TOP STORIES:

FOLLOW US

ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಬಿಲ್ಲವ ಗಾನ ತರಂಗ ಸೀಸನ್ 1 : ಬಹುಮಾನ ವಿತರಣಾ ಸಮಾರಂಭ


ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ತಂಡವು ಸಾಮಾಜಿಕ ಜಾಲತಾಣದ ಮೂಲಕ ತೆರೆಮರೆಯ ಪ್ರತಿಭೆಗಳನ್ನು ಪರಿಚಯಿಸಿ ಆ ಮೂಲಕ ಅವರ ಬೆಳವಣಿಗೆಗೆ ಕಾರ್ಯೋನ್ಮುಖ ವಾಗಿರುವುದು ಸಂತಸದ ವಿಷಯ. ಕೊರೋನಾ ಸಮಯದಲ್ಲಿ ಒಳ್ಳೆಯ ಚಿಂತನೆಯ ಮೂಲಕ ಸಮಯವನ್ನು ಸದುಪಯೋಗಪಡಿಸಿ ಕೊಳ್ಳಬೇಕಾಗಿದೆ. ಎಂದು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದರು.

ಕುದ್ರೋಳಿ ದೇವಳದಲ್ಲಿ ನಡೆದ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಬಿಲ್ಲವ ಗಾನ ತರಂಗ ಸೀಸನ್-1 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಪರಮಾನಂದ ಸಾಲ್ಯಾನ್ ಮಾತನಾಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಉಪಯೋಗಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣವನ್ನು ಪ್ರತಿಭೆಗಳಿಗೆ ತಮ್ಮ ಒತ್ತು ನೀಡಿ ಅವರನ್ನು ಬೆಳಕಿಗೆ ಬರುವ ಕೆಲಸ ಸಾರ್ಥಕವಾಗಿದೆ. 94 ಸ್ಪರ್ಧಿಗಳಲ್ಲಿ ಅಂತಿಮ ಆಯ್ಕೆ ಕಷ್ಟದ ಕೆಲಸ. ವಿಶ್ವವ್ಯಾಪಿ ಈ ಎಲ್ಲಾ ಸ್ಪರ್ಧಿಗಳನ್ನು ಪರಿಚಯಿಸಿದ ಕಾರ್ಯ ಶ್ಲಾಘನೀಯ ಎಂದರು.ರೇಡಿಯೋ ಜಾಕಿ ಮತ್ತು ಸಮಾಜಸೇವಕಿ ರಶ್ಮಿ ಉಳ್ಳಾಲ್ ಮಾತನಾಡಿ ಕಲಿಕೆ ನಿರಂತರ. ಧನಾತ್ಮಕ ಚಿಂತನೆಯನ್ನು ಯುವ ಮನಸ್ಸುಗಳು ತುಂಬಿ ಕೊಳ್ಳಬೇಕಾಗಿದೆ. ಸಿಕ್ಕ ಅವಕಾಶಗಳನ್ನು ಉಪಯೋಗಿಸುವ ಮೂಲಕ ನಾವು ಬೆಳೆಯ ಬೇಕಾಗಿದೆ ಎಂದರು. ಮಂಗಳೂರು ವಿಶ್ವವಿದ್ಯಾ ನಿಲಯದ ನಾರಾಯಣ ಗುರು ಅಧ್ಯಯನಪೀಠದ ಸಲಹಾ ಸಮಿತಿಯ ಸದಸ್ಯರಾದ ನಮಿತಾ ಶ್ಯಾಮ್ ಮಾತನಾಡಿ ಸಾಮಾಜಿಕ ಜಾಲತಾಣದ ಮೂಲಕ ಇನ್ನಷ್ಟು ಸ್ಪರ್ಧೆಗಳಿಗೆ ನಮ್ಮ ಸಹಕಾರವಿದೆ. ಬಿಲ್ಲವ ಸೇವಾ ಮಾಣಿಕ್ಯದಾರ ಸಮಾಗಮ ಮಾಡುತ್ತಿರುವ ಕಾರ್ಯಗಳು ಅಭಿನಂದನೀಯ ಎಂದರು.
ವೇದಿಕೆಯಲ್ಲಿ ಬಿರುವೆರ್ ಕುಡ್ಲ ಮೂಡಬಿದ್ರೆ ಘಟಕದ ರಾಜ್ ಪವಿ ಬಿಲ್ಲವ ಉಪಸ್ಥಿತರಿದ್ದರು.
ಸನ್ಮಾನ: ಕಾರ್ಯಕ್ರಮದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 98.5 ಪಡೆದ ನಿರೀಕ್ಷಾ ಪೂಜಾರಿಯನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ನಿರ್ಮಾಣದ ಗೆಜ್ಜೆಗಿರಿತ ಮಾಣಿಕ್ಯ ಅಪ್ಪೆ ದೇಯಿಬೈದೆದಿ ಸುಗಿಪು ಧ್ವನಿಸುರುಳಿಯಲ್ಲಿ ಹಾಡಿದ ವಾತ್ಸಲ್ಯ ಪೂಜಾರಿಯನ್ನು ಗೌರವಿಸ ಲಾಯಿತು.ಬಿಲ್ಲವ ಗಾನ ತರಂಗ ವಿಜೇತರು: ಪ್ರಥಮ-ಲಹರಿ ಕೋಟ್ಯಾನ್, ದ್ವಿತೀಯ ರಂಜಿತ್ ಪೂಜಾರಿ ಮೊಗರು, ತೃತೀಯ ಅನುರಾಧ ಚಂದ್ರೇಶ್. ಸಮಾಧಾನಕರ ಬಹುಮಾನ: ಸಚಿನ್ ಪೂಜಾರಿ, ನಿಶ್ಮಿತಾ, ಸಂತೋಷ್ ಪೂಜಾರಿ,ಸಹನಾ ಕರ್ಕೇರ. ಬೆಸ್ಟ್ ರಾಕ್ ಮೆಲೋಡಿ -ಆದಿತ್ಯ ಕರ್ಕೇರ ಪಡೆದುಕೊಂಡಿರುತ್ತಾರೆ.

ಸಮಾರಂಭದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಪದಾಧಿಕಾರಿಗಳಾದ ದಿನೇಶ್ ಸುವರ್ಣ ರಾಯಿ, ಶಿವಕುಮಾರ್ ಮರಕ್ಕೂರು, ಶ್ರೇಯಸ್, ಅನುಪ್ ಉಪಸ್ಥಿತರಿದ್ದರು.
ರೇಣುಕ ಕಣಿಯೂರು ಸ್ವಾಗತಿಸಿ, ಅಜಿತ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಚ್ಚೇಂದ್ರ ಅಂಬಾಗಿಲು ನಿರೂಪಿಸಿ, ದೀಪಕ್ ಬೀರ ವಂದಿಸಿದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »