TOP STORIES:

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ


ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ ಎಂಬುದನ್ನು ತಿಳಿದುಕೊಳ್ಳಬೇಕು.

ಬಾಳೆಹಣ್ಣು : ಅತ್ಯಧಿಕ ಪೋಷಕಾಂಶಗಳುಳ್ಳ ಬಾಳೆಹಣ್ಣು ಡಯಟ್‌ ಗೆ ಸೂಕ್ತ. ಮ್ಯಾಂಗನೀಸ್‌ ಹಾಗೂ ಪೊಟ್ಯಾಶಿಯಂ ಅಂಶಗಳು ಇದರಲ್ಲಿವೆ. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ. ಬಾಳೆಹಣ್ಣನ್ನು ಓಟ್‌ ಮೀಲ್‌ ಬೌಲ್‌ ಜೊತೆಗೆ ಸೇವಿಸಿ. ಅಥವಾ ಬನಾನಾ ಶೇಕ್‌ ಮಾಡಿಕೊಳ್ಳಿ, ಇಲ್ಲವಾದಲ್ಲಿ ಸಲಾಡ್‌ ನೊಟ್ಟಿಗೂ ತಿನ್ನಬಹುದು.

ಸೇಬು : ಕಡಿಮೆ ಕ್ಯಾಲೋರಿ ಹಾಗೂ ಅತ್ಯಧಿಕ ಫೈಬರ್‌ ಹೊಂದಿರೋ ಹಣ್ಣು ಇದು. ಆಗಾಗ ಏನಾದ್ರೂ ಕುರುಕಲು ತಿನ್ನಬೇಕೆಂಬ ಚಪಲ ತಡೆದು, ತೂಕ ಇಳಿಸಲು ಇದು ಸಹಾಯ ಮಾಡುತ್ತದೆ. ದಿನವಿಡೀ ಚಟುವಟಿಕೆಯಿಂದಿರಲು ಕೂಡ ಸೇಬು ಸಹಕರಿಸುತ್ತದೆ.

ಅವಕಾಡೊ : ನಿಮ್ಮ ಹಸಿವನ್ನು ಇಂಗಿಸಿ, ಬಾಯಿ ಚಪಲ ಕಡಿಮೆ ಮಾಡುತ್ತದೆ ಈ ಹಣ್ಣು. ಅವಕಾಡೊ ತಿನ್ನುವುದರಿಂದ ತೂಕ ಹೆಚ್ಚಬಹುದೆಂಬ ಭಯವಿಲ್ಲ. ಯಾಕಂದ್ರೆ ಇದರಲ್ಲಿ ನಿಮ್ಮ ದೇಹಕ್ಕೆ ಅಗತ್ಯವಾದ ಗುಡ್‌ ಫ್ಯಾಟ್‌ ಇದೆ.

ದ್ರಾಕ್ಷಿ : ಪೆಂಡಮಿಕ್‌ ನಿಂದಾಗಿ ಎಲ್ಲರೂ ಇಮ್ಯೂನಿಟಿ ಹೆಚ್ಚಿಸಿಕೊಳ್ಳುವತ್ತ ಗಮನಹರಿಸ್ತಿದ್ದಾರೆ. ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ನಿಮ್ಮ ಇಮ್ಯೂನಿಟಿ ಬೂಸ್ಟರ್‌ ಆಗಿ ಇದು ಕೆಲಸ ಮಾಡುತ್ತದೆ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಲು ಸಹಕರಿಸುತ್ತದೆ.

ಬೆರ್ರಿ : ರಾಸ್ ಬೆರ್ರಿ, ಬ್ಲೂ ಬೆರ್ರಿ, ಸ್ಟ್ರಾಬೆರ್ರಿ ಹಣ್ಣುಗಳು ತಿನ್ನಲು ಬಹಳ ರುಚಿಕರ, ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇವುಗಳಲ್ಲಿ ಆಂಟಿಒಕ್ಸಿಡೆಂಟ್ಸ್‌ ಹೇರಳವಾಗಿದೆ. ವಿಟಮಿನ್‌, ಮಿನರಲ್ಸ್‌ ಕೂಡ ಇದೆ. ಹಾಗಾಗಿ ನಿಮ್ಮ ಡಯಟ್‌ ನಲ್ಲಿ ಸೇರಿಸಿಕೊಳ್ಳಿ.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »