TOP STORIES:

FOLLOW US

ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಆರೋಗ್ಯ ಕೆಡಿಸಬಹುದು ಹುಷಾರ್! . ಓದಲೇಬೇಕಾದ ಸ್ಟೋರಿ


ದಿನ ಕಳೆದಂತೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿದೆ. ಈ ಸಮಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸಮಸ್ಯೆ ಎಂದರೆ ತಪ್ಪಾಗಲಾರದು. ಕಳೆದೊಂದು ವರ್ಷದಿಂದ ಕಾಡಿದ ಕೊರೋನಾ ತಗ್ಗಿತು ಎಂದು ಸಮಾಧಾನ ಪಟ್ಟುಕೊಳ್ಳುವಾಗಲೇ ಬೇಸಿಗೆಯ ತಾಪದಂತೆ ಪ್ರಕರಣದ ಸಂಖ್ಯೆಯೂ ಹೆಚ್ಚುತ್ತಿದೆ.

ಕೊರೋನಾವನ್ನು ಬದಿಗಿಟ್ಟು ನೋಡಿದರೆ ಬೇಸಿಗೆಯಲ್ಲಿ ಇನ್ನಷ್ಟು ರೋಗಗಳು ನಮ್ಮನ್ನು ಕಾಡಿದರೆ ಅಚ್ಚರಿಪಡಬೇಕಾಗಿಲ್ಲ. ನಾವು ಬೇಸಿಗೆಯ ಬಿಸಿಲು ಮತ್ತು ಬೇಸಿಗೆಯಲ್ಲಿ ಕಾಡಬಹುದಾದ ಸಾಂಕ್ರಾಮಿಕ ರೋಗಗಳಿಂದ ತಪ್ಪಿಸಿಕೊಂಡು ಬದುಕುವುದೇ ಸವಾಲ್ ಆಗಿ ಪರಿಣಮಿಸಿದೆ. ಹೀಗಾಗಿ ಬೇಸಿಗೆಯಲ್ಲಿ ಮೊದಲಿಗೆ ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಿದೆ.

ಅತಿಯಾದ ಬೆವರು ಮುಜುಗರ ತರುತ್ತದೆ. ಮೂಗು, ಕಿವಿ, ಬಾಯಿ, ಚರ್ಮಗಳಿಗೆ ಸಂಬಂಧಿಸಿದಂತೆ ಕಾಯಿಲೆಗಳಿದ್ದರೆ ವೈದ್ಯರಿಗೆ ತೋರಿಸಿ ಅವರು ನೀಡುವ ಸಲಹೆಗಳನ್ನು ಅನುಸರಿಸಬೇಕು. ಪ್ರತಿದಿನ ಕನಿಷ್ಟ ಎರಡು ಲೀಟರ್‍ ನಷ್ಟು ನೀರನ್ನು ಕುಡಿಯಬೇಕು. ತಲೆ ಕೂದಲು ಕೂಡ ವಾಸನೆ ಬೀರುತ್ತದೆ. ಆದ್ದರಿಂದ ಯುವಕರಾದರೆ ಚಿಕ್ಕದಾಗಿ ಕ್ಷೌರ ಮಾಡಿ ತಲೆಯಲ್ಲಿನ ಹೊಟ್ಟನ್ನು ನಿಯಂತ್ರಿಸಲು ಮುಂದಾಗಬೇಕು. ಸ್ನಾನ ಮಾಡುವಾಗ ಕಂಕುಳು, ಕಿವಿ, ಸೇರಿದಂತೆ ಇನ್ನಿತರ ಭಾಗಗಳನ್ನು ಚೆನ್ನಾಗಿ ಸೋಪು ಬಳಸಿ ತೊಳೆಯಬೇಕು. ವ್ಯಾಯಾಮ, ಮುಂಜಾನೆ ವಾಕಿಂಗ್ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಬಿಗಿಯಾದ ಉಡುಪುಗಳನ್ನು ಧರಿಸದೆ, ಶರೀರಕ್ಕೆ ಗಾಳಿಯಾಡುವ ಹಾಗೂ ಹತ್ತಿಬಟ್ಟೆಗೆ ಆದ್ಯತೆ ನೀಡಬೇಕು. ಬೇರೆಯವರು ಬಳಸಿದ ಟವಲ್ ಬಳಸದೆ ಒಗೆದು ಒಣಗಿಸಿ ಬಳಸಬೇಕು. ಬೇರೆಯವರಿಗೆ ಅಸಹ್ಯ ಎನಿಸದ ಉತ್ತಮ ಸುವಾಸನೆ ಬೀರುವ ಸುಗಂಧ ದ್ರವ್ಯಗಳನ್ನು ಲೇಪಿಸಿಕೊಳ್ಳಬೇಕು. ಮಹಿಳಾ ಉದ್ಯೋಗಿಗಳು ಕೆಲಸದ ಜತೆಗೆ ತಮ್ಮ ಸೌಂದರ್ಯವನ್ನೂ ಕಾಪಾಡಿಕೊಳ್ಳುವುದು ಅನಿವಾರ್ಯ. ಉರಿ ಬಿಸಿಲಿಗೆ ತಮ್ಮ ಮುಖ ಕಾಂತಿಹೀನವಾಗಿ ಬಿಡುತ್ತದೆ.

ಬಿಸಿಲಿನ ತಾಪಕ್ಕೆ ಸುಸ್ತು, ನೀರಡಿಕೆ, ತಲೆಸುತ್ತು ಮೊದಲಾದವುಗಳು ಬಾಧಿಸುವುದು ಸಾಮಾನ್ಯವಾಗಿದ್ದು, ತಲೆನೋವು ಕಾಡುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಬಿಸಿಲಿನ ಝಳಕ್ಕೆ ಸಿಕ್ಕಿ ಒದ್ದಾಡುವ ಪರಿಸ್ಥಿತಿ ಬಂದೊದಗಿದ್ದು, ಮನೆ ಒಳಗೆಯೂ ನೆಮ್ಮದಿಯಾಗಿ ಕುಳಿತುಕೊಳ್ಳದಂತಾಗಿದೆ. ಬಿಸಿಲಿನಿಂದಾಗುವ ಕೆಲವು ತೊಂದರೆಗಳನ್ನು ತಪ್ಪಿಸುವ ಸಲುವಾಗಿ ತೆಳು ಬಣ್ಣದ ಸಡಿಲವಾದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು. ಆಗಾಗ್ಗೆ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ ಪಾನಕ ಸೇವಿಸಬೇಕು. ಕಾಫಿ ಟೀ ಸೇವನೆ ಕಡಿಮೆ ಮಾಡಬೇಕು. ಕಾರ್ಬೋನೇಟೆಡ್ ಪಾನೀಯಗಳನ್ನು ತ್ಯಜಿಸಬೇಕು.

ನೀರು, ಮಜ್ಜಿಗೆ, ಎಳನೀರು ಕುಡಿಯಬೇಕು. ಬೆಚ್ಚಗಿನ ಮಸಾಲೆರಹಿತ ಶುದ್ದ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಬೇಕು. ದೇಹವನ್ನು ತಂಪಾಗಿಡಲು ಹಣ್ಣು, ತರಕಾರಿಗಳು ಸಹಕಾರಿ. ಸೌತೆಕಾಯಿಯನ್ನು ಹೆಚ್ಚು ಸೇವಿಸಿದಷ್ಟು ಆರೋಗ್ಯಕಾರಿ. ಇದರಲ್ಲಿ ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ದಾಹವನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆಯನ್ನು ಅಡಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಠಿಯಿಂದ ನೈಸರ್ಗಿಕ ಪಾನೀಯ ಎಳನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಉತ್ತಮ. ಕಲ್ಲಂಗಡಿಯ ರಸವನ್ನು ಸೇವಿಸುವುದರಿಂದಲೂ ಉತ್ತಮ ಪ್ರಯೋಜನವನ್ನು ಕಾಣಬಹುದು. ಈ ಹಣ್ಣಿನಲ್ಲಿ ಪೊಟಾಷಿಯಂ, ಸೋಡಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೋಡಿಯಂ ಹೇರಳವಾಗಿ ಇರುವುದರಿಂದ ಆರೋಗ್ಯವನ್ನು ಕಾಪಾಡುತ್ತದೆ. ಬಿಸಿಲಲ್ಲಿ ಓಡಾಡಿ ಬಂದವರು ನಿಂಬೆ ರಸವನ್ನು ಸೇವಿಸಿದರೆ ವಿಟಮಿನ್ ‘ಸಿ’ ಅಂಶ ಇರುವುದರಿಂದ ಡಿಹೈಡ್ರೇಷನ್ ಸಮಸ್ಯೆ ಉಂಟಾಗುವುದಿಲ್ಲ. ಪ್ರತಿದಿನ ಒಂದು ಬಟ್ಟಲು ಬೀಟ್ರೋಟಿನ ರಸವನ್ನು ಸೇವಿಸಿದರೆ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು ದೇಹದ ಉಷ್ಣಾಂಶವನ್ನು ತಂಪುಗೊಳಿಸಬೇಕಾದರೆ ಎಳನೀರು ಅತ್ಯಗತ್ಯ. ಎಳನೀರು ಕೇವಲ ಬಾಯಾರಿಕೆಯನ್ನು ಮಾತ್ರ ನೀಗಿಸದೆ, ಆರೋಗ್ಯದ ದೃಷ್ಟಿಯಿಂದಲೂ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದು ಬಂದಿದೆ.

ಇನ್ನು ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳಾದ ಜಾಂಡೀಸ್, ಪೋಲಿಯೋ, ಕಾಲರಾ, ಕರುಳುಬೇನೆ, ವಿಷಮ ಶೀತ ಜ್ವರ, ಆಮಶಂಕೆ, ಇಲಿಜ್ವರ, ಇತರೆ ಸೂಕ್ಷ್ಮಜೀವಿಗಳಿಂದ ಹರಡುವ ವಾಂತಿ-ಭೇದಿ ಪ್ರಕರಣಗಳು ಕಲುಷಿತ ನೀರು ಹಾಗೂ ಕಲುಷಿತ ಆಹಾರ ಸೇವನೆ ಮೂಲಕ ಹರಡುವ ಸಾಧ್ಯತೆ ಹೆಚ್ಚಿರುವ ಕಾರಣ ಈ ರೋಗವು ಹರಡದಂತೆ ಮುನ್ನಚ್ಚರಿಕೆ ವಹಿಸುವುದು ಅಗತ್ಯವಾಗಿರುತ್ತದೆ.

ಪ್ರತಿಯೊಬ್ಬರೂ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು. ಬಿಸಿಯಾದ ಆಹಾರ ಪದಾರ್ಥಗಳನ್ನು ಉಪಯೋಗಿಸಬೇಕು. ಆಹಾರ ಪದಾರ್ಥಗಳನ್ನು ಮುಚ್ಚಿಡಬೇಕು. ರಸ್ತೆ ಬದಿಗಳಲ್ಲಿ, ಹೋಟೆಲ್‍ಗಳಲ್ಲಿ, ತೆರೆದಿಟ್ಟು ಮಾರುವ ಹಣ್ಣು ಹಂಪಲು ಹಾಗೂ ಆಹಾರ ಪದಾರ್ಥಗಳನ್ನು ಉಪಯೋಗಿಸಬಾರದು. ಹೋಟೆಲ್‍ಗಳಲ್ಲಿ ಕುಡಿಯಲು ಬಿಸಿ ನೀರನ್ನು ಕೇಳಿ ಪಡೆಯಬೇಕು. ಊಟಕ್ಕೆ ಮುಂಚಿತವಾಗಿ ಕೈಗಳನ್ನು ಶುಚಿಗೊಳಿಸಬೇಕು. ಬಯಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡದೆ ಶೌಚಾಲಯವನ್ನು ಬಳಸಬೇಕು. ಮಲ ವಿಸರ್ಜನೆ ನಂತರ ಕೈಗಳನ್ನು ಸೋಪಿನಿಂದ ತೊಳೆಯಬೇಕು. ವಾಂತಿಭೇದಿ ಕಾಣಿಸಿಕೊಂಡರೆ ಅತಿಯಾಗಿ ನೀರು ಸೇವಿಸಬೇಕು ಅಥವಾ ಓಆರ್‍ಎಸ್ ಪಾನಕ ಸೇವಿಸಬೇಕು. ಮನೆಯ ಒಳಗೆ, ಹೊರಗಡೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಜ್ವರ, ಕಾಮಾಲೆ, ವಾಂತಿಭೇದಿ, ರಕ್ತದೊಂದಿಗೆ ಭೇದಿ ಆಗುವುದು, ಹೊಟ್ಟೆನೋವು ಮತ್ತು ಭೇದಿ ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಕಾಣುವುದು ಒಳ್ಳೆಯದು.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »