TOP STORIES:

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »