TOP STORIES:

ಬೈದರ್ಕಳ ಪಾತ್ರಿ ಬಚ್ಚ ಪೂಜಾರಿ ಯವರು ನಿಧನ


ಜೀವನದ ಬಹುಪಾಲು ಸಮಯ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿ ಕುಕ್ಕಜೆ ಇಲ್ಲಿ ಬೈದರ್ಕಳ ಪಾತ್ರಿಯಾಗಿ ಕೋಟಿ ಚೆನ್ನಯ್ಯರ ಸೇವೆಯನ್ನು ಮಾಡುತ್ತಿದ್ದ , ಇತಿಹಾಸ ಪುರುಷರಾದ ಕೋಟಿ ಚೆನ್ನಯ್ಯರ ಬಗ್ಗೆ ಅಪಾರವಾದ ಭಕ್ತಿ, ಜ್ಞಾನ ಹಾಗೂ ನಂಬಿಕೆಯನ್ನು ಹೊಂದಿದ್ದ ನಮ್ಮೂರಿನ ಹೆಮ್ಮೆಯ ಶ್ರೀ ಬಚ್ಚ ಪೂಜಾರಿ ಯವರು ನಿನ್ನೆ ಅಲ್ಪ ಕಾಲದ ಅನಾರೋಗ್ಯದ ನಿಮಿತ್ತ ಧೈವಾಧೀನರಾಧರು ಎಂಬುದು ದುಃಖದ ವಿಷಯ.

*ತುಳುನಾಡಿನ ಕಲೆ, ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಇಂತಹ ಒಬ್ಬ ಹಿರಿಯ, ಅನುಭವಿ, ಮಾರ್ಗದರ್ಶಕರನ್ನು ಕಳೆದು ಕೊಂಡಿರುವುದು ಮುಂದಿನ ಪೀಳಿಗೆಗೆ ಅತಿ ದೊಡ್ಡ ನಷ್ಟ ಎಂದರೂ ತಪ್ಪಾಗಲಾರದು. ಇವರು ಪಕ್ಕದ ಗ್ರಾಮದ ನೇರಳೆ ಅಡಿಸ್ಥಾನ ಗರಡಿ, 41ನೇ ಶೀರೂರು ಹಾಗೂ ಕರಾವಳಿಯ ಹಲವಾರು ಗರಡಿಗಳಲ್ಲಿ ಸರಿಸುಮಾರು ಐವತ್ತು ವರುಷಗಳ ಕಾಲ ಸೇವೆ ಸಲ್ಲಿಸಿ,ಅದೆಷ್ಟೋ ಕಿರಿಯ ಪಾತ್ರಿಗಳಿಗೆ ಮಾರ್ಗದರ್ಶನ ಮಾಡಿ, ಬೆನ್ನು ತಟ್ಟುತ್ತಿದ್ದರು.

ಇವರನ್ನು ಇರ್ವತ್ತೂರು ಮುಟ್ಟಿಕಲ್ಲು ತಾನ ಗರಡಿಯಲ್ಲಿ ವಿಶೇಷ ಸಾರ್ವಜನಿಕ ಸನ್ಮಾನ ಹಾಗೂ ಉಡುಪಿ ಮಂಗಳೂರು ಜಿಲ್ಲೆಗಳಲ್ಲಿ ವಿಶೇಷವಾಗಿ ಸನ್ಮಾನಿಸಿ, ಜಾನಪದ ಅಕಾಡಮಿಯಲ್ಲೂ ಗೌರವಿಸಲಾಗಿತ್ತು ಎಂಬುದು ಅವಿಸ್ಮರಣೀಯ.

ಪೂಜ್ಯರ ಆತ್ಮಕ್ಕೆ ಅವರು ಆರಾಧಿಸಿಕೊಂಡು ಬಂದಿದ್ದ ದೈವ ದೇವರುಗಳು ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುವ, ಓಂ ಶಾಂತಿ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »