TOP STORIES:

FOLLOW US

ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಬಿಲ್ಲವ ಗಾನ ತರಂಗ ಸೀಸನ್ 1 : ಬಹುಮಾನ ವಿತರಣಾ ಸಮಾರಂಭ


ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ತಂಡವು ಸಾಮಾಜಿಕ ಜಾಲತಾಣದ ಮೂಲಕ ತೆರೆಮರೆಯ ಪ್ರತಿಭೆಗಳನ್ನು ಪರಿಚಯಿಸಿ ಆ ಮೂಲಕ ಅವರ ಬೆಳವಣಿಗೆಗೆ ಕಾರ್ಯೋನ್ಮುಖ ವಾಗಿರುವುದು ಸಂತಸದ ವಿಷಯ. ಕೊರೋನಾ ಸಮಯದಲ್ಲಿ ಒಳ್ಳೆಯ ಚಿಂತನೆಯ ಮೂಲಕ ಸಮಯವನ್ನು ಸದುಪಯೋಗಪಡಿಸಿ ಕೊಳ್ಳಬೇಕಾಗಿದೆ. ಎಂದು ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದರು.

ಕುದ್ರೋಳಿ ದೇವಳದಲ್ಲಿ ನಡೆದ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಬಿಲ್ಲವ ಗಾನ ತರಂಗ ಸೀಸನ್-1 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಪರಮಾನಂದ ಸಾಲ್ಯಾನ್ ಮಾತನಾಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಉಪಯೋಗಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣವನ್ನು ಪ್ರತಿಭೆಗಳಿಗೆ ತಮ್ಮ ಒತ್ತು ನೀಡಿ ಅವರನ್ನು ಬೆಳಕಿಗೆ ಬರುವ ಕೆಲಸ ಸಾರ್ಥಕವಾಗಿದೆ. 94 ಸ್ಪರ್ಧಿಗಳಲ್ಲಿ ಅಂತಿಮ ಆಯ್ಕೆ ಕಷ್ಟದ ಕೆಲಸ. ವಿಶ್ವವ್ಯಾಪಿ ಈ ಎಲ್ಲಾ ಸ್ಪರ್ಧಿಗಳನ್ನು ಪರಿಚಯಿಸಿದ ಕಾರ್ಯ ಶ್ಲಾಘನೀಯ ಎಂದರು.ರೇಡಿಯೋ ಜಾಕಿ ಮತ್ತು ಸಮಾಜಸೇವಕಿ ರಶ್ಮಿ ಉಳ್ಳಾಲ್ ಮಾತನಾಡಿ ಕಲಿಕೆ ನಿರಂತರ. ಧನಾತ್ಮಕ ಚಿಂತನೆಯನ್ನು ಯುವ ಮನಸ್ಸುಗಳು ತುಂಬಿ ಕೊಳ್ಳಬೇಕಾಗಿದೆ. ಸಿಕ್ಕ ಅವಕಾಶಗಳನ್ನು ಉಪಯೋಗಿಸುವ ಮೂಲಕ ನಾವು ಬೆಳೆಯ ಬೇಕಾಗಿದೆ ಎಂದರು. ಮಂಗಳೂರು ವಿಶ್ವವಿದ್ಯಾ ನಿಲಯದ ನಾರಾಯಣ ಗುರು ಅಧ್ಯಯನಪೀಠದ ಸಲಹಾ ಸಮಿತಿಯ ಸದಸ್ಯರಾದ ನಮಿತಾ ಶ್ಯಾಮ್ ಮಾತನಾಡಿ ಸಾಮಾಜಿಕ ಜಾಲತಾಣದ ಮೂಲಕ ಇನ್ನಷ್ಟು ಸ್ಪರ್ಧೆಗಳಿಗೆ ನಮ್ಮ ಸಹಕಾರವಿದೆ. ಬಿಲ್ಲವ ಸೇವಾ ಮಾಣಿಕ್ಯದಾರ ಸಮಾಗಮ ಮಾಡುತ್ತಿರುವ ಕಾರ್ಯಗಳು ಅಭಿನಂದನೀಯ ಎಂದರು.
ವೇದಿಕೆಯಲ್ಲಿ ಬಿರುವೆರ್ ಕುಡ್ಲ ಮೂಡಬಿದ್ರೆ ಘಟಕದ ರಾಜ್ ಪವಿ ಬಿಲ್ಲವ ಉಪಸ್ಥಿತರಿದ್ದರು.
ಸನ್ಮಾನ: ಕಾರ್ಯಕ್ರಮದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 98.5 ಪಡೆದ ನಿರೀಕ್ಷಾ ಪೂಜಾರಿಯನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ನಿರ್ಮಾಣದ ಗೆಜ್ಜೆಗಿರಿತ ಮಾಣಿಕ್ಯ ಅಪ್ಪೆ ದೇಯಿಬೈದೆದಿ ಸುಗಿಪು ಧ್ವನಿಸುರುಳಿಯಲ್ಲಿ ಹಾಡಿದ ವಾತ್ಸಲ್ಯ ಪೂಜಾರಿಯನ್ನು ಗೌರವಿಸ ಲಾಯಿತು.ಬಿಲ್ಲವ ಗಾನ ತರಂಗ ವಿಜೇತರು: ಪ್ರಥಮ-ಲಹರಿ ಕೋಟ್ಯಾನ್, ದ್ವಿತೀಯ ರಂಜಿತ್ ಪೂಜಾರಿ ಮೊಗರು, ತೃತೀಯ ಅನುರಾಧ ಚಂದ್ರೇಶ್. ಸಮಾಧಾನಕರ ಬಹುಮಾನ: ಸಚಿನ್ ಪೂಜಾರಿ, ನಿಶ್ಮಿತಾ, ಸಂತೋಷ್ ಪೂಜಾರಿ,ಸಹನಾ ಕರ್ಕೇರ. ಬೆಸ್ಟ್ ರಾಕ್ ಮೆಲೋಡಿ -ಆದಿತ್ಯ ಕರ್ಕೇರ ಪಡೆದುಕೊಂಡಿರುತ್ತಾರೆ.

ಸಮಾರಂಭದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮದ ಪದಾಧಿಕಾರಿಗಳಾದ ದಿನೇಶ್ ಸುವರ್ಣ ರಾಯಿ, ಶಿವಕುಮಾರ್ ಮರಕ್ಕೂರು, ಶ್ರೇಯಸ್, ಅನುಪ್ ಉಪಸ್ಥಿತರಿದ್ದರು.
ರೇಣುಕ ಕಣಿಯೂರು ಸ್ವಾಗತಿಸಿ, ಅಜಿತ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಚ್ಚೇಂದ್ರ ಅಂಬಾಗಿಲು ನಿರೂಪಿಸಿ, ದೀಪಕ್ ಬೀರ ವಂದಿಸಿದರು.


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »