TOP STORIES:

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ


ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ ಸ್ಮರಣಾರ್ಥ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಜರುಗಿತು.

ವಿಶುಕುಮಾರ್ ರವರು ಅತ್ಯಲ್ಪ ಕಾಲ ಬದುಕಿದರೂ, ಅವರು ಬದುಕಿದ ರೀತಿ ಈ ಸಮಾಜಕ್ಕೆ ಮಾದರಿ. ನೇರಾನೇರ ವ್ಯಕ್ತಿತ್ವದ, ಪ್ರಶ್ನಾತೀತ ವ್ಯಕ್ತಿಯಾಗಿರುವ, ಈ ನಾಡು ಕಂಡ ಶ್ರೇಷ್ಠ ಸಾಹಿತಿಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಅವರ ಹೆತ್ತವರು ಪೂಜನೀಯರು ಎಂದು ವಿಶುಕುಮಾರ್ ಪ್ರಶಸ್ತಿ ಯನ್ನು ಸ್ವೀಕರಿಸಿ ಮಾತನಾಡಿದ ಇತಿಹಾಸ ಮತ್ತು ಜನಪದ ಸಂಶೋಧಕರು, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ಸಂಚಯಗಿರಿ ಬಂಟ್ವಾಳದ ಅಧ್ಯಕ್ಷರಾಗಿರುವ ಡಾ.ತುಕರಾಮ ಪೂಜಾರಿಯವರು ಅಭಿಮತ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆಗೈದು ಮಾತನಾಡಿದ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ರಿ ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್ ಕೊಲ್ಯರವರು ಈ ಕರಾವಳಿಯಲ್ಲಿ ಹುಟ್ಟಿ ಬೆಳೆದ ಓರ್ವ ಅದ್ಭುತ ಸಾಹಿತಿಯ ಹೆಸರನ್ನು ನೆನಪಿಸುವ ಈ ಕಾರ್ಯಕ್ರಮ ಬಹಳ ಅರ್ಥಪೂರ್ಣ ಎಂದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ಯು.ಟಿ.ಖಾದರ್ ರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳು, ಶಿಕ್ಷಣ, ಸಾಹಿತ್ಯ, ಔದ್ಯೋಗಿಕ ಕ್ಷೇತ್ರದಲ್ಲಿ ಯುವಪೀಳಿಗೆಗಳ ಅಭ್ಯುದಯಕ್ಕೆ ಮಾದರಿ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತಿರುವ ಯುವಸಾಹಿತಿ ಶ್ರೀ ಇಂದುಚೇತನ ಬೋರುಗುಡ್ಡೆ ಇವರಿಗೆ ಪ್ರದಾನಗೈಯಲಾಯಿತು.

ವಿಶುಕುಮಾರ್ ಪ್ರಶಸ್ತಿ ಪ್ರದಾನಗೈದ ಶಿಕ್ಷಣ ತಜ್ಞ, ರಂಗಭೂಮಿ ಕಲಾವಿದರೂ ಆಗಿರುವ ಶ್ರೀ ಮಹಾಬಲೇಶ್ವರ ಟಿ ಹೆಬ್ಬಾರ್ ರವರು ಯಾವುದೇ ಪ್ರಶಸ್ತಿಗಳಿಗೆ ತನ್ನದೇ ಆದ ಮೌಲ್ಯಗಳಿವೆ, ತೂಕಗಳಿವೆ. ಈ ನಾಡು ಕಂಡ ಶ್ರೇಷ್ಠ ಸಾಹಿತಿಯ ಹೆಸರಿನಲ್ಲಿ ಕೊಡಮಾಡಲ್ಪಡುವ ಪ್ರಶಸ್ತಿಯು ಅರ್ಹ ವ್ಯಕ್ತಿಗೆ, ಸೂಕ್ತ ಸಮಯದಲ್ಲಿ ಒದಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಶ್ರೀ ಭಾಸ್ಕರ್ ರೈ ಕುಕ್ಕುವಳ್ಳಿಯವರು ಯುವಸಾಹಿತಿ ಪ್ರಶಸ್ತಿಯನ್ನು ಪ್ರದಾನಗೈದು ಶುಭಾಶಂಸನೆಯ ನುಡಿಗಳನ್ನಾಡಿದರು.

ವಿಶುಕುಮಾರ್ ರವರ ಸಾಹಿತ್ಯ ಕ್ಷೇತ್ರದ ನೆನಪು ಇಂದಿನವರೆಗೂ ಶಾಶ್ವತವಾಗಿ ನೆಲೆಸುವಂತೆ ಹಗಲಿರುಳು ಶ್ರಮಿಸಿದ ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಪ್ರಭಾಕರ ನೀರುಮಾರ್ಗ ಮತ್ತು ಶ್ರೀ ಟಿ. ಶಂಕರ ಸುವರ್ಣರವರನ್ನು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯುವವಾಹಿನಿ ರಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ.ಯವರು ನಮ್ಮ ಸಮಾಜದಲ್ಲಿ ಸಾಹಿತ್ಯದ ಯುವಪ್ರತಿಭೆಗಳು ಮತ್ತಷ್ಟು ಬೆಳಕಿಗೆ ಬರಬೇಕು, ಸಮಾಜದ ಅಂಕುಡೊಂಕುಗಳು, ಭ್ರಷ್ಟತೆಗಳನು ಸರಿಪಡಿಸುವ ಸಾಮರ್ಥ್ಯ ಲೇಖನಿಗಿದೆ. ಸಾಹಿತ್ಯವೆಂಬುದು ಒಂದು ಶಕ್ತಿ ಎಂದು ಈ ಮೂಲಕ ಯುವವಾಹಿನಿಯ ಧ್ಯೇಯೋದ್ದೇಶಗಳಲ್ಲಿ ಸಾಹಿತ್ಯದ ಅಗತ್ಯತೆಯನ್ನು ಅರುಹಿದರು.

ಕಾರ್ಯಕ್ರಮದ ಆರಂಭದಲ್ಲಿ ಯುವವಾಹಿನಿ ರಿ ಕೊಲ್ಯ ಘಟಕದ ಸದಸ್ಯರು ಗುರುಶ್ಲೋಕ ಮತ್ತು ನಾಡಗೀತೆಯನ್ನು ಹಾಡಿದರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸ್ವಾಗತಿಸಿದರು. ಯುವವಾಹಿನಿ ರಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಲಹೆಗಾರರು ಆಗಿರುವ ಟಿ.ಶಂಕರ್ ಸುವರ್ಣರವರು ಪ್ರಸ್ತಾವನೆಗೈದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನ ಹೊಂದಿ ಯುವವಾಹಿನಿ ರಿ ಕೊಲ್ಯ ಘಟಕದ ಮಾಜಿ ಕಾರ್ಯದರ್ಶಿಯಾಗಿರುವ ಆನಂದ್ ಆಮೀನ್ ಸೋಮೇಶ್ವರರವರಿಗೆ ನುಡಿನಮನವನ್ನು ಸಲ್ಲಿಸಿ ಒಂದು ನಿಮಿಷದ ಮೌನಾಚರಣೆನ್ನು ನಡೆಸಲಾಯಿತು.

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕೋಶಾಧಿಕಾರಿಯಾದ ಶ್ರೀ ಮನೋಜ್ ರವರು ವಿಶುಕುಮಾರ್ ಪ್ರಶಸ್ತಿ ಪಡೆದ ಡಾ.ತುಕರಾಮ್ ಪೂಜಾರಿಯವರ ಪರಿಚಯ ಪತ್ರವನ್ನು ವಾಚಿಸಿದರು. ಯುವವಾಹಿನಿ ರಿ ಕೊಲ್ಯ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶ್ರೀ ಜೀವನ್ ಕೊಲ್ಯರವರು ಯುವಸಾಹಿತಿ ಪ್ರಶಸ್ತಿಗೆ ಭಾಜನರಾದ ಶ್ರೀ ಇಂದುಚೇತನ ಬೋರುಗುಡ್ಡೆಯವರ ಪರಿಚಯ ಪತ್ರವನ್ನು ವಾಚಿಸಿದರು.

ಅಕ್ಷಯ ಚೆಂಡೆ ಬಳಗ ನೀರುಮಾರ್ಗ ಇವರಿಂದ ಮೂಡಿಬಂದ ಚೆಂಡೆ ನರ್ತನ ಸಭಿಕರ ಮನಸೂರೆಗೊಂಡಿತು. ಇದೇ ಸಂದರ್ಭದಲ್ಲಿ ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆಯ ಶಿಬಿರವನ್ನು ಆಯೋಜಿಸಲಾಯಿತು.

ಯುವವಾಹಿನಿ ರಿ ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಮೋಹನ್ ಮಾಡೂರುರವರು ಧನ್ಯವಾದ ಸಮರ್ಪಿಸಿದರು. ಪ್ರಜ್ಞಾ ಒಡಿಲ್ನಾಳ ಮತ್ತು ದಯಾನಂದ ಉಪ್ಪೂರು ಕಾರ್ಯಕ್ರಮ ನಿರೂಪಿಸಿದರು.  


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »