TOP STORIES:

FOLLOW US

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ


ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್ಕಾರವೇನು ಪಡಿತರ ನೀಡಿತ್ತಾದರೂ ಅದಕ್ಕೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಹಣವಿಲ್ಲದೆ ಅಸಹಾಯಕವಾದ ಕುಟುಂಬಗಳು ಹಲವು. ಈ ಸಂದರ್ಭದಲ್ಲಿ ಬಡ ಜನರಿಗೆ ತನ್ನಿಂದಾದ ಸಹಾಯ ನೀಡಲು ಮುಂದಾದರು ಉದ್ಯಮಿ ಗೋವಿಂದ ಬಾಬು ಪೂಜಾರಿಯವರು.

ಬೈಂದೂರು ಬಿಜೂರಿನವರಾದ ಗೋವಿಂದ ಬಾಬು ಪೂಜಾರಿ ಅವರು ನಿಜಾರ್ಥದಲ್ಲಿ ಬಡವರ ಬಂಧು. ಸದಾ ಬಡವರ, ದೀನ ದುರ್ಬಲರು, ನಿರ್ಗತಿಕರು, ಅಸಾಹಯಕರ ಕಂಡರೆ ಅದೇನೋ ಕನಿಕರ. ಹೃದಯ ಶ್ರೀಮಂತಿಕೆ ಮೂರ್ತಿವೆತ್ತ ಗೋವಿಂದ ಬಾಬು ಪೂಜಾರಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರೂ ಕೂಡಾ ತನ್ನೂರಿನ ಜನರ ಕಣ್ಣೀರು ಒರೆಸುವುದರಲ್ಲಿ ಸದಾ ಮುಂದೆ. ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ವ್ಯಾಪ್ತಿಯ ಜನರ ನೆರವಿಗೆ ನಿಂತ ಇವರು ಕಳೆದ ಒಂದು ವಾರದಿಂದ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 4000ಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ್ದಾರೆ.

ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಳ್ಳಿ ಹಳ್ಳಿಯ ಗ್ರಾಮೀಣ ಪ್ರದೇಶಗಳಿಗೆ ತಾನೇ ಖುದ್ದಾಗಿ ಭೇಟಿ ನೀಡಿ ತನ್ನ ಕೈಯಾರೆ ಕಿಟ್ ವಿತರಿಸಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಈಗ ಜಿ.ಬಿ.ಪಿ (ಗೋವಿಂದ ಬಾಬು ಪೂಜಾರಿ ಜನಸೇವಾ ಸಂಘ) ವಿದ್ದು ಆ ಸಂಘದ ಮೂಲಕ ಸ್ಥಳೀಯ ಪ್ರದೇಶದಲ್ಲಿ ಆರ್ಹ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥಗಳ ಕಿಟ್ ನೀಡಿದ್ದಾರೆ. ಈಗಾಗಲೇ ಬೈಂದೂರು ಕ್ಷೇತ್ರ ವ್ಯಾಪ್ತಿಯ 66 ಗ್ರಾಮಗಳ 4 ಸಾವಿರ ಅಧಿಕ ಮಂದಿಗೆ ಕಿಟ್ ವಿತರಿಸಿದ್ದಾರೆ.

ಇಷ್ಟಕ್ಕೆ ಇವರ ಸೇವಾಧರ್ಮ ನಿಂತಿಲ್ಲ. ಬೇಸಿಗೆಯಲ್ಲಿ ಉಪ್ಪುಂದ, ತಾರಾಪತಿ ಸೇರಿದಂತೆ 470 ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದ್ದಾರೆ. ತೀರ ಬಡ ಕುಟುಂಬಗಳು ಸೂರು ಹೊಂದಲು ಕಷ್ಟ ವ್ಯಕ್ತ ಪಡಿಸಿದಾಗ ಸ್ಪಂದಿಸಿದ ಇವರು ತಾನೇ ಮನೆ ನಿರ್ಮಾಣ ಮಾಡಿಕೊಡುವ ಆಶ್ವಾಸನೆವಿತ್ತು. ಈಗಾಗಲೇ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ 3 ಮನೆಗಳ ನಿರ್ಮಾಣ ಮಾಡಿದ್ದಾರೆ. ಶೀಘ್ರ ಅದರ ಪ್ರವೇಶೋತ್ಸವವೂ ನಡೆಯಲಿದೆ.

ಇವರ ಉದ್ಯಮ ಕ್ಷೇತ್ರವಿರುವುದು ಬೆಂಗಳೂರಿನಲ್ಲಿ. ಅಲ್ಲಿಯೂ ಕೂಡಾ ಕೊರೊನಾ 2ನೇ ಅಲೆಯಿಂದ ಸಮಸ್ಯೆಗಿಡಾದವರಿಗೆ ಸ್ಪಂದಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಬಿಬಿಎಂಒಪಿಯ ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ.

ಕಳೆದ ವರ್ಷ ತನ್ನೂರಿನ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು. 300 ಅಧಿಕ ಮನೆಗಳಿಗೆ 2 ತಿಂಗಳು ಶುದ್ದ ಕುಡಿಯುವ ನೀರು ಸರಬರಾಜು ಮಾಡಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೂಡಾ ಕೊರೊನಾ ವಾರಿಯರ್ಸ್ ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಿದ್ದರು.

ಶೆಫ್ಟಾಕ್ ಫುಡ್ ಹಾಗೂ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ಇವರು, ಶೆಫ್ಟಾಕ್ ನ್ಯೂಟ್ರಿಫುಡ್ ಪ್ರೈ.ನ ಆಡಳಿತ ನಿರ್ದೇಶಕರು, ಪ್ರಗ್ನ್ಯಾ ಸಾಗರ್ ಹೋಟೆಲ್ಸ್ ಹಾಗೂ ರೆಸಾರ್ಟ್ ಪ್ರೈ. ಲಿ. ಮತ್ತು ಮತ್ಯ ಬಂಧನ ಪ್ರೈ. ಲಿ.ನ ಆಡಳಿತ ನಿರ್ದೇಶಕರು. ಶೆಫ್ಟಾಕ್ ಕ್ಯಾಟರಿಂಗ್ ಸರ್ವಿಸಸ್‍ನ ಮಾಲಕರು ಆಗಿರುವ ಇವರು ಹಲವಾರು ಸಂಸ್ಥೆಗಳ ಪ್ರಮುಖ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

 


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »