TOP STORIES:

ಬೆಂಗಳೂರಿನಲ್ಲಿ ಮೋದಿ ಪಕ್ಕದಲ್ಲಿ ನಿಂತು ಮಿಂಚಿದ ರೀಣಾ ರಘು ಸುವರ್ಣ


 

 

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. ಸದ್ಯ ಜೆಸಿ ನಗರದ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೀನಾ ಸುವರ್ಣ 2014 ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಪ್ರೊಬೇಷನರಿ ಅವಧಿಯಲ್ಲಿಯೇ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದ ರೀನಾ ರಘು ಸುವರ್ಣಾ ಅವರು ಇದೀಗ ಪ್ರಧಾನಿ ಪಕ್ಕದಲ್ಲೇ ನಿಂತು ಭದ್ರತೆ ಒದಗಿಸಿ ಭಾರೀ ಸುದ್ದಿಯಾಗಿದ್ದಾರೆ.

ಸೋಮವಾರ ಬಳಗ್ಗೆ ಮಲ್ಲೇಶ್ವರಂ ಬಳಿ ಇರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಗಲ್ಲು ಹಾಕುವ ಕಾರ್ಯಕ್ರಮವಿತ್ತು. ಈ ವೇಳೆ ಪ್ರಧಾನಿ ಅಕ್ಕ ಪಕ್ಕ ಇದ್ದಿದ್ದು ಎನ್‌ಎಸ್ ಜಿ ಪಡೆ. ರಾಜ್ಯದಿಂದಲೂ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ, ಮೋದಿ ಅವರಿಂದ ಕೇವಲ ಎರಡು ಮೀಟರ್ ಅಂತರದಲ್ಲಿ ನಿಂತು ಗಮನ ಸೆಳೆದಿದ್ದು ಎಸಿಪಿ ರೀನಾ ಸುವರ್ಣಾ. ಪ್ರಧಾನಿಗಳಿಗೆ ಸಮೀಪ ಹೋಗಿ ಭದ್ರತೆ ಒದಗಿಸಿದ ಅವಕಾಶ ರೀನಾ ಅವರಿಗೆ ಸಿಕ್ಕಿದ್ದು ಇದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ.

ಯಾರು ಈ ರೀನಾ ರಘು ಸುವರ್ಣ: 2014 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ವ್ಯಾಸಂಗದ ಅವಧಿಯಲ್ಲಿ ಬೆಂಗಳೂರು ವಿವಿಯಲ್ಲಿ ಚಿನ್ನದ ಪದಕ ಗಿಟ್ಟಿಸಿದ್ದ ರೀನಾ ಸುವರ್ಣ ಅವರು, ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ಪ್ರೊಬೆಷನರಿ ಅವಧಿಯಲ್ಲಿಯೇ ನಾನಾ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವ ಮೂಲಕ ಬೆಂಗಳೂರಿನಲ್ಲಿ ಸದ್ದು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಡಿವೈಎಸ್ಪಿಯಾಗಿ ಸೇವೆ:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ರೀನಾ ಸುವರ್ಣ ಅವರು ಸುಮಾರು ಹನ್ನೊಂದು ಮಿಸ್ಸಿಂಗ್ ಪ್ರಕರಣ ಪತ್ತೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ಒಂದು ದಿನದಲ್ಲಿ ಪತ್ತೆ ಮಾಡುವ ಮೂಲಕ ರೀನಾ ಅವರ ತನಿಖಾ ಶೈಲಿ ಅಧಿಕಾರಿಗಳ ಗಮನ ಸೆಳೆಯಿತು. ಜಿಗಣಿ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗದೇ ಉಳಿದಿದ್ದ ಅಪರಿಚಿತ ಶವ ಪ್ರಕರಣವನ್ನು ಬೇಧಿಸಿದ್ದರು. ಹೀಗೆ ಅಪರಾಧ ಪ್ರಕರಣಗಳನ್ನು ಕ್ಷಾಣಾಕ್ಷತೆಯಿಂದ ಪತ್ತೆ ಮಾಡುವ ಮೂಲಕ ರೀನಾ ಸುವರ್ಣ ಬೆಂಗಳೂರಿನಲ್ಲಿ ಸುದ್ದಿಯಾಗಿದ್ದಾರೆ.

 

ಮಾದಕ ಜಾಲದ ವಿರುದ್ಧ ಕಾರ್ಯಾಚರಣೆ:

ಇನ್ನು ಡ್ರಗ್ ಮಾಫಿಯಾ ವಿರುದ್ಧ ರೀನಾ ಸುವರ್ಣ ನಡೆಸಿರುವ ಕಾರ್ಯಾಚರಣೆ ಬಾರೀ ಸದ್ದು ಮಾಡಿದೆ. ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳ ಎಡೆಮುರಿ ಕಟ್ಟುವಲ್ಲಿ ಎಸಿಪಿ ರೀನಾ ಸುವರ್ಣ ಯಶಸ್ವಿಯಾಗಿದ್ದರು. ಹಲವು ಮಾಫಿಯಾಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಮಹತ್ವದ ಪ್ರಕರಣ ಪತ್ತೆ ಮಾಡುವಲ್ಲಿ ರೀನಾ ಅವರು ಖ್ಯಾತಿಯಾಗಿದ್ದಾರೆ.

ಕೊರೊನಾ ವಾರಿಯರ್:

ಇನ್ನು ಕೊರೊನಾ ಕಾಲದಲ್ಲಿ ತಮ್ಮ ಮನೆ ಸ್ವಚ್ಛತೆ ಜತೆಗೆ ಕೆಲಸ ಮಾಡುವ ಪೊಲೀಸ್ ಠಾಣೆಗಳು ಸ್ವಚ್ಛವಾಗಿಟ್ಟುಕೊಳ್ಳುವ ಅಭಿಯಾನ ಶುರು ಮಾಡಿ ಯಶಸ್ವಿಯಾಗಿದ್ದರು. ಪೊಲೀಸ್ ಠಾಣೆಗಳನ್ನು ಕ್ಲೀನ್ ಮಾಡಿದ್ದರು. ಕೊರೊನಾ ಕಾಲದಲ್ಲಿ ಪೊಲೀಸರಿಗೆ ಯೋಗ ಪರಿಚಯಿಸಿದ್ದರು. ಕೊರೊನಾ ವಾರಿಯರ್ ಆಗಿ ಹೆಸರು ಮಾಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಸಮೀಪ ನಿಂತು ಭದ್ರತೆ ಒದಗಿಸುವ ಮೂಲಕ ಸುದ್ದಿಯಾಗಿದ್ದಾರೆ

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »