TOP STORIES:

FOLLOW US

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅಗೌರವ : ಸೊರಕೆ ಖಂಡನೆ..!


ಉಡುಪಿ: ಗಣರಾಜ್ಯೋತ್ಸವ ಪೆರೇಡಿಗೆ ಕೇರಳ ಸರಕಾರವು ಕಳುಹಿಸಿದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಡೆ ಹಿಡಿದಿರುವ ಕೇಂದ್ರದ ನಿಲುವು, ಗುರುಗಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ತೋರಿಸಿದ ಅಗೌರವ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಜಾತಿ ಪದ್ಧತಿ ಬಲವಾಗಿ ಬೇರೂರಿದ್ದ ಸಮಯದಲ್ಲಿ ಸಮಾಜದ ಶೋಷಣೆಗೊಳಗಾದ ಜನರಿಗೆ ದೇವರ ಪಾರ್ಥನೆ ಮಾಡಲು ಹಾಗೂ ದೇವಸ್ಥಾನಕ್ಕೂ ಪ್ರವೇಶವಿಲ್ಲದ ಸಮಯದಲ್ಲಿ ಗುರೂಜಿ ಧ್ವನಿಯಾಗಿ ಆತ್ಮವಿಶ್ವಾಸ ತುಂಬಿದರು. ಅವರಲ್ಲಿ ಸಮಾನತೆಯ ಆಶಾಕಿರಣ ಬೀರಿ, ಶೋಷಣೆಗೊಳಗಾದ ಜನರಿಗೆ ಭರವಸೆ ನೀಡಿದರು. ಒಂದೇ ಜಾತಿ, ಒಂದೇ ಮತ ಎಂಬ ವಿಶಾಲ ಸಂದೇಶ ನೀಡಿ, ಮಹಾ ಮಾನವತಾವಾದಿಯಾದ ಗುರುಗಳ ಸ್ತಬ್ದ ಚಿತ್ರವನ್ನು ಕಡೆಗಣಿಸಿರುವುದು, ಅವರ ಬೋಧನೆಗಳನ್ನು ಕೇಂದ್ರ ಸರಕಾರ ಕಡೆಗಣಿಸಿದಂತಿದೆ. ಗುರುಗಳನ್ನು ಭಕ್ತಿಯಿಂದ ಆರಾಧಿಸುವ ಬಿಜೆಪಿ ನಾಯಕರ ಮೌನ ಹಿಂದುಳಿದವರ ಬಗ್ಗೆ ಹಾಗೂ ನಾರಾಯಣ ಗುರುಗಳ ಬಗ್ಗೆ ಅವರಿಗಿರುವ ಕಾಳಜಿಯನ್ನು ಅನುಮಾನದಿಂದ ನೋಡುವಂತಾಗಿದೆ ಎಂದಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯನ್ನು ಭಕ್ತಿಯಿಂದ ಆರಾಧನೆ ಮಾಡುವ ಬಹುಸಂಖ್ಯೆಯ ಹಿಂದುಳಿದ ವರ್ಗದವರ ಮನಸಿನ ಭಾವನೆಗೆ ಧಕ್ಕೆಯಾಗಿದೆ. ಇದೊಂದು ಗಂಭೀರ ವಿಷಯವಾಗಿದ್ದು ಸರಕಾರವು ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ಮಾಡಿಕೊಡುವುದರ ಮೂಲಕ ಅವರಿಗೆ ಗೌರವ ಸಲ್ಲಿಸಬೇಕೆಂದು ಸೊರಕೆ ಆಗ್ರಹಿಸಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »