TOP STORIES:

FOLLOW US

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ


ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್ಕಾರವೇನು ಪಡಿತರ ನೀಡಿತ್ತಾದರೂ ಅದಕ್ಕೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಹಣವಿಲ್ಲದೆ ಅಸಹಾಯಕವಾದ ಕುಟುಂಬಗಳು ಹಲವು. ಈ ಸಂದರ್ಭದಲ್ಲಿ ಬಡ ಜನರಿಗೆ ತನ್ನಿಂದಾದ ಸಹಾಯ ನೀಡಲು ಮುಂದಾದರು ಉದ್ಯಮಿ ಗೋವಿಂದ ಬಾಬು ಪೂಜಾರಿಯವರು.

ಬೈಂದೂರು ಬಿಜೂರಿನವರಾದ ಗೋವಿಂದ ಬಾಬು ಪೂಜಾರಿ ಅವರು ನಿಜಾರ್ಥದಲ್ಲಿ ಬಡವರ ಬಂಧು. ಸದಾ ಬಡವರ, ದೀನ ದುರ್ಬಲರು, ನಿರ್ಗತಿಕರು, ಅಸಾಹಯಕರ ಕಂಡರೆ ಅದೇನೋ ಕನಿಕರ. ಹೃದಯ ಶ್ರೀಮಂತಿಕೆ ಮೂರ್ತಿವೆತ್ತ ಗೋವಿಂದ ಬಾಬು ಪೂಜಾರಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರೂ ಕೂಡಾ ತನ್ನೂರಿನ ಜನರ ಕಣ್ಣೀರು ಒರೆಸುವುದರಲ್ಲಿ ಸದಾ ಮುಂದೆ. ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ವ್ಯಾಪ್ತಿಯ ಜನರ ನೆರವಿಗೆ ನಿಂತ ಇವರು ಕಳೆದ ಒಂದು ವಾರದಿಂದ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 4000ಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ್ದಾರೆ.

ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಳ್ಳಿ ಹಳ್ಳಿಯ ಗ್ರಾಮೀಣ ಪ್ರದೇಶಗಳಿಗೆ ತಾನೇ ಖುದ್ದಾಗಿ ಭೇಟಿ ನೀಡಿ ತನ್ನ ಕೈಯಾರೆ ಕಿಟ್ ವಿತರಿಸಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಈಗ ಜಿ.ಬಿ.ಪಿ (ಗೋವಿಂದ ಬಾಬು ಪೂಜಾರಿ ಜನಸೇವಾ ಸಂಘ) ವಿದ್ದು ಆ ಸಂಘದ ಮೂಲಕ ಸ್ಥಳೀಯ ಪ್ರದೇಶದಲ್ಲಿ ಆರ್ಹ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥಗಳ ಕಿಟ್ ನೀಡಿದ್ದಾರೆ. ಈಗಾಗಲೇ ಬೈಂದೂರು ಕ್ಷೇತ್ರ ವ್ಯಾಪ್ತಿಯ 66 ಗ್ರಾಮಗಳ 4 ಸಾವಿರ ಅಧಿಕ ಮಂದಿಗೆ ಕಿಟ್ ವಿತರಿಸಿದ್ದಾರೆ.

ಇಷ್ಟಕ್ಕೆ ಇವರ ಸೇವಾಧರ್ಮ ನಿಂತಿಲ್ಲ. ಬೇಸಿಗೆಯಲ್ಲಿ ಉಪ್ಪುಂದ, ತಾರಾಪತಿ ಸೇರಿದಂತೆ 470 ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದ್ದಾರೆ. ತೀರ ಬಡ ಕುಟುಂಬಗಳು ಸೂರು ಹೊಂದಲು ಕಷ್ಟ ವ್ಯಕ್ತ ಪಡಿಸಿದಾಗ ಸ್ಪಂದಿಸಿದ ಇವರು ತಾನೇ ಮನೆ ನಿರ್ಮಾಣ ಮಾಡಿಕೊಡುವ ಆಶ್ವಾಸನೆವಿತ್ತು. ಈಗಾಗಲೇ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ 3 ಮನೆಗಳ ನಿರ್ಮಾಣ ಮಾಡಿದ್ದಾರೆ. ಶೀಘ್ರ ಅದರ ಪ್ರವೇಶೋತ್ಸವವೂ ನಡೆಯಲಿದೆ.

ಇವರ ಉದ್ಯಮ ಕ್ಷೇತ್ರವಿರುವುದು ಬೆಂಗಳೂರಿನಲ್ಲಿ. ಅಲ್ಲಿಯೂ ಕೂಡಾ ಕೊರೊನಾ 2ನೇ ಅಲೆಯಿಂದ ಸಮಸ್ಯೆಗಿಡಾದವರಿಗೆ ಸ್ಪಂದಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಬಿಬಿಎಂಒಪಿಯ ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ.

ಕಳೆದ ವರ್ಷ ತನ್ನೂರಿನ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು. 300 ಅಧಿಕ ಮನೆಗಳಿಗೆ 2 ತಿಂಗಳು ಶುದ್ದ ಕುಡಿಯುವ ನೀರು ಸರಬರಾಜು ಮಾಡಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೂಡಾ ಕೊರೊನಾ ವಾರಿಯರ್ಸ್ ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಿದ್ದರು.

ಶೆಫ್ಟಾಕ್ ಫುಡ್ ಹಾಗೂ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ಇವರು, ಶೆಫ್ಟಾಕ್ ನ್ಯೂಟ್ರಿಫುಡ್ ಪ್ರೈ.ನ ಆಡಳಿತ ನಿರ್ದೇಶಕರು, ಪ್ರಗ್ನ್ಯಾ ಸಾಗರ್ ಹೋಟೆಲ್ಸ್ ಹಾಗೂ ರೆಸಾರ್ಟ್ ಪ್ರೈ. ಲಿ. ಮತ್ತು ಮತ್ಯ ಬಂಧನ ಪ್ರೈ. ಲಿ.ನ ಆಡಳಿತ ನಿರ್ದೇಶಕರು. ಶೆಫ್ಟಾಕ್ ಕ್ಯಾಟರಿಂಗ್ ಸರ್ವಿಸಸ್‍ನ ಮಾಲಕರು ಆಗಿರುವ ಇವರು ಹಲವಾರು ಸಂಸ್ಥೆಗಳ ಪ್ರಮುಖ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

 


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »