TOP STORIES:

FOLLOW US

ಬೆಂಗಳೂರಿನಲ್ಲಿ ಮೋದಿ ಪಕ್ಕದಲ್ಲಿ ನಿಂತು ಮಿಂಚಿದ ರೀಣಾ ರಘು ಸುವರ್ಣ


 

 

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. ಸದ್ಯ ಜೆಸಿ ನಗರದ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೀನಾ ಸುವರ್ಣ 2014 ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಪ್ರೊಬೇಷನರಿ ಅವಧಿಯಲ್ಲಿಯೇ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದ ರೀನಾ ರಘು ಸುವರ್ಣಾ ಅವರು ಇದೀಗ ಪ್ರಧಾನಿ ಪಕ್ಕದಲ್ಲೇ ನಿಂತು ಭದ್ರತೆ ಒದಗಿಸಿ ಭಾರೀ ಸುದ್ದಿಯಾಗಿದ್ದಾರೆ.

ಸೋಮವಾರ ಬಳಗ್ಗೆ ಮಲ್ಲೇಶ್ವರಂ ಬಳಿ ಇರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಗಲ್ಲು ಹಾಕುವ ಕಾರ್ಯಕ್ರಮವಿತ್ತು. ಈ ವೇಳೆ ಪ್ರಧಾನಿ ಅಕ್ಕ ಪಕ್ಕ ಇದ್ದಿದ್ದು ಎನ್‌ಎಸ್ ಜಿ ಪಡೆ. ರಾಜ್ಯದಿಂದಲೂ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ, ಮೋದಿ ಅವರಿಂದ ಕೇವಲ ಎರಡು ಮೀಟರ್ ಅಂತರದಲ್ಲಿ ನಿಂತು ಗಮನ ಸೆಳೆದಿದ್ದು ಎಸಿಪಿ ರೀನಾ ಸುವರ್ಣಾ. ಪ್ರಧಾನಿಗಳಿಗೆ ಸಮೀಪ ಹೋಗಿ ಭದ್ರತೆ ಒದಗಿಸಿದ ಅವಕಾಶ ರೀನಾ ಅವರಿಗೆ ಸಿಕ್ಕಿದ್ದು ಇದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ.

ಯಾರು ಈ ರೀನಾ ರಘು ಸುವರ್ಣ: 2014 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ವ್ಯಾಸಂಗದ ಅವಧಿಯಲ್ಲಿ ಬೆಂಗಳೂರು ವಿವಿಯಲ್ಲಿ ಚಿನ್ನದ ಪದಕ ಗಿಟ್ಟಿಸಿದ್ದ ರೀನಾ ಸುವರ್ಣ ಅವರು, ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ಪ್ರೊಬೆಷನರಿ ಅವಧಿಯಲ್ಲಿಯೇ ನಾನಾ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವ ಮೂಲಕ ಬೆಂಗಳೂರಿನಲ್ಲಿ ಸದ್ದು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಡಿವೈಎಸ್ಪಿಯಾಗಿ ಸೇವೆ:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ರೀನಾ ಸುವರ್ಣ ಅವರು ಸುಮಾರು ಹನ್ನೊಂದು ಮಿಸ್ಸಿಂಗ್ ಪ್ರಕರಣ ಪತ್ತೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ಒಂದು ದಿನದಲ್ಲಿ ಪತ್ತೆ ಮಾಡುವ ಮೂಲಕ ರೀನಾ ಅವರ ತನಿಖಾ ಶೈಲಿ ಅಧಿಕಾರಿಗಳ ಗಮನ ಸೆಳೆಯಿತು. ಜಿಗಣಿ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗದೇ ಉಳಿದಿದ್ದ ಅಪರಿಚಿತ ಶವ ಪ್ರಕರಣವನ್ನು ಬೇಧಿಸಿದ್ದರು. ಹೀಗೆ ಅಪರಾಧ ಪ್ರಕರಣಗಳನ್ನು ಕ್ಷಾಣಾಕ್ಷತೆಯಿಂದ ಪತ್ತೆ ಮಾಡುವ ಮೂಲಕ ರೀನಾ ಸುವರ್ಣ ಬೆಂಗಳೂರಿನಲ್ಲಿ ಸುದ್ದಿಯಾಗಿದ್ದಾರೆ.

 

ಮಾದಕ ಜಾಲದ ವಿರುದ್ಧ ಕಾರ್ಯಾಚರಣೆ:

ಇನ್ನು ಡ್ರಗ್ ಮಾಫಿಯಾ ವಿರುದ್ಧ ರೀನಾ ಸುವರ್ಣ ನಡೆಸಿರುವ ಕಾರ್ಯಾಚರಣೆ ಬಾರೀ ಸದ್ದು ಮಾಡಿದೆ. ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳ ಎಡೆಮುರಿ ಕಟ್ಟುವಲ್ಲಿ ಎಸಿಪಿ ರೀನಾ ಸುವರ್ಣ ಯಶಸ್ವಿಯಾಗಿದ್ದರು. ಹಲವು ಮಾಫಿಯಾಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಮಹತ್ವದ ಪ್ರಕರಣ ಪತ್ತೆ ಮಾಡುವಲ್ಲಿ ರೀನಾ ಅವರು ಖ್ಯಾತಿಯಾಗಿದ್ದಾರೆ.

ಕೊರೊನಾ ವಾರಿಯರ್:

ಇನ್ನು ಕೊರೊನಾ ಕಾಲದಲ್ಲಿ ತಮ್ಮ ಮನೆ ಸ್ವಚ್ಛತೆ ಜತೆಗೆ ಕೆಲಸ ಮಾಡುವ ಪೊಲೀಸ್ ಠಾಣೆಗಳು ಸ್ವಚ್ಛವಾಗಿಟ್ಟುಕೊಳ್ಳುವ ಅಭಿಯಾನ ಶುರು ಮಾಡಿ ಯಶಸ್ವಿಯಾಗಿದ್ದರು. ಪೊಲೀಸ್ ಠಾಣೆಗಳನ್ನು ಕ್ಲೀನ್ ಮಾಡಿದ್ದರು. ಕೊರೊನಾ ಕಾಲದಲ್ಲಿ ಪೊಲೀಸರಿಗೆ ಯೋಗ ಪರಿಚಯಿಸಿದ್ದರು. ಕೊರೊನಾ ವಾರಿಯರ್ ಆಗಿ ಹೆಸರು ಮಾಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಸಮೀಪ ನಿಂತು ಭದ್ರತೆ ಒದಗಿಸುವ ಮೂಲಕ ಸುದ್ದಿಯಾಗಿದ್ದಾರೆ

 


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »