TOP STORIES:

ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿ ದಿನ ಸೆಪ್ಟೆಂಬರ್21 ಇಂದು


ಮ. ವ.1104 ರ ಕನ್ನಿ 5ನೇ ದಿನ ಬೆಳಗಿನಿಂದಲೇ ಆಕಾಶವು ತೆಳುವಾದ ಮೊಡದಿಂದ ಕೂಡಿತ್ತು. ಮಧ್ಯಾಹ್ನವಾಗುತ್ತಿದ್ದಂತೆ ತುಂತುರು ಹನಿಗಳು ಬೀಳಲಾರಂಭಿಸಿದವು. ಗುರುಗಳು ಮಹಾನಿರ್ವಾಣಕ್ಕೆ ಪ್ರಾಪ್ತಿಯಾಗುವುದನ್ನು ಪ್ರಕೃತಿ ಸೂಚಿಸುವಂತೆ ತೋರುತ್ತಿತ್ತು. ಗುರುಗಳು ಪ್ರಸನ್ನರಾಗಿಯೇ ಇದ್ದರು. ಗುರುದೇವರು ಮೊದಲೇ ಸೂಚಿಸಿದ್ದಂತೆ ಆಶ್ರಮದಲ್ಲಿದ್ದ ಎಲ್ಲರಿಗೂ ಊಟವನ್ನು ಬಡಿಸಿದರು. ಪ್ರತಿಯೊಬ್ಬರ ಊಟವೂ ಆಯಿತು. ಕೆಲವು ದಿನಗಳಿಂದ ಹೆಚ್ಚಾಗಿ ಮೌನದಲ್ಲಿದ ಅವರು ಮಧ್ಯಾಹ್ನ ಶಿಷ್ಯರೊಂದಿಗೆ ಸ್ವಲ್ಪ ಮಾತನಾಡಿದರು. 3 ಗಂಟೆಯ ಸಮಯ ಆಗುತ್ತಿದ್ದಂತೆ ಶಿಷ್ಯರೊಂದಿಗೆ ತನಗೆ ಸಂಪೂರ್ಣ ಶಾಂತಿಯ ಅನುಭವ ವಾಗುತ್ತಿದೆ ಎಂದರು. ಅನೇಕ ಶಿಷ್ಯರು ಮಂತ್ರ ಪಠಣ ಮತ್ತು ಪ್ರಾರ್ಥನೆಗಳಲ್ಲಿ ನಿರತರಾಗಿದ್ದರು. 3.15 ಕ್ಕೆ ಗುರುಗಳು ಕುಳಿತುಕೊಳ್ಳಲು ಪ್ರಯತ್ನಿಸುತ್ತಿದ್ದಂತೆಯೆ ಬಳಿಯಲಿದ್ದವರ ಸಹಾಯದಿಂದ ಪದ್ಮಾಸನದಲ್ಲಿ ಕುಳಿತರು. ಶಿಷ್ಯರೆಲ್ಲರಿಗೂ ದೈವದಶಕವನ್ನು ಹಾಡಲು ಹೇಳಿದರು ದೈವದಶಕವನ್ನು ಹಾಡುತ್ತಿದ್ದಂತೆಯೇ ಹಾಗೆಯೇ ಧ್ಯಾನಸ್ಥರಾಗಿ ಕಣ್ಣುಗಳನ್ನು ನಿಧಾನವಾಗಿ ಮುಚ್ಚಿದರು. ಪದ್ಮಾಸನದಲ್ಲಿ ಧ್ಯಾನಸ್ಥರಾಗಿ ಯೋಗದಲ್ಲಿದ್ದ ಗುರುದೇವರು ಶಾಂತ ಚಿತ್ತದಿಂದ ಮಹಾಸಮಾಧಿಗೆ ಪ್ರಾಪ್ತರಾದರು.

ಮಹಾ ಸಮಾಧಿಯ ಈ ದಿನ ಕೇರಳದಲ್ಲಿ ಸಾರ್ವತ್ರಿಕ ರಜಾದಿನ. ವಿಶ್ವಾದ್ಯಂತ ಇಂದು ಸಾತ್ವಿಕ ಆಹಾರವನ್ನು ಸೇವಿಸಿ ಪೂಜೆ ಪ್ರಾರ್ಥನೆಯ ಮೂಲಕ ಗುರುಸ್ಮರಣೆ ಮಾಡುತ್ತಾರೆ ನಾವೂ ಕೂಡ ಈ ಪುಣ್ಯ ಕಾರ್ಯವನ್ನು ಮಾಡುವ.

ಥಿಯೋಸೊಫಿಕಲ್ ಸೊಸೈಟಿಯ ಎನ್ನಿಬೆಸಂಟ್ ತಮ್ಮ ಅಧಿಕೃತ ವರ್ತಮಾನ ಪತ್ರಿಕೆಯಾದ ಸನಾತನ ಧರ್ಮದಲ್ಲಿ ನಾರಾಯಣ ಗುರುಗಳು ಸಮಾಧಿಯಾದಾಗ ಹೀಗೆ ಬರೆಯುತ್ತಾರೆ. ” ಅವರೊಬ್ಬರು ಪ್ರಕಾಶಮಯ ಪೂರ್ಣ ಸೂರ್ಯನೇ ಆಗಿದ್ದರೆ… ಅವರು ಯೋಗದಲ್ಲಿ ಪತಂಜಲಿ. ಜ್ಞಾನದಲ್ಲಿ ಶಂಕರ, ತ್ಯಾಗದಲ್ಲಿ ಬುದ್ಧ, ಸ್ಥಿರತೆಯಲ್ಲಿ ನಭಿ, ಮಾನವ ಸೇವೆಯಲ್ಲಿ ಜೀಸಸ್,… ಅವರು ದೇವರು. ಮನುಷ್ಯ ರೂಪಧಾರಣೆ ಮಾಡಿದ ಅವತಾರ ಪುರುಷರಾದ ಅವರು ಮಹಿಮಾಯುಕ್ತ ತೇಜಸ್ಸಿನ ತನ್ನ ಜೀವನೊದ್ಧೇಶಗಳನ್ನು ಪೂರೈಸಿ, ಎಲ್ಲಿಂದ ಬಂದಿದ್ದರೋ ಅಲ್ಲಿಗೆ ತೆರಳಿದರು. ….ನಿಜವಾಗಿಯೂ ಅವರೊಬ್ಬ ಅವತಾರಿ. ಮನುಷ್ಯರಲ್ಲಿ ದೇವರು. ಭವಿಷತ್ತಿನ ಭಾರತ ಅವರನ್ನು ದೇವರಾಗಿ ಪೂಜಿಸುವುದು.”

(ಆಧಾರ ಶ್ರೀ ನಾರಾಯಣ ಗುರು ವಿಜಯ ದರ್ಶನ: ಬಾಬು ಶಿವಪೂಜಾರಿ)

✍ ರಾಜೇಂದ್ರ ಚಿಲಿಂಬಿ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »