TOP STORIES:

FOLLOW US

ಬಿಲ್ಲವ ಸಮಾಜದ ಹೆಮ್ಮೆಯ ಪ್ರತಿಭೆ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜೇಶ್ ವಿಟ್ಲ


ಒರ್ವ ವ್ಯಕ್ತಿಯೊಳಗಿರುವ ಪ್ರತಿಭೆ ಆತನನ್ನು ಸಾಧನೆಯ ಶಿಖರದೆಡೆಗೆ ಕೊಂಡೊಯ್ಯುವ ಜೊತೆಗೆ ಇತರರಿಗೂ ಸ್ಫೂರ್ತಿಯಾಗುತ್ತದೆ ಎನ್ನುವುದಕ್ಕೆ ಉತ್ತಮ ನಿದರ್ಶನ ನಮ್ಮ ಸಮಾಜದ ಹೆಮ್ಮೆಯ ಪ್ರತಿಭೆ ರಾಜೇಶ್ ವಿಟ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು. ಇವರು ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಚಂದಳಿಕೆಯ ಶ್ರೀಮತಿ ಗಿರಿಜಾ ಸೀನಪ್ಪ ಪೂಜಾರಿಯವರ ಸುಪುತ್ರ.ಮೂರನೇ ತರಗತಿಯಲ್ಲಿರುವಾಗ ಮುಖಕ್ಕೆ ಬಣ್ಣ ಹಚ್ಚಿ ಕಲಾಪ್ರಪಂಚಕ್ಕೆ ಕಾಲಿಟ್ಟ ಇವರು ಪ್ರಸ್ತುತ ಬಹುಮುಖ ಪ್ರತಿಭೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂಲತಃ ಯಕ್ಷಗಾನ ಕಲಾವಿದರಾದ ಇವರು ಮುಂದೆ ರಂಗಭೂಮಿಗೆ ಪಾದರ್ಪಣೆ ಮಾಡಿ ಸುದೀರ್ಘವಾಗಿ ಸಹಸ್ರಾರು ನಾಟಕಗಳಲ್ಲಿ ಅಭಿನಯಿಸಿದ್ದು ಮಾತ್ರವಲ್ಲದೆ ಸ್ತ್ರೀ ವೇಷಧಾರಿಯಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಹಾಗು ಅನೇಕ ನಾಟಕಗಳನ್ನು ನಿರ್ದೇಶಿಸಿದ್ದಾರೆ. ನೃತ್ಯ ನಿರ್ದೇಶಕರೂ ಆಗಿರುವ ಇವರು ತಮ್ಮ ಊರಿನಲ್ಲಿ ಅನೇಕ ರೀತಿಯ ನೃತ್ಯ ಪ್ರಕಾರಗಳನ್ನು ಪರಿಚಯಿಸಿ ಹೊಸ ಹೊಸ ಕಲಾವಿದರನ್ನು ಪ್ರೇರೇಪಿಸಿದ್ದಾರೆ. ಅಲ್ಲದೆ ನೃತ್ಯ ತರಗತಿಗಳನ್ನು ನಡೆಸುವ ಮೂಲಕ ಅನೇಕ ವಿದ್ಯಾರ್ಥಿಗಳನ್ನು ನೃತ್ಯ ಕ್ಷೇತ್ರದಲ್ಲಿ ಪರಿಚಯಿಸುತ್ತಿದ್ದಾರೆ. ಇವರು ಓರ್ವ ಚಿತ್ರಕಲಾ ಅಧ್ಯಪಕರಾಗಿಯೂ ಅನೇಕ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಉತ್ತಮ ಮೂರ್ತಿ ರಚನಕಾರರಾಗಿಯು ಜನ ಮನ್ನಣೆ ಪಡೆದಿದ್ದಾರೆ.

ಆರ್ ಕೆ ಆರ್ಟ್ಸ್ ಎಂಬ ಕಲಾ ಸಂಸ್ಥೆಯ ನಿರ್ದೇಶಕರಾಗಿದ್ದು, ಮೂಲತಃ ಈ ಸಂಸ್ಥೆ ವಸ್ತ್ರಾಲಂಕಾರ ಮತ್ತು ವರ್ಣಾಲಂಕಾರಗಳಿಗೆ ಸಂಬಂಧಪಟ್ಟ ಸಂಸ್ಥೆಯಾಗಿದೆ. ನಂತರ ಇದರ ಉಪ ಸಂಸ್ಥೆಗಳಾಗಿ ಆರ್ ಕೆ ಕುಣಿತ ಭಜನ ತಂಡ, ಆರ್ ಕೆ ಯಕ್ಷಗಾನ ಕಲಾ ತಂಡ, ಆರ್ ಕೆ ಚಿನ್ನರ ಮನೆ ನೃತ್ಯ ತಂಡಗಳನ್ನು ಆರಂಭಿಸಿದರು. ಮುಂದೆ ಆರ್ ಕೆ ಕ್ರಿಯೇಷನ್ ಎಂಬ ತಂಡವನ್ನು ಕಟ್ಟಿಕೊಂಡ ಇವರು “ನಮ್ಮ ಜನ ನಮ್ಮ ಹೆಮ್ಮೆ” ಎಂಬ ವೇದಿಕೆಯಡಿಯಲ್ಲಿ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಕಾರ್ಯನಿರ್ವಹಿಸಿದ ವರನ್ನು ಕರೆಯಿಸಿ ಮಾತನಾಡಿಸುವ ಮೂಲಕ ಅವರನ್ನು ಜನತೆಗೆ ಪರಿಚಯಿಸುತ್ತಿದ್ದಾರೆ.

ಗ್ರಾಮೀಣ ಪ್ರದೇಶದ ಪ್ರತಿಭೆಗಳನ್ನು ಅನಾವರಣಗೊಳಿಸುವ ಸದುದ್ದೇಶದಿಂದ ಇವರ ಸಂಸ್ಥೆಯಲ್ಲಿ ಸಂಗೀತ, ಚಿತ್ರಕಲೆ, ನೃತ್ಯ, ಯಕ್ಷಗಾನ, ಕ್ಲೇಮಾಡ್ಲಿಂಗ್ ಅಲ್ಲದೆ ಇತರೆ ಪಠ್ಯತೇರ ಚಟುವಟಿಕೆಗಳಿಗೆ ಸಹಕಾರವಾಗುವಂತಹ ಕಲಾಪ್ರಕಾರಗಳ ತರಬೇತಿಯನ್ನು ನಡೆಸುವುದರ ಜೊತೆಗೆ ಬೇಸಿಗೆ ಶಿಬಿರಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯವುಳ್ಳ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಯಾವುದೇ ರೀತಿಯ ಪ್ರತಿಫಲಾಪೇಕ್ಷೆಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ತಂಡ ರಾಜ್ಯ ಮತ್ತು ಹೊರರಾಜ್ಯಗಳ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದು ಮಾತ್ರವಲ್ಲದೆ ರಾಜ್ಯಮಟ್ಟದ ಅನೇಕ ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ನಿರ್ದೇಶನದ ಜನಪದ ನೃತ್ಯ ಮತ್ತು ಕೋಲಾಟ ನೃತ್ಯ ರಾಜ್ಯಮಟ್ಟದಲ್ಲಿ ಅನೇಕ ಬಾರಿ ಪ್ರಶಸ್ತಿಯನ್ನು ಪಡೆದಿದೆ. ಇವರು ಉತ್ತಮ ವರ್ಣಾಲಂಕಾರ ಕಲಾವಿದನಾಗಿದ್ದು ಇವರ ವರ್ಣಾಲಂಕಾರಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿಗಳು ದೊರೆತಿದೆ. ದೂರದರ್ಶನ ಚಂದನ ವಾಹಿನಿಯಲ್ಲಿ ಇವರ ನಿರ್ದೇಶನದ ಅನೇಕ ನೃತ್ಯ ಪ್ರಕಾರಗಳು ಪ್ರಸಾರಗೊಂಡಿದೆ. ಬೆಂಗಳೂರು ಜನಪದ ಜಾತ್ರೆ, ಹಂಪಿ ಉತ್ಸವ, ಕನ್ನಡ ಸಾಹಿತ್ಯ ಸಮ್ಮೇಳನ, ರಾಜ್ಯಮಟ್ಟದ ಯುವಜನೋತ್ಸವ, ಕರಾವಳಿ ಉತ್ಸವ, ಗಡಿನಾಡ ಉತ್ಸವಗಳಲ್ಲೂ ಭಾಗವಹಿಸಿದ್ದಾರೆ.

ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಕೆಲವು ಧಾರವಾಹಿಗಳಲ್ಲಿ ಅಭಿನಯ ಹಾಗೂ ಅನೇಕ ಕಿರು ಚಿತ್ರಗಳಲ್ಲಿ ನಟನೆಯ ಅನುಭವವನ್ನು ಹೊಂದಿದ್ದಾರೆ. ಇವರದೇ ನಿರ್ದೇಶನ ಮತ್ತು ಪರಿಕಲ್ಪನೆಯಲ್ಲಿ ಮೂಡಿಬಂದ ಉತ್ತಮ ಸಾಮಾಜಿಕ ಸಂದೇಶ ಕೊಡುವಂತಹ ಕಿರುಚಿತ್ರ “ವಿಷಾಮೃತ” ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು ಜನಮೆಚ್ಚುಗೆಗೆ ಪಾತ್ರವಾಗಿದೆ.

ಕಲಾ ಸೇವೆಯ ಜೊತೆ ಜೊತೆಗೆ ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಮನೋಭಾವವುಳ್ಳ ಇವರು ಅನೇಕ ಪ್ರಗತಿಪರ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ, ಸ್ವಾತಂತ್ರ್ಯ ದಿನಾಚರಣೆ, ಗಾಂಧಿಜಯಂತಿ, ಅಂಬೇಡ್ಕರ್ ಜಯಂತಿ ಹೀಗೆ ಬೇರೆ ಬೇರೆ ಆಚರಣೆಗಳನ್ನು ನಡೆಸುವ ಮೂಲಕ ದಿನಾಚರಣೆಗಳ ಮಹತ್ವವನ್ನು ಜನರಿಗೆ ತಿಳಿಸುತ್ತಿದ್ದಾರೆ. ವಿಟ್ಲದ ಗ್ರಾಮಕ್ಕೆ ಸಾಲುಮರದ ತಿಮ್ಮಕ್ಕನವರನ್ನು ಕರೆಯಿಸಿ ಪರಿಸರ ಸಂರಕ್ಷಣೆಯ ಕುರಿತಾಗಿ ಜನಜಾಗೃತಿ ಮೂಡಿಸಿದ ಕೀರ್ತಿ ಇವರದ್ದಾಗಿದೆ. ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ದಾನಿಗಳ ನೆರವಿನೊಂದಿಗೆ ತಮ್ಮ ಸಂಸ್ಥೆಯ ಮೂಲಕ ನೊಂದ ಜನತೆಯ ಧ್ವನಿಯಾಗಿ ಆಹಾರ ಕಿಟ್ ಗಳ ವಿತರಣೆ ಮಾತ್ರವಲ್ಲದೆ ಅನೇಕ ರೀತಿಯಲ್ಲಿ ಸಹಾಯವನ್ನು ಮಾಡುತ್ತಿದ್ದಾರೆ.

“ಕಲಾವಿದರ ಬದುಕು ಎಂತಹದೇ ಪರಿಸ್ಥಿತಿಯಲ್ಲಿ ನಿಂತ ನೀರಾಗಬಾರದು ಅದು ನಿತ್ಯ ನಿರಂತರವಾಗಿರಬೇಕು” ಎನ್ನುವ ಹಾಗು ಜನತೆಗೆ ಜೀವನ ಮೌಲ್ಯಗಳ ಕುರಿತು ಸದಾ ತಿಳಿಸ ಬಯಸುವ ಇವರು ತಾನು ಬೆಳೆಯುವುದಕ್ಕೆ ಸದಾ ಪ್ರೋತ್ಸಾಹ ಮತ್ತು ಸಹಕಾರ ನೀಡಿದ ಕೃಷ್ಣಯ್ಯ ಕೆ ವಿಟ್ಲ ಅರಮನೆ ಹಾಗು ಮಾದರಿ ಶಾಲೆ ವಿಟ್ಲವನ್ನು ಸದಾ ಸ್ಮರಿಸುತ್ತಾರೆ. ತಮ್ಮ ಸುದೀರ್ಘ ಕಲಾ ಜೀವನದಲ್ಲಿ ಗ್ರಾಮೀಣ ಪ್ರದೇಶದ ಹಾಗೂ ವಿಶೇಷವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ಸಂಘಟಿಸಿ, ಕಲೆ ಹಾಗೂ ಸಂಸ್ಕ್ರತಿ, ಜೀವನ ಮೌಲ್ಯಗಳನ್ನು ನೀಡುತ್ತಿರುವ ರಾಜೇಶ್ ವಿಟ್ಲರವರ ಕಲಾಜೀವನ, ಸಾಮಾಜಿಕ ಕಳಕಳಿಯ ಮನೋಭಾವ, ನಮಗೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ಇವರ ಕಲಾ ಬದುಕು ಹೀಗೆ ಮುಂದುವರಿಯಲಿ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸನ್ಮಾನಿಸಲ್ಪಟ್ಟ ಇವರಿಗೆ ಇನ್ನಷ್ಟು ಸನ್ಮಾನಗಳು ಪ್ರಶಸ್ತಿ ಪುರಸ್ಕಾರಗಳು ಅರಸಿ ಬರಲಿ, ಇನ್ನೂ ಹೆಚ್ಚು ಹೆಚ್ಚು ಸೇವಾ ಕಾರ್ಯಗಳು ಇವರಿಂದ ನಡೆಯುವಂತಾಗಲಿ ಎಂಬುದೇ ನಮ್ಮೆಲ್ಲರ ಆಶಯ.

ಬರಹ:
ನಳಿನಿ ಎಸ್ ಸುವರ್ಣ | ಜಾರ್ಕಳ ಮುಂಡ್ಲಿ


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »