೀಚೆಗೆ ಬಜರಂಗದಳದ ನಾಯಕರಾಗಿರುವ ಶರಣ್‌ ಪಂಪ್ವೆಲ್‌ ಅವರು ಇನ್ನೊಂದು ಸಂಘಟನೆಯೊಂದಿಗೆ ನಡೆದಿರುವ ಮಾತಿನ ಕಲಹದ ವೇಳೆ ವಿನಾಕಾರಣ ಬಿಲ್ಲವ ಸಂಘಟನೆಯನ್ನು ಎಳೆದು ತಂದಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಬಿಲ್ಲವ ಸಂಘಟನೆ ಎಂದೂ ಕೂಡ ಯಾವುದೇ ಜಾತಿ ಧರ್ಮದ ವಿಚಾರದಲ್ಲಿ ಮೂಗು ತೂರಿಸದೇ ತನ್ನ ಸಮುದಾಯದ ಉದ್ದಾರಕ್ಕೆ ಶ್ರಮಿಸುತ್ತಿರುವಾಗ ತಮ್ಮ ವೈಯುಕ್ತಿಕ ದ್ವೇಷಕ್ಕೆ ಬಿಲ್ಲವ ಸಂಘಟನೆಯ ಹೆಸರನ್ನು ಬಳಸಿಕೊಂಡಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವಾಗ ಅನಾವಶ್ಯಕವಾಗಿ ಸಂಘಟನೆಗಳ ಹೆಸರನ್ನು ಬಳಸಿಕೊಂಡು ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುವ ಪರಿಸ್ಥಿತಿ ಉಂಟಾಗುತ್ತದೆ ಎನ್ನುವುದನ್ನು ನಾಯಕರಾದವರು ಅರಿಯಬೇಕಾಗಿದೆ. ಇನ್ನಾದರೂ ಅನಾವಶ್ಯಕವಾಗಿ ಬಿಲ್ಲವ ಸಂಘಟನೆಯ ಹೆಸರನ್ನು ಇಲ್ಲ ಸಲ್ಲದ ವಿಚಾರಕ್ಕೆ ಎಳೆದು ತರುವುದನ್ನು ನಿಲ್ಲಿಸುವಂತೆ ಅವರು ಆಗ್ರಹಿಸಿದ್ದಾರೆ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »