TOP STORIES:

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »