TOP STORIES:

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »