TOP STORIES:

FOLLOW US

ಬಿಲ್ಲವ ಸಮುದಾಯವನ್ನು ಸರ್ಕಾರ ಈ ರೀತಿ ವಂಚಿಸುತ್ತಿರುವುದು ನ್ಯಾಯೋಚಿತವಲ್ಲ


ಕರ್ನಾಟಕ ಸರ್ಕಾರ ಬೇರೆ ಬೇರೆ ಜಾತಿ ಸಮುದಾಯಗಳ ನಿಗಮ,ಪ್ರಾಧಿಕಾರದ ಬೇಡಿಕೆಯನ್ನು ಈಡೇರಿಸಿದ್ದು ಸಮರ್ಥನೀಯ.ಆದರೆ ನಮ್ಮ ಬಿಲ್ಲವ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ‌.

ಉಪಪಂಗಡಗಳನ್ನೊಳಗೊಂಡಂತೆ ಸಂಖ್ಯಾಪ್ರಾಬಲ್ಯವಿರುವ ಬಿಲ್ಲವ ಸಮುದಾಯ ಈವರೆಗೆ ಹಲವಾರು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದಾಗ್ಯೂ ಸರ್ಕಾರ ತಾತ್ಸಾರ ತೋರುತ್ತಿದೆ.ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ನೇತೃತ್ವದಲ್ಲಿ 50,000 ಸಮಾಜಬಾಂಧವರನ್ನು ಒಗ್ಗೂಡಿಸಿ ಬೃಹತ್ ಬಿಲ್ಲವ ಸಮಾವೇಶ ದ ಮುಖಾಂತರ “ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ” ಸ್ಥಾಪಿಸಬೇಕೆಂಬ ಪ್ರಮುಖ ಬೇಡಿಕೆಯನ್ನು ನೀಡಲಾಗಿತ್ತು.ಇದರೊಂದಿಗೆ ಇತರ ಬೇಡಿಕೆಗಳ ಕುರಿತು ಪದೇ ಪದೇ ಕರಾವಳಿಯ ಜನಪ್ರತಿನಿಧಿಗಳಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾಗ್ಯಾ ನಕಾರಾತ್ಮಕ ಪ್ರತಿಕ್ರಿಯೆಯಿದೆ.ಕೇವಲ ಚುನಾವಣೆ ಸಂದರ್ಭ ಮಾತ್ರ ಬಿಲ್ಲವ ಸಮಾಜವನ್ನು ಬಳಸಿಕೊಳ್ಳುತ್ತಿರುವ ಹುನ್ನಾರದ ಕುರಿತು ಸಮಾಜ ಜಾಗೃತಗೊಳ್ಳುತ್ತಿದೆ.ಕರಾವಳಿಯ ಶಾಸಕರು,ಸಂಸದರು ಮತ್ತು ಎಲ್ಲಾ ಸ್ತರದ ಜನಪ್ರತಿನಿಧಿಗಳು ಕೇವಲ ಸಭಾವೇದಿಕೆಯ ಭಾಷಣಕ್ಕೆ ಮಾತ್ರ ಬಿಲ್ಲವ ಸಮಾಜದ ಒಲೈಕೆ ಮಾಡುತ್ತಾ ಯಾವುದೇ ಅನುಕೂಲ ಮಾಡದಿರುವ ಕುರಿತು ಭವಿಷ್ಯದಲ್ಲಿ ಸಮಾಜಬಾಂಧವರು ಇಂತವರ ವಿರುದ್ದ ಸೂಕ್ತ ನಿರ್ಧಾರ ಕೈಗೊಳ್ಳಲು ಪ್ರೇರಣೆ ನೀಡಿದೆ.
ಇತರ ಸಮುದಾಯಕ್ಕೆ ಮಂಜೂರಾಗುತ್ತಿರುವ ಎಲ್ಲಾ ಅನುಕೂಲತೆಗಳಲ್ಲಿ ಬಿಲ್ಲವ ಸಮುದಾಯವನ್ನು ವಂಚಿಸುತ್ತಿರುವುದು ನ್ಯಾಯೋಚಿತವಲ್ಲ.

-ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವಸದಸ್ಯರು.
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ).


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »