TOP STORIES:

ಬೊಂಡಂತ್ತಿಲ: ಸುಮಧುರ ಕಂಠದ ಯುವ ಪ್ರತಿಭೆ ವಾತ್ಸಲ್ಯ


ಮಂಗಳೂರು: ಮಂಗಳೂರಿನ ಬೊಂಡಂತ್ತಿಲ ಗ್ರಾಮದ ಸಂಜೀವ ಕೊಟ್ಯಾನ್ ಮತ್ತು ಯಶೋದ ದಂಪತಿಗಳ ಕೊನೆಯ ಪುತ್ರಿಯಾಗಿ 26/4/1993 ರಲ್ಲಿ ಜನಿಸಿದರು. ನಾಲ್ಕು ಸಹೋದರಿಯ ಪ್ರೀತಿಯ ತಂಗಿಯಾಗಿರುವ ಇವರದ್ದು ಚಿಕ್ಕ ಮತ್ತು ಚೊಕ್ಕದಾದ ಸಂಸಾರ.

ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ತೋಮಸ್ ಹಿರಿಯ ಪ್ರಾಥಮಿಕ ಶಾಲೆ ಬೊಂಡಂತ್ತಿಲ,ಪ್ರೌಢ ವಿದ್ಯಾಭ್ಯಾಸವನ್ನು ಸಂತ ಜೆರೋಸ ಬಾಲಕಿಯರ ಪ್ರೌಢಶಾಲೆ ಜೆಪ್ಪು ಹಾಗೂ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು,ಕಾರ್ಸ್ರ್ಟಿಟ್ ಹಾಗೂ ಪದವಿಯನ್ನು ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಗೊಕಾರ್ಣಥೇಶ್ವರ ಕಾಲೇಜು,ಮಂಗಳೂರಿನಲ್ಲಿ ಮಾಡಿರುತ್ತಾರೆ.ಪ್ರಸ್ತುತ ಸ್ಪರ್ಶ್ ರಿಸ್ಕ್ ಮ್ಯಾನೇಜರ್ ಕಂಪೆನಿಯಲ್ಲಿ ಸ್ಟಾಪ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ…

ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಇವರು ಹಲವು ಪ್ರಶಸ್ತಿಗಳನ್ನು ತನ್ನಗಾಗಿಸಿದ್ದಾರೆ.ಓಟದಲ್ಲಿ ಮುಂದು ಇದ್ದ ಇವರು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡು ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದರೆ. ಹಲವು ಸಂಸ್ಥೆಗಳು ಏರ್ಪಡಿಸಿದ್ದ ಕ್ರೀಡೆಯಲ್ಲಿ ಭಾಗವಹಿಸಿದ ಇವರು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡಿದ್ದಾರೆ. ‘ಯುವವಾಹಿನಿ’ ನಡೆಸಿದ ‘ಕ್ರೀಡಾಕೂಟ-2020’ ರಲ್ಲಿ ಓಟದ ವಿಭಾಗದಲ್ಲಿ ವಿಜೇತರಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ..

ಕೇವಲ ಕ್ರೀಡ ಕ್ಷೇತ್ರದಲ್ಲಿ ಅಲ್ಲದೇ ಸಾಂಸ್ಕೃತಿಕ ಕ್ಷೇತ್ರದಲ್ಲು ತನ್ನ ಪ್ರತಿಭೆಯನ್ನು ಮುಂದುವರಿಸಿರುವ ಇವರು ಕಾಲೇಜಿನಲ್ಲಿ ಇರುವಾಗಲೇ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸೈ ಎನಿಸಿಕೊಂಡವರು ಇವರು.ತನ್ನ ಅದ್ಭುತ ಸ್ವರದಿಂದ ಮನೆಮಾತಗಿರುವ ಇವರು ಹಲವು ಆಲ್ಬಮ್ ಸಾಂಗ್ ಗೆ ಧ್ವನಿ ಆಗಿದ್ದಾರೆ. ಇವರು ಮಾಡಿರುವ ಪ್ರಥಮ ಆಲ್ಬಮ್ ಸಾಂಗ್ನಲ್ಲೆ ಎಲ್ಲರ ಮೆಚ್ಚುಗೆ ಪಾತ್ರರಾದರು. *’ಕುಡ್ಲ ತುಳು ಕವರ್’* ಟೈಟಲ್ ನಲ್ಲಿ ಮೂಡಿಬಂದ *’ಮುಕ್ಕಬುಲಾ….ಮುಕ್ಕಬುಲಾ..’* ತಮಿಳು ಸಾಂಗ್ ಸೈಲಿಯ *’ಮೈಕಾಳ… ಕೊಡಿಯಾಳ…ಕುಡ್ಲ..’* ಎನ್ನುವ ತುಳು ಆಲ್ಬಮ್ ಸಾಂಗ್ ಗೆ ಧ್ವನಿಯಾಗಿ ಎಲ್ಲರಿಂದಲೂ ಮೆಚ್ಚುಗೆಯನ್ನು ಪಡೆದಿದ್ದಾರೆ ಮತ್ತು ಈ ಆಲ್ಬಮ್ ಸಾಂಗ್ ಕೇವಲ ಒಂದು ದಿನದಲ್ಲಿ ಒಂದು ಲಕ್ಷಕ್ಕೂ ಮೀರಿ ವೀಕ್ಷಣೆಯಾಗಿರುವುದು ಇವರ ಗಾಯನಕ್ಕೆ ದೊಡ್ಡ ಹೆಜ್ಜೆಯನ್ನು ತಂದುಕೊಟ್ಟಿತ್ತು.ತದನಂತರ *’ಅಪ್ಪೆನ ಸಿರಿಪಾದ’* ತುಳು ಸ್ಟೇಟಸ್ ಸಾಂಗ್ ಮತ್ತು ಇತ್ತೀಚಿಗೆ ಬಿಡುಗಡೆಯಾದ *’Exam ಉಂಡೆ?’* ಎಂಬ ಆಲ್ಬಮ್ ಸಾಂಗ್ ಗೆ ಧ್ವನಿ ಆಗಿದ್ದಾರೆ. *’ಅಮ್ಮ ಕಟೀಲೇಶ್ವರಿ’…* ತುಳು ಭಕ್ತಿಗೀತೆ ಆಲ್ಬಮ್ ಸಾಂಗ್ ನಲ್ಲಿ ಹಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿರುತ್ತಾರೆ. *ಸ.ರಿ.ಗ.ಮ.ಪ ವಿಡಿಯೋ ಆಲ್ಬಮ್ ಅವಾರ್ಡ್ 2019* ರವರು ನಡೆಸಿದ ಸ್ಪರ್ಧೆಯಲ್ಲಿ *ಬೆಸ್ಟ್ ಫಿಮೇಲ್ ಸಿಂಗರ್* ಅವಾರ್ಡ್ ನ್ನು ಪಡೆದುಕೊಂಡಿರುವುದು ಇವರು ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸ್ಪೂರ್ತಿಯಾಗಿದೆ ಹಾಗೂ ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಗಾಯಕಿಯಾಗಿಯೂ ಹೊರಹೊಮ್ಮಿದ್ದಾರೆ. ಇಷ್ಟೇ ಅಲ್ಲದೆ *’ಮನಸ್ಸ್ ದ ಪಾತೆರ’* ಎನ್ನುವ ತುಳು ಕಿರುಚಿತ್ರದಲ್ಲಿ ಬಣ್ಣ ಹಚ್ಚಿ ನಟನೆ ಕ್ಷೇತ್ರದಲ್ಲು ತನ್ನನ್ನು ತಾನು ತೊಡಗಿಸಿಕೊಂಡು ಮುನ್ನುಗ್ಗುತ್ತಿರುವ ಬಹುಮುಖ ಪ್ರತಿಭೆ.

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ನಿಮ್ಮ ಗಾಯನವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಅರಸಿಬರಲಿ ಎನ್ನುವ ಶುಭಾಶಯಗಳೊಂದಿಗೆ,ಗಾಯನ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ, ಆರ್ಶಿವಾದಿಸೋಣ ಎನ್ನುವ ಕೋರಿಕೆ.

Credits: ರಾಜೇಶ್ ಎಸ್ ಬಲ್ಯ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »