TOP STORIES:

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ


ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ ಎಂಬುದನ್ನು ತಿಳಿದುಕೊಳ್ಳಬೇಕು.

ಬಾಳೆಹಣ್ಣು : ಅತ್ಯಧಿಕ ಪೋಷಕಾಂಶಗಳುಳ್ಳ ಬಾಳೆಹಣ್ಣು ಡಯಟ್‌ ಗೆ ಸೂಕ್ತ. ಮ್ಯಾಂಗನೀಸ್‌ ಹಾಗೂ ಪೊಟ್ಯಾಶಿಯಂ ಅಂಶಗಳು ಇದರಲ್ಲಿವೆ. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ. ಬಾಳೆಹಣ್ಣನ್ನು ಓಟ್‌ ಮೀಲ್‌ ಬೌಲ್‌ ಜೊತೆಗೆ ಸೇವಿಸಿ. ಅಥವಾ ಬನಾನಾ ಶೇಕ್‌ ಮಾಡಿಕೊಳ್ಳಿ, ಇಲ್ಲವಾದಲ್ಲಿ ಸಲಾಡ್‌ ನೊಟ್ಟಿಗೂ ತಿನ್ನಬಹುದು.

ಸೇಬು : ಕಡಿಮೆ ಕ್ಯಾಲೋರಿ ಹಾಗೂ ಅತ್ಯಧಿಕ ಫೈಬರ್‌ ಹೊಂದಿರೋ ಹಣ್ಣು ಇದು. ಆಗಾಗ ಏನಾದ್ರೂ ಕುರುಕಲು ತಿನ್ನಬೇಕೆಂಬ ಚಪಲ ತಡೆದು, ತೂಕ ಇಳಿಸಲು ಇದು ಸಹಾಯ ಮಾಡುತ್ತದೆ. ದಿನವಿಡೀ ಚಟುವಟಿಕೆಯಿಂದಿರಲು ಕೂಡ ಸೇಬು ಸಹಕರಿಸುತ್ತದೆ.

ಅವಕಾಡೊ : ನಿಮ್ಮ ಹಸಿವನ್ನು ಇಂಗಿಸಿ, ಬಾಯಿ ಚಪಲ ಕಡಿಮೆ ಮಾಡುತ್ತದೆ ಈ ಹಣ್ಣು. ಅವಕಾಡೊ ತಿನ್ನುವುದರಿಂದ ತೂಕ ಹೆಚ್ಚಬಹುದೆಂಬ ಭಯವಿಲ್ಲ. ಯಾಕಂದ್ರೆ ಇದರಲ್ಲಿ ನಿಮ್ಮ ದೇಹಕ್ಕೆ ಅಗತ್ಯವಾದ ಗುಡ್‌ ಫ್ಯಾಟ್‌ ಇದೆ.

ದ್ರಾಕ್ಷಿ : ಪೆಂಡಮಿಕ್‌ ನಿಂದಾಗಿ ಎಲ್ಲರೂ ಇಮ್ಯೂನಿಟಿ ಹೆಚ್ಚಿಸಿಕೊಳ್ಳುವತ್ತ ಗಮನಹರಿಸ್ತಿದ್ದಾರೆ. ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ನಿಮ್ಮ ಇಮ್ಯೂನಿಟಿ ಬೂಸ್ಟರ್‌ ಆಗಿ ಇದು ಕೆಲಸ ಮಾಡುತ್ತದೆ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಲು ಸಹಕರಿಸುತ್ತದೆ.

ಬೆರ್ರಿ : ರಾಸ್ ಬೆರ್ರಿ, ಬ್ಲೂ ಬೆರ್ರಿ, ಸ್ಟ್ರಾಬೆರ್ರಿ ಹಣ್ಣುಗಳು ತಿನ್ನಲು ಬಹಳ ರುಚಿಕರ, ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇವುಗಳಲ್ಲಿ ಆಂಟಿಒಕ್ಸಿಡೆಂಟ್ಸ್‌ ಹೇರಳವಾಗಿದೆ. ವಿಟಮಿನ್‌, ಮಿನರಲ್ಸ್‌ ಕೂಡ ಇದೆ. ಹಾಗಾಗಿ ನಿಮ್ಮ ಡಯಟ್‌ ನಲ್ಲಿ ಸೇರಿಸಿಕೊಳ್ಳಿ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »