TOP STORIES:

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »