TOP STORIES:

FOLLOW US

ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿ ದಿನ ಸೆಪ್ಟೆಂಬರ್21 ಇಂದು


ಮ. ವ.1104 ರ ಕನ್ನಿ 5ನೇ ದಿನ ಬೆಳಗಿನಿಂದಲೇ ಆಕಾಶವು ತೆಳುವಾದ ಮೊಡದಿಂದ ಕೂಡಿತ್ತು. ಮಧ್ಯಾಹ್ನವಾಗುತ್ತಿದ್ದಂತೆ ತುಂತುರು ಹನಿಗಳು ಬೀಳಲಾರಂಭಿಸಿದವು. ಗುರುಗಳು ಮಹಾನಿರ್ವಾಣಕ್ಕೆ ಪ್ರಾಪ್ತಿಯಾಗುವುದನ್ನು ಪ್ರಕೃತಿ ಸೂಚಿಸುವಂತೆ ತೋರುತ್ತಿತ್ತು. ಗುರುಗಳು ಪ್ರಸನ್ನರಾಗಿಯೇ ಇದ್ದರು. ಗುರುದೇವರು ಮೊದಲೇ ಸೂಚಿಸಿದ್ದಂತೆ ಆಶ್ರಮದಲ್ಲಿದ್ದ ಎಲ್ಲರಿಗೂ ಊಟವನ್ನು ಬಡಿಸಿದರು. ಪ್ರತಿಯೊಬ್ಬರ ಊಟವೂ ಆಯಿತು. ಕೆಲವು ದಿನಗಳಿಂದ ಹೆಚ್ಚಾಗಿ ಮೌನದಲ್ಲಿದ ಅವರು ಮಧ್ಯಾಹ್ನ ಶಿಷ್ಯರೊಂದಿಗೆ ಸ್ವಲ್ಪ ಮಾತನಾಡಿದರು. 3 ಗಂಟೆಯ ಸಮಯ ಆಗುತ್ತಿದ್ದಂತೆ ಶಿಷ್ಯರೊಂದಿಗೆ ತನಗೆ ಸಂಪೂರ್ಣ ಶಾಂತಿಯ ಅನುಭವ ವಾಗುತ್ತಿದೆ ಎಂದರು. ಅನೇಕ ಶಿಷ್ಯರು ಮಂತ್ರ ಪಠಣ ಮತ್ತು ಪ್ರಾರ್ಥನೆಗಳಲ್ಲಿ ನಿರತರಾಗಿದ್ದರು. 3.15 ಕ್ಕೆ ಗುರುಗಳು ಕುಳಿತುಕೊಳ್ಳಲು ಪ್ರಯತ್ನಿಸುತ್ತಿದ್ದಂತೆಯೆ ಬಳಿಯಲಿದ್ದವರ ಸಹಾಯದಿಂದ ಪದ್ಮಾಸನದಲ್ಲಿ ಕುಳಿತರು. ಶಿಷ್ಯರೆಲ್ಲರಿಗೂ ದೈವದಶಕವನ್ನು ಹಾಡಲು ಹೇಳಿದರು ದೈವದಶಕವನ್ನು ಹಾಡುತ್ತಿದ್ದಂತೆಯೇ ಹಾಗೆಯೇ ಧ್ಯಾನಸ್ಥರಾಗಿ ಕಣ್ಣುಗಳನ್ನು ನಿಧಾನವಾಗಿ ಮುಚ್ಚಿದರು. ಪದ್ಮಾಸನದಲ್ಲಿ ಧ್ಯಾನಸ್ಥರಾಗಿ ಯೋಗದಲ್ಲಿದ್ದ ಗುರುದೇವರು ಶಾಂತ ಚಿತ್ತದಿಂದ ಮಹಾಸಮಾಧಿಗೆ ಪ್ರಾಪ್ತರಾದರು.

ಮಹಾ ಸಮಾಧಿಯ ಈ ದಿನ ಕೇರಳದಲ್ಲಿ ಸಾರ್ವತ್ರಿಕ ರಜಾದಿನ. ವಿಶ್ವಾದ್ಯಂತ ಇಂದು ಸಾತ್ವಿಕ ಆಹಾರವನ್ನು ಸೇವಿಸಿ ಪೂಜೆ ಪ್ರಾರ್ಥನೆಯ ಮೂಲಕ ಗುರುಸ್ಮರಣೆ ಮಾಡುತ್ತಾರೆ ನಾವೂ ಕೂಡ ಈ ಪುಣ್ಯ ಕಾರ್ಯವನ್ನು ಮಾಡುವ.

ಥಿಯೋಸೊಫಿಕಲ್ ಸೊಸೈಟಿಯ ಎನ್ನಿಬೆಸಂಟ್ ತಮ್ಮ ಅಧಿಕೃತ ವರ್ತಮಾನ ಪತ್ರಿಕೆಯಾದ ಸನಾತನ ಧರ್ಮದಲ್ಲಿ ನಾರಾಯಣ ಗುರುಗಳು ಸಮಾಧಿಯಾದಾಗ ಹೀಗೆ ಬರೆಯುತ್ತಾರೆ. ” ಅವರೊಬ್ಬರು ಪ್ರಕಾಶಮಯ ಪೂರ್ಣ ಸೂರ್ಯನೇ ಆಗಿದ್ದರೆ… ಅವರು ಯೋಗದಲ್ಲಿ ಪತಂಜಲಿ. ಜ್ಞಾನದಲ್ಲಿ ಶಂಕರ, ತ್ಯಾಗದಲ್ಲಿ ಬುದ್ಧ, ಸ್ಥಿರತೆಯಲ್ಲಿ ನಭಿ, ಮಾನವ ಸೇವೆಯಲ್ಲಿ ಜೀಸಸ್,… ಅವರು ದೇವರು. ಮನುಷ್ಯ ರೂಪಧಾರಣೆ ಮಾಡಿದ ಅವತಾರ ಪುರುಷರಾದ ಅವರು ಮಹಿಮಾಯುಕ್ತ ತೇಜಸ್ಸಿನ ತನ್ನ ಜೀವನೊದ್ಧೇಶಗಳನ್ನು ಪೂರೈಸಿ, ಎಲ್ಲಿಂದ ಬಂದಿದ್ದರೋ ಅಲ್ಲಿಗೆ ತೆರಳಿದರು. ….ನಿಜವಾಗಿಯೂ ಅವರೊಬ್ಬ ಅವತಾರಿ. ಮನುಷ್ಯರಲ್ಲಿ ದೇವರು. ಭವಿಷತ್ತಿನ ಭಾರತ ಅವರನ್ನು ದೇವರಾಗಿ ಪೂಜಿಸುವುದು.”

(ಆಧಾರ ಶ್ರೀ ನಾರಾಯಣ ಗುರು ವಿಜಯ ದರ್ಶನ: ಬಾಬು ಶಿವಪೂಜಾರಿ)

✍ ರಾಜೇಂದ್ರ ಚಿಲಿಂಬಿ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »