TOP STORIES:

ಬೊಂಡಂತ್ತಿಲ: ಸುಮಧುರ ಕಂಠದ ಯುವ ಪ್ರತಿಭೆ ವಾತ್ಸಲ್ಯ


ಮಂಗಳೂರು: ಮಂಗಳೂರಿನ ಬೊಂಡಂತ್ತಿಲ ಗ್ರಾಮದ ಸಂಜೀವ ಕೊಟ್ಯಾನ್ ಮತ್ತು ಯಶೋದ ದಂಪತಿಗಳ ಕೊನೆಯ ಪುತ್ರಿಯಾಗಿ 26/4/1993 ರಲ್ಲಿ ಜನಿಸಿದರು. ನಾಲ್ಕು ಸಹೋದರಿಯ ಪ್ರೀತಿಯ ತಂಗಿಯಾಗಿರುವ ಇವರದ್ದು ಚಿಕ್ಕ ಮತ್ತು ಚೊಕ್ಕದಾದ ಸಂಸಾರ.

ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ತೋಮಸ್ ಹಿರಿಯ ಪ್ರಾಥಮಿಕ ಶಾಲೆ ಬೊಂಡಂತ್ತಿಲ,ಪ್ರೌಢ ವಿದ್ಯಾಭ್ಯಾಸವನ್ನು ಸಂತ ಜೆರೋಸ ಬಾಲಕಿಯರ ಪ್ರೌಢಶಾಲೆ ಜೆಪ್ಪು ಹಾಗೂ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು,ಕಾರ್ಸ್ರ್ಟಿಟ್ ಹಾಗೂ ಪದವಿಯನ್ನು ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಗೊಕಾರ್ಣಥೇಶ್ವರ ಕಾಲೇಜು,ಮಂಗಳೂರಿನಲ್ಲಿ ಮಾಡಿರುತ್ತಾರೆ.ಪ್ರಸ್ತುತ ಸ್ಪರ್ಶ್ ರಿಸ್ಕ್ ಮ್ಯಾನೇಜರ್ ಕಂಪೆನಿಯಲ್ಲಿ ಸ್ಟಾಪ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ…

ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಇವರು ಹಲವು ಪ್ರಶಸ್ತಿಗಳನ್ನು ತನ್ನಗಾಗಿಸಿದ್ದಾರೆ.ಓಟದಲ್ಲಿ ಮುಂದು ಇದ್ದ ಇವರು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದರೆ. ಹಲವು ಸಂಸ್ಥೆಗಳು ಏರ್ಪಡಿಸಿದ್ದ ಕ್ರೀಡೆಯಲ್ಲಿ ಭಾಗವಹಿಸಿದ ಇವರು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡಿದ್ದಾರೆ. ‘ಯುವವಾಹಿನಿ’ ನಡೆಸಿದ ‘ಕ್ರೀಡಾಕೂಟ-2020’ ರಲ್ಲಿ ಓಟದ ವಿಭಾಗದಲ್ಲಿ ವಿಜೇತರಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ..

ಕೇವಲ ಕ್ರೀಡ ಕ್ಷೇತ್ರದಲ್ಲಿ ಅಲ್ಲದೇ ಸಾಂಸ್ಕೃತಿಕ ಕ್ಷೇತ್ರದಲ್ಲು ತನ್ನ ಪ್ರತಿಭೆಯನ್ನು ಮುಂದುವರಿಸಿರುವ ಇವರು ಕಾಲೇಜಿನಲ್ಲಿ ಇರುವಾಗಲೇ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸೈ ಎನಿಸಿಕೊಂಡವರು ಇವರು.ತನ್ನ ಅದ್ಭುತ ಸ್ವರದಿಂದ ಮನೆಮಾತಗಿರುವ ಇವರು ಹಲವು ಆಲ್ಬಮ್ ಸಾಂಗ್ ಗೆ ಧ್ವನಿ ಆಗಿದ್ದಾರೆ. ಇವರು ಮಾಡಿರುವ ಪ್ರಥಮ ಆಲ್ಬಮ್ ಸಾಂಗ್ನಲ್ಲೆ ಎಲ್ಲರ ಮೆಚ್ಚುಗೆ ಪಾತ್ರರಾದರು. *’ಕುಡ್ಲ ತುಳು ಕವರ್’* ಟೈಟಲ್ ನಲ್ಲಿ ಮೂಡಿಬಂದ *’ಮುಕ್ಕಬುಲಾ….ಮುಕ್ಕಬುಲಾ..’* ತಮಿಳು ಸಾಂಗ್ ಸೈಲಿಯ *’ಮೈಕಾಳ… ಕೊಡಿಯಾಳ…ಕುಡ್ಲ..’* ಎನ್ನುವ ತುಳು ಆಲ್ಬಮ್ ಸಾಂಗ್ ಗೆ ಧ್ವನಿಯಾಗಿ ಎಲ್ಲರಿಂದಲೂ ಮೆಚ್ಚುಗೆಯನ್ನು ಪಡೆದಿದ್ದಾರೆ ಮತ್ತು ಈ ಆಲ್ಬಮ್ ಸಾಂಗ್ ಕೇವಲ ಒಂದು ದಿನದಲ್ಲಿ ಒಂದು ಲಕ್ಷಕ್ಕೂ ಮೀರಿ ವೀಕ್ಷಣೆಯಾಗಿರುವುದು ಇವರ ಗಾಯನಕ್ಕೆ ದೊಡ್ಡ ಹೆಜ್ಜೆಯನ್ನು ತಂದುಕೊಟ್ಟಿತ್ತು.ತದನಂತರ *’ಅಪ್ಪೆನ ಸಿರಿಪಾದ’* ತುಳು ಸ್ಟೇಟಸ್ ಸಾಂಗ್ ಮತ್ತು ಇತ್ತೀಚಿಗೆ ಬಿಡುಗಡೆಯಾದ *’Exam ಉಂಡೆ?’* ಎಂಬ ಆಲ್ಬಮ್ ಸಾಂಗ್ ಗೆ ಧ್ವನಿ ಆಗಿದ್ದಾರೆ. *’ಅಮ್ಮ ಕಟೀಲೇಶ್ವರಿ’…* ತುಳು ಭಕ್ತಿಗೀತೆ ಆಲ್ಬಮ್ ಸಾಂಗ್ ನಲ್ಲಿ ಹಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿರುತ್ತಾರೆ. *ಸ.ರಿ.ಗ.ಮ.ಪ ವಿಡಿಯೋ ಆಲ್ಬಮ್ ಅವಾರ್ಡ್ 2019* ರವರು ನಡೆಸಿದ ಸ್ಪರ್ಧೆಯಲ್ಲಿ *ಬೆಸ್ಟ್ ಫಿಮೇಲ್ ಸಿಂಗರ್* ಅವಾರ್ಡ್ ನ್ನು ಪಡೆದುಕೊಂಡಿರುವುದು ಇವರು ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸ್ಪೂರ್ತಿಯಾಗಿದೆ ಹಾಗೂ ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಗಾಯಕಿಯಾಗಿಯೂ ಹೊರಹೊಮ್ಮಿದ್ದಾರೆ. ಇಷ್ಟೇ ಅಲ್ಲದೆ *’ಮನಸ್ಸ್ ದ ಪಾತೆರ’* ಎನ್ನುವ ತುಳು ಕಿರುಚಿತ್ರದಲ್ಲಿ ಬಣ್ಣ ಹಚ್ಚಿ ನಟನೆ ಕ್ಷೇತ್ರದಲ್ಲು ತನ್ನನ್ನು ತಾನು ತೊಡಗಿಸಿಕೊಂಡು ಮುನ್ನುಗ್ಗುತ್ತಿರುವ ಬಹುಮುಖ ಪ್ರತಿಭೆ.

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ನಿಮ್ಮ ಗಾಯನವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಅರಸಿಬರಲಿ ಎನ್ನುವ ಶುಭಾಶಯಗಳೊಂದಿಗೆ,ಗಾಯನ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ, ಆರ್ಶಿವಾದಿಸೋಣ ಎನ್ನುವ ಕೋರಿಕೆ.

Credits: ರಾಜೇಶ್ ಎಸ್ ಬಲ್ಯ


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »