TOP STORIES:

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »