TOP STORIES:

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ


ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ ಸ್ಮರಣಾರ್ಥ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಜರುಗಿತು.

ವಿಶುಕುಮಾರ್ ರವರು ಅತ್ಯಲ್ಪ ಕಾಲ ಬದುಕಿದರೂ, ಅವರು ಬದುಕಿದ ರೀತಿ ಈ ಸಮಾಜಕ್ಕೆ ಮಾದರಿ. ನೇರಾನೇರ ವ್ಯಕ್ತಿತ್ವದ, ಪ್ರಶ್ನಾತೀತ ವ್ಯಕ್ತಿಯಾಗಿರುವ, ಈ ನಾಡು ಕಂಡ ಶ್ರೇಷ್ಠ ಸಾಹಿತಿಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಅವರ ಹೆತ್ತವರು ಪೂಜನೀಯರು ಎಂದು ವಿಶುಕುಮಾರ್ ಪ್ರಶಸ್ತಿ ಯನ್ನು ಸ್ವೀಕರಿಸಿ ಮಾತನಾಡಿದ ಇತಿಹಾಸ ಮತ್ತು ಜನಪದ ಸಂಶೋಧಕರು, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ಸಂಚಯಗಿರಿ ಬಂಟ್ವಾಳದ ಅಧ್ಯಕ್ಷರಾಗಿರುವ ಡಾ.ತುಕರಾಮ ಪೂಜಾರಿಯವರು ಅಭಿಮತ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆಗೈದು ಮಾತನಾಡಿದ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ರಿ ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್ ಕೊಲ್ಯರವರು ಈ ಕರಾವಳಿಯಲ್ಲಿ ಹುಟ್ಟಿ ಬೆಳೆದ ಓರ್ವ ಅದ್ಭುತ ಸಾಹಿತಿಯ ಹೆಸರನ್ನು ನೆನಪಿಸುವ ಈ ಕಾರ್ಯಕ್ರಮ ಬಹಳ ಅರ್ಥಪೂರ್ಣ ಎಂದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ಯು.ಟಿ.ಖಾದರ್ ರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳು, ಶಿಕ್ಷಣ, ಸಾಹಿತ್ಯ, ಔದ್ಯೋಗಿಕ ಕ್ಷೇತ್ರದಲ್ಲಿ ಯುವಪೀಳಿಗೆಗಳ ಅಭ್ಯುದಯಕ್ಕೆ ಮಾದರಿ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತಿರುವ ಯುವಸಾಹಿತಿ ಶ್ರೀ ಇಂದುಚೇತನ ಬೋರುಗುಡ್ಡೆ ಇವರಿಗೆ ಪ್ರದಾನಗೈಯಲಾಯಿತು.

ವಿಶುಕುಮಾರ್ ಪ್ರಶಸ್ತಿ ಪ್ರದಾನಗೈದ ಶಿಕ್ಷಣ ತಜ್ಞ, ರಂಗಭೂಮಿ ಕಲಾವಿದರೂ ಆಗಿರುವ ಶ್ರೀ ಮಹಾಬಲೇಶ್ವರ ಟಿ ಹೆಬ್ಬಾರ್ ರವರು ಯಾವುದೇ ಪ್ರಶಸ್ತಿಗಳಿಗೆ ತನ್ನದೇ ಆದ ಮೌಲ್ಯಗಳಿವೆ, ತೂಕಗಳಿವೆ. ಈ ನಾಡು ಕಂಡ ಶ್ರೇಷ್ಠ ಸಾಹಿತಿಯ ಹೆಸರಿನಲ್ಲಿ ಕೊಡಮಾಡಲ್ಪಡುವ ಪ್ರಶಸ್ತಿಯು ಅರ್ಹ ವ್ಯಕ್ತಿಗೆ, ಸೂಕ್ತ ಸಮಯದಲ್ಲಿ ಒದಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಶ್ರೀ ಭಾಸ್ಕರ್ ರೈ ಕುಕ್ಕುವಳ್ಳಿಯವರು ಯುವಸಾಹಿತಿ ಪ್ರಶಸ್ತಿಯನ್ನು ಪ್ರದಾನಗೈದು ಶುಭಾಶಂಸನೆಯ ನುಡಿಗಳನ್ನಾಡಿದರು.

ವಿಶುಕುಮಾರ್ ರವರ ಸಾಹಿತ್ಯ ಕ್ಷೇತ್ರದ ನೆನಪು ಇಂದಿನವರೆಗೂ ಶಾಶ್ವತವಾಗಿ ನೆಲೆಸುವಂತೆ ಹಗಲಿರುಳು ಶ್ರಮಿಸಿದ ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಪ್ರಭಾಕರ ನೀರುಮಾರ್ಗ ಮತ್ತು ಶ್ರೀ ಟಿ. ಶಂಕರ ಸುವರ್ಣರವರನ್ನು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯುವವಾಹಿನಿ ರಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ.ಯವರು ನಮ್ಮ ಸಮಾಜದಲ್ಲಿ ಸಾಹಿತ್ಯದ ಯುವಪ್ರತಿಭೆಗಳು ಮತ್ತಷ್ಟು ಬೆಳಕಿಗೆ ಬರಬೇಕು, ಸಮಾಜದ ಅಂಕುಡೊಂಕುಗಳು, ಭ್ರಷ್ಟತೆಗಳನು ಸರಿಪಡಿಸುವ ಸಾಮರ್ಥ್ಯ ಲೇಖನಿಗಿದೆ. ಸಾಹಿತ್ಯವೆಂಬುದು ಒಂದು ಶಕ್ತಿ ಎಂದು ಈ ಮೂಲಕ ಯುವವಾಹಿನಿಯ ಧ್ಯೇಯೋದ್ದೇಶಗಳಲ್ಲಿ ಸಾಹಿತ್ಯದ ಅಗತ್ಯತೆಯನ್ನು ಅರುಹಿದರು.

ಕಾರ್ಯಕ್ರಮದ ಆರಂಭದಲ್ಲಿ ಯುವವಾಹಿನಿ ರಿ ಕೊಲ್ಯ ಘಟಕದ ಸದಸ್ಯರು ಗುರುಶ್ಲೋಕ ಮತ್ತು ನಾಡಗೀತೆಯನ್ನು ಹಾಡಿದರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸ್ವಾಗತಿಸಿದರು. ಯುವವಾಹಿನಿ ರಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಲಹೆಗಾರರು ಆಗಿರುವ ಟಿ.ಶಂಕರ್ ಸುವರ್ಣರವರು ಪ್ರಸ್ತಾವನೆಗೈದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನ ಹೊಂದಿ ಯುವವಾಹಿನಿ ರಿ ಕೊಲ್ಯ ಘಟಕದ ಮಾಜಿ ಕಾರ್ಯದರ್ಶಿಯಾಗಿರುವ ಆನಂದ್ ಆಮೀನ್ ಸೋಮೇಶ್ವರರವರಿಗೆ ನುಡಿನಮನವನ್ನು ಸಲ್ಲಿಸಿ ಒಂದು ನಿಮಿಷದ ಮೌನಾಚರಣೆನ್ನು ನಡೆಸಲಾಯಿತು.

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕೋಶಾಧಿಕಾರಿಯಾದ ಶ್ರೀ ಮನೋಜ್ ರವರು ವಿಶುಕುಮಾರ್ ಪ್ರಶಸ್ತಿ ಪಡೆದ ಡಾ.ತುಕರಾಮ್ ಪೂಜಾರಿಯವರ ಪರಿಚಯ ಪತ್ರವನ್ನು ವಾಚಿಸಿದರು. ಯುವವಾಹಿನಿ ರಿ ಕೊಲ್ಯ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶ್ರೀ ಜೀವನ್ ಕೊಲ್ಯರವರು ಯುವಸಾಹಿತಿ ಪ್ರಶಸ್ತಿಗೆ ಭಾಜನರಾದ ಶ್ರೀ ಇಂದುಚೇತನ ಬೋರುಗುಡ್ಡೆಯವರ ಪರಿಚಯ ಪತ್ರವನ್ನು ವಾಚಿಸಿದರು.

ಅಕ್ಷಯ ಚೆಂಡೆ ಬಳಗ ನೀರುಮಾರ್ಗ ಇವರಿಂದ ಮೂಡಿಬಂದ ಚೆಂಡೆ ನರ್ತನ ಸಭಿಕರ ಮನಸೂರೆಗೊಂಡಿತು. ಇದೇ ಸಂದರ್ಭದಲ್ಲಿ ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆಯ ಶಿಬಿರವನ್ನು ಆಯೋಜಿಸಲಾಯಿತು.

ಯುವವಾಹಿನಿ ರಿ ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಮೋಹನ್ ಮಾಡೂರುರವರು ಧನ್ಯವಾದ ಸಮರ್ಪಿಸಿದರು. ಪ್ರಜ್ಞಾ ಒಡಿಲ್ನಾಳ ಮತ್ತು ದಯಾನಂದ ಉಪ್ಪೂರು ಕಾರ್ಯಕ್ರಮ ನಿರೂಪಿಸಿದರು.  


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »