TOP STORIES:

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »