TOP STORIES:

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ


ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ ಸ್ಮರಣಾರ್ಥ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಜರುಗಿತು.

ವಿಶುಕುಮಾರ್ ರವರು ಅತ್ಯಲ್ಪ ಕಾಲ ಬದುಕಿದರೂ, ಅವರು ಬದುಕಿದ ರೀತಿ ಈ ಸಮಾಜಕ್ಕೆ ಮಾದರಿ. ನೇರಾನೇರ ವ್ಯಕ್ತಿತ್ವದ, ಪ್ರಶ್ನಾತೀತ ವ್ಯಕ್ತಿಯಾಗಿರುವ, ಈ ನಾಡು ಕಂಡ ಶ್ರೇಷ್ಠ ಸಾಹಿತಿಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ ಅವರ ಹೆತ್ತವರು ಪೂಜನೀಯರು ಎಂದು ವಿಶುಕುಮಾರ್ ಪ್ರಶಸ್ತಿ ಯನ್ನು ಸ್ವೀಕರಿಸಿ ಮಾತನಾಡಿದ ಇತಿಹಾಸ ಮತ್ತು ಜನಪದ ಸಂಶೋಧಕರು, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ಸಂಚಯಗಿರಿ ಬಂಟ್ವಾಳದ ಅಧ್ಯಕ್ಷರಾಗಿರುವ ಡಾ.ತುಕರಾಮ ಪೂಜಾರಿಯವರು ಅಭಿಮತ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆಗೈದು ಮಾತನಾಡಿದ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ರಿ ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ್ ಕೊಲ್ಯರವರು ಈ ಕರಾವಳಿಯಲ್ಲಿ ಹುಟ್ಟಿ ಬೆಳೆದ ಓರ್ವ ಅದ್ಭುತ ಸಾಹಿತಿಯ ಹೆಸರನ್ನು ನೆನಪಿಸುವ ಈ ಕಾರ್ಯಕ್ರಮ ಬಹಳ ಅರ್ಥಪೂರ್ಣ ಎಂದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ಯು.ಟಿ.ಖಾದರ್ ರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳು, ಶಿಕ್ಷಣ, ಸಾಹಿತ್ಯ, ಔದ್ಯೋಗಿಕ ಕ್ಷೇತ್ರದಲ್ಲಿ ಯುವಪೀಳಿಗೆಗಳ ಅಭ್ಯುದಯಕ್ಕೆ ಮಾದರಿ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತಿರುವ ಯುವಸಾಹಿತಿ ಶ್ರೀ ಇಂದುಚೇತನ ಬೋರುಗುಡ್ಡೆ ಇವರಿಗೆ ಪ್ರದಾನಗೈಯಲಾಯಿತು.

ವಿಶುಕುಮಾರ್ ಪ್ರಶಸ್ತಿ ಪ್ರದಾನಗೈದ ಶಿಕ್ಷಣ ತಜ್ಞ, ರಂಗಭೂಮಿ ಕಲಾವಿದರೂ ಆಗಿರುವ ಶ್ರೀ ಮಹಾಬಲೇಶ್ವರ ಟಿ ಹೆಬ್ಬಾರ್ ರವರು ಯಾವುದೇ ಪ್ರಶಸ್ತಿಗಳಿಗೆ ತನ್ನದೇ ಆದ ಮೌಲ್ಯಗಳಿವೆ, ತೂಕಗಳಿವೆ. ಈ ನಾಡು ಕಂಡ ಶ್ರೇಷ್ಠ ಸಾಹಿತಿಯ ಹೆಸರಿನಲ್ಲಿ ಕೊಡಮಾಡಲ್ಪಡುವ ಪ್ರಶಸ್ತಿಯು ಅರ್ಹ ವ್ಯಕ್ತಿಗೆ, ಸೂಕ್ತ ಸಮಯದಲ್ಲಿ ಒದಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಶ್ರೀ ಭಾಸ್ಕರ್ ರೈ ಕುಕ್ಕುವಳ್ಳಿಯವರು ಯುವಸಾಹಿತಿ ಪ್ರಶಸ್ತಿಯನ್ನು ಪ್ರದಾನಗೈದು ಶುಭಾಶಂಸನೆಯ ನುಡಿಗಳನ್ನಾಡಿದರು.

ವಿಶುಕುಮಾರ್ ರವರ ಸಾಹಿತ್ಯ ಕ್ಷೇತ್ರದ ನೆನಪು ಇಂದಿನವರೆಗೂ ಶಾಶ್ವತವಾಗಿ ನೆಲೆಸುವಂತೆ ಹಗಲಿರುಳು ಶ್ರಮಿಸಿದ ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಪ್ರಭಾಕರ ನೀರುಮಾರ್ಗ ಮತ್ತು ಶ್ರೀ ಟಿ. ಶಂಕರ ಸುವರ್ಣರವರನ್ನು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯುವವಾಹಿನಿ ರಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ.ಯವರು ನಮ್ಮ ಸಮಾಜದಲ್ಲಿ ಸಾಹಿತ್ಯದ ಯುವಪ್ರತಿಭೆಗಳು ಮತ್ತಷ್ಟು ಬೆಳಕಿಗೆ ಬರಬೇಕು, ಸಮಾಜದ ಅಂಕುಡೊಂಕುಗಳು, ಭ್ರಷ್ಟತೆಗಳನು ಸರಿಪಡಿಸುವ ಸಾಮರ್ಥ್ಯ ಲೇಖನಿಗಿದೆ. ಸಾಹಿತ್ಯವೆಂಬುದು ಒಂದು ಶಕ್ತಿ ಎಂದು ಈ ಮೂಲಕ ಯುವವಾಹಿನಿಯ ಧ್ಯೇಯೋದ್ದೇಶಗಳಲ್ಲಿ ಸಾಹಿತ್ಯದ ಅಗತ್ಯತೆಯನ್ನು ಅರುಹಿದರು.

ಕಾರ್ಯಕ್ರಮದ ಆರಂಭದಲ್ಲಿ ಯುವವಾಹಿನಿ ರಿ ಕೊಲ್ಯ ಘಟಕದ ಸದಸ್ಯರು ಗುರುಶ್ಲೋಕ ಮತ್ತು ನಾಡಗೀತೆಯನ್ನು ಹಾಡಿದರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸ್ವಾಗತಿಸಿದರು. ಯುವವಾಹಿನಿ ರಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಲಹೆಗಾರರು ಆಗಿರುವ ಟಿ.ಶಂಕರ್ ಸುವರ್ಣರವರು ಪ್ರಸ್ತಾವನೆಗೈದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನ ಹೊಂದಿ ಯುವವಾಹಿನಿ ರಿ ಕೊಲ್ಯ ಘಟಕದ ಮಾಜಿ ಕಾರ್ಯದರ್ಶಿಯಾಗಿರುವ ಆನಂದ್ ಆಮೀನ್ ಸೋಮೇಶ್ವರರವರಿಗೆ ನುಡಿನಮನವನ್ನು ಸಲ್ಲಿಸಿ ಒಂದು ನಿಮಿಷದ ಮೌನಾಚರಣೆನ್ನು ನಡೆಸಲಾಯಿತು.

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕೋಶಾಧಿಕಾರಿಯಾದ ಶ್ರೀ ಮನೋಜ್ ರವರು ವಿಶುಕುಮಾರ್ ಪ್ರಶಸ್ತಿ ಪಡೆದ ಡಾ.ತುಕರಾಮ್ ಪೂಜಾರಿಯವರ ಪರಿಚಯ ಪತ್ರವನ್ನು ವಾಚಿಸಿದರು. ಯುವವಾಹಿನಿ ರಿ ಕೊಲ್ಯ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶ್ರೀ ಜೀವನ್ ಕೊಲ್ಯರವರು ಯುವಸಾಹಿತಿ ಪ್ರಶಸ್ತಿಗೆ ಭಾಜನರಾದ ಶ್ರೀ ಇಂದುಚೇತನ ಬೋರುಗುಡ್ಡೆಯವರ ಪರಿಚಯ ಪತ್ರವನ್ನು ವಾಚಿಸಿದರು.

ಅಕ್ಷಯ ಚೆಂಡೆ ಬಳಗ ನೀರುಮಾರ್ಗ ಇವರಿಂದ ಮೂಡಿಬಂದ ಚೆಂಡೆ ನರ್ತನ ಸಭಿಕರ ಮನಸೂರೆಗೊಂಡಿತು. ಇದೇ ಸಂದರ್ಭದಲ್ಲಿ ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆಯ ಶಿಬಿರವನ್ನು ಆಯೋಜಿಸಲಾಯಿತು.

ಯುವವಾಹಿನಿ ರಿ ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಮೋಹನ್ ಮಾಡೂರುರವರು ಧನ್ಯವಾದ ಸಮರ್ಪಿಸಿದರು. ಪ್ರಜ್ಞಾ ಒಡಿಲ್ನಾಳ ಮತ್ತು ದಯಾನಂದ ಉಪ್ಪೂರು ಕಾರ್ಯಕ್ರಮ ನಿರೂಪಿಸಿದರು.  


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »